Paddy ಮುಂಗಾರು ವಿಳಂಬ, ಹಿಂಗಾರು ಆತಂಕ; ಕಟಾವಿಗೂ ಹೊಡೆತ


Team Udayavani, Oct 28, 2023, 6:30 AM IST

Paddy ಮುಂಗಾರು ವಿಳಂಬ, ಹಿಂಗಾರು ಆತಂಕ; ಕಟಾವಿಗೂ ಹೊಡೆತ

ಮಂಗಳೂರು: ಈ ಬಾರಿ ಮುಂಗಾರು ವಿಳಂಬವಾದ ಕಾರಣ ಭತ್ತದ ಬೇಸಾಯವೂ ವಿಳಂಬವಾಗಿ ನವರಾತ್ರಿ ಮುಗಿದ ಮೇಲೆ ಕಟಾವು ಕಾರ್ಯ ಆರಂಭವಾಗಿದೆ.

ಸಾಮಾನ್ಯವಾಗಿ ಮೇ ಅಂತ್ಯದ ವೇಳೆಗೆ ಬೇಸಾಯಕ್ಕೆ ಪೂರಕ ಚಟುವಟಿಕೆ ಆರಂಭವಾಗಿ ಜೂನ್‌ ಮಧ್ಯಾಂತರದಲ್ಲಿ ನಾಟಿ ನಡೆಯುತ್ತಿತ್ತು. ಆದರೆ ಈ ವರ್ಷ ಅವೆಲ್ಲವೂ ಅದಲು ಬದಲು. ಪೂರಕ ಕೆಲಸ ಆರಂಭವಾಗಿದ್ದು ಜೂನ್‌ 15ರ ಬಳಿಕ. ಜುಲೈ ಎರಡನೇ ವಾರದಲ್ಲಿ ಸುರಿದ ಧಾರಾಕಾರ ಮಳೆ, ನೆರೆಯ ಕಾರಣದಿಂದ ಕೆಲವೆಡೆ ಕೃಷಿಕರ ನೇಜಿ, ಬಿತ್ತಿದ ಬೀಜ ನೀರು ಪಾಲಾಗಿತ್ತು. ಅಂತಹ ರೈತರು ಮತ್ತೆ “ಆರಂಭ’ ಮಾಡುವಂತಾಗಿತ್ತು. ಅಷ್ಟೆಲ್ಲ ಆಗುವಾಗ ನಿರೀಕ್ಷಿತ ಮಳೆ ಸುರಿಯದೆ ಕೆರೆ, ಬಾವಿಗಳಿಂದ ಗದ್ದೆಗಳಿಗೆ ನೀರು ಹಾಯಿಸಿ ಬೆಳೆಯನ್ನು ರಕ್ಷಿಸುವ ಪರಿಸ್ಥಿತಿ ಎದುರಾಗಿತ್ತು. ಈ ಎಲ್ಲ ಕಾರಣಗಳಿಂದ ಕಟಾವು ಪ್ರಕ್ರಿಯೆಯೂ ವಿಳಂಬವಾಗಿದೆ.

ಡಿಸೆಂಬರ್‌ ವರೆಗೂ ಕಟಾವು
ಈ ಬಾರಿ ಬೆಳೆ ಚೆನ್ನಾಗಿ ಬಂದಿದ್ದು, ದೊಡ್ಡ ಮಟ್ಟದಲ್ಲಿ ರೋಗಗಳು ಕಾಡಿಲ್ಲ ಎಂಬ ಅಭಿಪ್ರಾಯವಿದೆ. ಮಳೆಯಿಂದಾಗಿ ಹಾನಿಗೀಡಾದ ಕೆಲವು ಪ್ರದೇಶಗಳಲ್ಲಿ ಎರಡೆರಡು ಬಾರಿ ಬಿತ್ತನೆ ಕಾರ್ಯಗಳು ನಡೆದಿದ್ದು, ಇಂತಹ ಸ್ಥಳಗಳಲ್ಲಿ ಈಗಷ್ಟೇ ಪೈರು ಕಾಳುಕಟ್ಟುತ್ತಿವೆ. ಇದರಿಂದಾಗಿ ಕೆಲವೆಡೆ ಕಟಾವಿಗೆ ಇನ್ನೂ ಕನಿಷ್ಠ ಒಂದೂವರೆಯಿಂದ ಎರಡು ತಿಂಗಳು ಕಾಯಬೇಕಿದೆ. ಬಹುಶಃ ಡಿಸೆಂಬರ್‌ ಅಂತ್ಯದ ವೇಳೆಗೆ ಕಟಾವು ಮುಗಿಯಬಹುದು ಎನ್ನುತ್ತಾರೆ ಕುಪ್ಪೆ ಪದವಿನ ಕೃಷಿಕ ಮನೋಹರ ಶೆಟ್ಟಿ ನಡಿಕಂಬಳ ಗುತ್ತು. ಸರಕಾರ ಭತ್ತಕ್ಕೆ ರೈತರಿಗೆ ಉತ್ತಮ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂಬುದು ಅವರ ಒತ್ತಾಯ.

ಮಳೆ ಬಂದರೆ ಸಂಕಷ್ಟ
ಈ ಬಾರಿ ಮುಂಗಾರಿನಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಹಿಂಗಾರು ಮಳೆಯಾದರೂ ನಿರೀಕ್ಷೆಯಂತೆ ಸುರಿದರೆ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರಕಬಹುದು. ಆದರೆ ಕಟಾವು ಸಂದರ್ಭ ಬಿರುಸಿನ ಮಳೆಯಾದರೆ ತೆನೆ ಉದುರುವುದು ಮಾತ್ರವಲ್ಲದೆ ಬೈಹುಲ್ಲು ಕೂಡ ಹಾಳಾಗುವ ಸಾಧ್ಯತೆಯಿದೆ. ಅಂದು ಸುರಿಯಬೇಕಿದ್ದ ಮಳೆ ಇಂದು ಸುರಿದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದೀತು ಎನ್ನುವುದು ರೈತರ ಆತಂಕ.

ಈ ವರ್ಷ ಹಿಂಗಾರಿನ ಸುಗ್ಗಿ ಬೇಸಾಯವೂ ವಿಳಂಬವಾಗಲಿದೆ. ಕೆಲವು ರೈತರು ಎರಡನೇ ಬೆಳೆ ತೆಗೆಯುವ ನಿರ್ಧಾರದಿಂದಲೇ ಹಿಂದೆ ಸರಿದಿದ್ದಾರೆ. ಮಳೆಯ ಹೊರತಾಗಿಯೂ ನೀರಿನಾಶ್ರಯ ಇರುವವರು ಮಾತ್ರ ಸುಗ್ಗಿಯ ಬೆಳೆಯ ಚಿಂತನೆಯಲ್ಲಿದ್ದಾರೆ.

– ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.