ಹಿಂದುಳಿದ ವರ್ಗಗಳ ವಿಭಾಗದ ಮಾಸಿಕ ಸಭೆ
Team Udayavani, Jan 25, 2018, 12:38 PM IST
ಮಹಾನಗರ: ಜಿಲ್ಲಾ ಕಾಂಗ್ರೆಸ್ ಇತರ ಹಿಂದುಳಿದ ವರ್ಗಗಳ ವಿಭಾಗದ ಮಾಸಿಕ ಸಭೆಯು ಇತ್ತೀಚೆಗೆ ಜರಗಿತು. ರಾಜ್ಯ ಒ.ಬಿ.ಸಿ. ಘಟಕದ ಪ್ರ. ಕಾರ್ಯದರ್ಶಿ ಸದಾಶಿವ ಉಳ್ಳಾಲ್ ಮಾತನಾಡಿ, ಮುಂಬರುವ ಚುನಾವಣೆಗೆ ಯಾವ ರೀತಿಯಲ್ಲಿ ಕಾರ್ಯಸನ್ನದ್ಧರಾಗಬೇಕು ಮತ್ತು ಜಿಲ್ಲಾ ಮಟ್ಟದ ಹಾಗೂ ರಾಜ್ಯಮಟ್ಟದ ಸಮಾವೇಶ ಮಾಡಲು ಪೂರ್ವ ತಯಾರಿ ಮಾಡುವ ಬಗ್ಗೆ ತಿಳಿಸಿದರು.
ಪಕ್ಷ ಸಂಘಟನೆಗೆ ಪಣ
ಒ.ಬಿ.ಸಿ. ಜಿಲ್ಲಾಧ್ಯಕ್ಷ ಧರಣೇಂದ್ರ ಕುಮಾರ್ ಅವರು ಮಾತನಾಡಿ, ಹಿಂದುಳಿದ ವರ್ಗಗಳ ಘಟಕವು ಮುಂಬರುವ ಚುನಾವಣೆಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಮಗದೊಮ್ಮೆ ಜಿಲ್ಲೆಯಲ್ಲಿ ಕಾಂಗ್ರೆಸ್ ಆಡಳಿತ ಬರುವಂತೆ ಶ್ರಮಿಸಬೇಕು ಎಂದು ಹೇಳಿದರು.
ಖಂಡನೆ
ಬಿಲ್ಲವ ಸಮುದಾಯದ ಕಾರಣಿಕ ದೈವವಾದ ಕೋಟಿ-ಚೆನ್ನಯರ ಭಾವ ಚಿತ್ರವನ್ನು ಬಿಜೆಪಿಯವರು ತಮ್ಮ ಪಕ್ಷದ
ಪ್ರಣಾಳಿಕೆ ಸಭೆಯ ಬ್ಯಾನರ್ನಲ್ಲಿ ಮಾತ್ರ ಸೀಮಿತವಾಗಿಸಿಕೊಂಡು ಸಮುದಾಯದ ಯುವಕರನ್ನು ದಿಕ್ಕು ತಪ್ಪಿಸಿ ಅಪರಾಧಿ ಕೃತ್ಯಗಳಲ್ಲಿ ತೊಡಗುವಂತೆ ಪ್ರೇರೇಪಿಸಿ ಜೈಲುಪಾಲಾಗುವಂತೆ ಮಾಡುತ್ತಾರೆ. ಇದನ್ನು ಹಿಂದುಳಿದ ವರ್ಗದ ಜನರು ಖಂಡಿಸುತ್ತೇವೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್ ಇವರು ಸೂಕ್ತ ಸಲಹೆಗಳನ್ನು ನೀಡಿದರು. ಉಳ್ಳಾಲ ಬ್ಲಾಕ್ನ ಗ್ರಾಮ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆದೇಶ ಪತ್ರವನ್ನು ಬ್ಲಾಕ್ನ ಅಧ್ಯಕ್ಷ ದಿನೇಶ್ ಕುಂಪಲ ಅವರು ಬಿಡುಗಡೆ ಮಾಡಿದರು.
ಜಿಲ್ಲಾ ವೀಕ್ಷಕರಾದ ರಾಜೇಶ್ ಬಾಳೆಕಾರ್ ಬಿ.ಬಿ.ಸಿ. ರಾಜ್ಯ ಕಾರ್ಯದರ್ಶಿ ನೀಲಯ್ಯ ಅಗರಿ, ಜಿಲ್ಲಾ ವಕ್ತಾರ ಗಣೇಶ್
ಪೂಜಾರಿ, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ವಿಜಯಕುಮಾರ್ ಕಡೇ ಶಿವಾಲಯ, ಮೋಹಿನಿ ಗಟ್ಟಿ, ವಿಶ್ವನಾಥ ಕೋಟ್ಯಾನ್, ಪದ್ಮ ಕುಮಾರ್, ಜನಾರ್ದನ ಪೂಜಾರಿ, ಪದ್ಮನಾಭ ಕುಂಪಲ, ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಶೋಭಾ ಕೇಶವ್ ನಿರೂಪಿಸಿದರು. ಸುಂದರ ಸಿ. ಪೂಜಾರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ