ರಜಪೂತ ಠಾಕೂರ ಜನಾಂಗದ ಕೈಚಳಕ


Team Udayavani, Jan 14, 2019, 6:03 AM IST

14-january-7.jpg

ಮೂಡುಬಿದಿರೆ: ಸ್ವರಾಜ್ಯ ಮೈದಾನದ ಪುರಸಭಾ ಮಾರುಕಟ್ಟೆಯ ಪಕ್ಕದಲ್ಲಿರುವ ಜಾಗದಲ್ಲಿ 10-12 ಮಂದಿ ಕಮ್ಮಾರಿಕೆಯ ಕುಶಲಕರ್ಮಿಗಳು ಚಟುವಟಿಕೆ ಪ್ರಾರಂಭಿಸಿದ್ದಾರೆ. ಅಂದಹಾಗೆ ಇವರು ಮಧ್ಯಪ್ರದೇಶದ ಹೊಸಂಗಾಬಾದ್‌ ಜಿಲ್ಲೆಯ ಪಿತರಿಯಾ ಗ್ರಾಮದ ರಜಪೂತ ಠಾಕೂರ ಜನಾಂಗದವರು. ಕಮ್ಮಾರಿಕೆ ಇವರ ಕುಲಕಸುಬು.

ಮೈದಾನದಲ್ಲಿಯೇ ಹೊಂಡ ಮಾಡಿಕೊಂಡು ಇದ್ದಿಲು ತುಂಬಿಸಿ ಕುಲುಮೆ ಸಿದ್ದಮಾಡಿಕೊಂಡು ಘನವಾಹನಗಳ ಸ್ಪ್ರಿಂಗ್‌ಪ್ಲೇಟ್, ಶಾಫ್ಟ್‌ ಭಾಗಗಳನ್ನು ಬೆಂಕಿಯಲ್ಲಿ ಕಾಯಿಸಿ ಮೆದುವಾಗಿಸಿದ ತತ್‌ಕ್ಷಣ ಅದನ್ನು ಬೇಕಾದ ಆಕಾರಕ್ಕೆ ಹೊಂದಿಸಿಕೊಂಡು ಕತ್ತಿ, ಸುತ್ತಿಗೆ, ಮಚ್ಚು ಹೀಗೆ ಕಬ್ಬಿಣದ ತರಾವಳಿ ವಸ್ತುಗಳನ್ನು ನೋಡನೋಡುತ್ತಿದ್ದಂತೆಯೇ ತಯಾರಿಸುವ ಈ ಕುಶಲಿಗರಿಗೆ ಬಿಸಿಲ ಪರಿವೆಯೇ ಇಲ್ಲ. ಈ ಬಯಲು ಕಾರ್ಯಾಗಾರಕ್ಕೆ ಆಕಾಶವೇ ಸೂರು.

ಕಮ್ಮಾರಿಕೆಯೇ ಜೀವನ
ಊರಲ್ಲಿ ಸ್ವಲ್ಪ ಜಮೀನಿದೆ. ಆದರೆ ನೀರಿನ ಸಮಸ್ಯೆಯಿಂದಾಗಿ ಹೇಳಿಕೊಳ್ಳುವ ಬೆಳೆ ತೆಗೆಯಲು ಆಗುತ್ತಿಲ್ಲ. ಹಾಗಾಗಿ ಇವರು ತಮ್ಮ ಕಮ್ಮಾರಿಕೆಯನ್ನೇ ನೆಚ್ಚಿಕೊಂಡು ಊರೂರು ಅಲೆದಾಡುತ್ತ ಕಬ್ಬಿಣದ ಹತ್ಯಾರ್‌ಗಳನ್ನು ತಯಾರಿಸುವ ಕಾಯಕ ನಡೆಸುತ್ತ ಬಂದಿದ್ದಾರೆ. ನೋಡಲು ಮೂರು ನಾಲ್ಕು ಗುಂಪುಗಳಂತೆ ಕಂಡರೂ ಇವರೆಲ್ಲ ಒಂದೇ ಕುಟುಂಬ ಪರಿವಾರದವರು.

ಶಂಕರ್‌ ತಂಡದ ಹಿರಿಯವರು. ಅವರ ಪುತ್ರರಲ್ಲಿ ರಾಮ್‌ ಓದಿಲ್ಲ; ಚೋಟು ಏಳನೇ ತರಗತಿಗೆ ಓದು ಮುಗಿಸಿ ತಂದೆಯೊಂದಿಗೆ ಕಮ್ಮಾರಿಕೆ ನಡೆಸುತ್ತಿದ್ದಾರೆ. ಶಂಕರ್‌ ಅವರ ಪುತ್ರರು, ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಎಲ್ಲರೂ ತಂಡದಲ್ಲಿದ್ದಾರೆ.

ರಜೆಯಲ್ಲಿ ಕೆಲಸ
ಈ ಪುಟ್ಟ ಮಕ್ಕಳ ಶಿಕ್ಷಣದ ಕಥೆ ಏನು ? ಎಂದು ಕೇಳಿದಾಗ ಆ ಮಕ್ಕಳ ಐಡಿ ಕಾರ್ಡ್‌ ತೋರಿಸಿದ ಚೋಟು ‘ನಮ್ಮ ಮಕ್ಕಳು ಒಂದೂವರೆ ತಿಂಗಳ ರಜೆಯಲ್ಲಿ ನಮ್ಮೊಂದಿಗೆ ಇದ್ದಾರೆ. ಇವರು ಊರಲ್ಲಿ ಶಾಲೆಗೆ ಹೋಗುತ್ತಿದ್ದಾರೆ ಎಂದರು.

ಕರ್ನಾಟಕ ಅಚ್ಚುಮೆಚ್ಚು
ಕರ್ನಾಟಕ ಇವರಿಗೆ ಹಿಡಿಸಿದೆ. ಇಲ್ಲಿನ ಜನರೆಲ್ಲ ಉತ್ತಮ ನಡೆ ನುಡಿಯವರು, ವ್ಯಾಪಾರ ಒಳ್ಳೆಯದಾಗಿ ನಡೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಇನ್ನೊಂದೆರಡು ವಾರಗಳಲ್ಲಿ ಹುಬ್ಬಳ್ಳಿ ಮೂಲಕ ಇವರು ಸ್ವಸ್ಥಾನ ಸೇರುತ್ತಾರಂತೆ.

ಊರಿನಿಂದ ಊರಿಗೆ
ಶಂಕರ್‌ ಪರಿವಾರದವರು ಒಂದು ಊರಿನಲ್ಲಿ ಹೆಚ್ಚೆಂದರೆ ಮೂರು ನಾಲ್ಕು ದಿನ ನಿಲ್ಲತ್ತಾರೆ. ಮುಂದೆ ಐದಾರು ಕಿಲೋಮೀಟರ್‌ ದೂರದ ಊರಿನತ್ತ ಸಾಗುತ್ತಾರೆ. ಇದೊಂದು ರೀತಿಯಲ್ಲಿ ‘ಮೊಬೈಲ್‌ ಕಮ್ಮಾರ ಸಾಲೆ’ ಇದ್ದಂತಿದೆ. ಬಯಲಲ್ಲೇ ಅಡುಗೆ ಮಾಡಿಕೊಂಡು, ಅಲ್ಲೇ ಗುಡಾರ ಎಳೆದುಕೊಂಡು ನಿದ್ರಿಸುತ್ತಾರೆ.

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.