ಮೂಡುಬಿದಿರೆ: ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿ- 12 ಎಕ್ರೆ ಪ್ರದೇಶದಲ್ಲಿ ಕೃಷಿ ಮೇಳ

6 ವೇದಿಕೆಗಳಲ್ಲಿ ಭಾರತೀಯ ಸಾಂಸ್ಕೃತಿಕ ವೈವಿಧ್ಯ ಅನಾವರಣವಾಗಲಿದೆ

Team Udayavani, Dec 9, 2022, 10:20 AM IST

ಮೂಡುಬಿದಿರೆ: ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿ- 12 ಎಕ್ರೆ ಪ್ರದೇಶದಲ್ಲಿ ಕೃಷಿ ಮೇಳ

ಮೂಡುಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಡಿ. 21ರಿಂದ 27ರ ವರೆಗೆ ನಡೆಯಲಿರುವ “ಅಂತಾರಾಷ್ಟ್ರೀಯ ಸ್ಕೌಟ್ಸ್‌ ಗೈಡ್ಸ್‌ ಸಾಂಸ್ಕೃತಿಕ ಜಾಂಬೂರಿ’ ವೇಳೆ 12 ಎಕ್ರೆ ಜಾಗದಲ್ಲಿ ಕೃಷಿ ಮೇಳ ನಡೆಸಲು ಸಕಲ ಸಿದ್ಧತೆಗಳಾಗುತ್ತಿದೆ ಎಂದು ಜಾಂಬೂರಿ ಪ್ರಧಾನ ಕಾರ್ಯದರ್ಶಿ, ದ.ಕ. ಜಿಲ್ಲಾ ಸ್ಕೌಟ್ಸ್‌ ಗೈಡ್ಸ್‌ ಮುಖ್ಯ ಆಯುಕ್ತ ಡಾ| ಎಂ. ಮೋಹನ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಹೆಸರಿನ ಆವರಣದಲ್ಲಿ 4 ಎಕರೆ ಜಾಗದಲ್ಲಿ 100 ಬಗೆಯ ತರಕಾರಿಗಳ ಅತ್ಯಾಕರ್ಷಕ ನೈಜತೋಟ ಮೈತಳೆದಿದೆ. ಉಳಿದಂತೆ ಫಲ ಮತ್ತು ಪುಷ್ಪ ಪ್ರದರ್ಶನ, ವಿವಿಧ ಮಳಿಗೆಗಳು, ಎಜಿ ಕೊಡ್ಗಿ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಕೃಷಿ ಸಂಪತ್ತು
ದೇಶ ವಿದೇಶಗಳ ಬಾಳೆ, ತೆಂಗು, ಧಾನ್ಯ, 530 ವಿಧ ಭತ್ತ, ವಿವಿಧ ಗೆಡ್ಡೆಗೆಣಸುಗಳು, ಆಯುರ್ವೇದ ಮಹತ್ವದ ಹಣ್ಣು ಹಂಪಲುಗಳು, 8 ವಿವಿಧ ಲೆಟ್ಯೂಸ್‌ ಮತ್ತು ಬ್ರುಕೋಲಿ ಪ್ರದರ್ಶನಕ್ಕೆ ಸಿದ್ಧತೆ ನಡೆದಿದೆ.

ವಿಜ್ಞಾನ ವಸ್ತು ಪ್ರದರ್ಶನಗಳ ವಿಜ್ಞಾನಮೇಳ, ವಿವಿಧ ಭಾಷೆಗಳ ಪುಸ್ತಕ ಮೇಳ, ಕಲಾಮೇಳ, ಆಹಾರೋತ್ಸವ ಮೇಳಗಳನ್ನು ಏರ್ಪಡಿಸಲಾಗಿದ್ದು 6 ವೇದಿಕೆಗಳಲ್ಲಿ ಭಾರತೀಯ ಸಾಂಸ್ಕೃತಿಕ ವೈವಿಧ್ಯ ಅನಾವರಣವಾಗಲಿದೆ. ಎಲ್ಲ ವಯೋಮಾನದವರಿಗಾಗಿ, ಒಂದೇ ಕಡೆ ಎಲ್ಲ ವಸ್ತುಗಳು ಲಭ್ಯವಿರುವ ಮಾರಾಟ ಮಳಿಗೆಗಳು ತೆರೆದುಕೊಳ್ಳಲಿವೆ ಎಂದರು.

ಬೆಳಗ್ಗೆ 9ರಿಂದ ರಾತ್ರಿ 9ರ ವರೆಗೆ ಆಸಕ್ತರಿಗೆ ಮುಕ್ತ, ಉಚಿತ ಪ್ರವೇಶ, ಊಟೋಪಚಾರವೂ ಉಚಿತವಾಗಿದೆ. ಕೃಷಿ ಸಿರಿಯಲ್ಲಿ ಕೃಷಿ ಸಂಬಂಧಿತ ವಸ್ತು ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶವಿದೆ. ಕೇವಲ ಪ್ರದರ್ಶನ ಮಳಿಗೆಗಳಿಗೆ ಯಾವುದೇ ಶುಲ್ಕವಿಲ್ಲ. ಉಳಿದಂತೆ ನಿಗದಿತ, ಸಾಂಕೇತಿಕ ಶುಲ್ಕದೊಂದಿಗೆ 100 ಚದರ ಅಡಿಯ ಮಳಿಗೆಗಳನ್ನು ಪಡೆದುಕೊಳ್ಳಲು ಡಿ. 18ರ ಮುನ್ನ ಆಳ್ವಾಸ್‌ ದಾಖಲಾತಿ ವಿಭಾಗಕ್ಕೆ ಖುದ್ದಾಗಿ ಭೇಟಿ ನೀಡಬಹುದಾಗಿದೆ ಎಂದವರು ವಿವರಿಸಿದರು. ಕೃಷಿ ಮೇಳ ಸಮಿತಿ ಪ್ರಮುಖರಾದ ರಾಜವರ್ಮ ಬೈಲಂಗಡಿ, ಧನಕೀರ್ತಿ ಬಲಿಪ, ಸುಭಾಶ್ಚಂದ್ರ ಚೌಟ, ಉದಯ ದೇವಾಡಿಗ, ಚಂದ್ರಯ್ಯ ಆಚಾರ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.