ಮೂಡುಬಿದಿರೆ ಪುತ್ತಿಗೆ ಆನಡ್ಕದಲ್ಲಿ ಯಾಂತ್ರೀಕೃತ ಕೃಷಿ ಪ್ರಾತ್ಯಕ್ಷಿಕೆ


Team Udayavani, Jul 8, 2021, 7:12 PM IST

Moodbidre News, Dakshina Kannada

ಮೂಡುಬಿದಿರೆ : ಭತ್ತದ ಕೃಷಿಯಿಂದ ಯುವಕರು ವಿಮುಖರಾಗುತ್ತಿರುವ ಸನ್ನಿವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರೂವಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು `ಯಂತ್ರಶ್ರೀ ‘ ಯೋಜನೆಯ ಮೂಲಕ ಯಂತ್ರಗಳನ್ನು ಬಳಸಿ ಭತ್ತದ ಕೃಷಿಯನ್ನು ಲಾಭದಾಯಕವನ್ನಾಗಿಸಲು ಯುವಕರಿಗೆ, ಬಡವರಿಗೆ ಪ್ರೇರಣೆ, ಸಹಕಾರ ಸಹಿತ ಮಾರ್ಗದರ್ಶನ ನೀಡುತ್ತಿದ್ದಾರೆ’ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಹೇಳಿದರು.

ಸಮೀಪದ ಪುತ್ತಿಗೆಯ ಆನಡ್ಕ ದಿನೇಶ್ ಕುಮಾರ್ ಅವರ ಹೊಲದಲ್ಲಿ ಯಾಂತ್ರೀಕೃತ ಭತ್ತ ಬೇಸಾಯ ತರಬೇತಿ ಪ್ರಾತ್ಯಕ್ಷಿಕೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಎರಡು ನಾಟಿ ಯಂತ್ರಗಳ ಕಾರ್ಯಾಚರಣೆಗೆ ಟ್ರೇಯಲ್ಲಿ ಬೆಳೆಸಿರುವ ಭತ್ತದ ಸಸಿಗಳ ಮಡಿಗಳನ್ನು ದಿನೇಶ್ ಕುಮಾರ್ ಅವರಿಗೆ ಹಸ್ತಾಂತರಿಸಿ ಮಾತನಾಡಿದ ಅವರು ಕೃಷಿ ಅಳಿದುಹೋಗುವುದೋ ಎಂಬ ಭೀತಿಯು ಹೊಸ ಹೊಸ ಯಂತ್ರಗಳ ಪ್ರವೇಶದಿಂದಾಗಿ ದೂರವಾಗುತ್ತಿದೆ; ಮತ್ತೆ ಜನರು ಭತ್ತದ ಕೃಷಿಯತ್ತ ಮನಸ್ಸು ಮಾಡುವಂತಾಗಿದೆ’ ಎಂದರು.

ಇದನ್ನೂ ಓದಿ :ಒತ್ತಡದಿಂದ ಹೊರಬರುವುದಕ್ಕೆ ಸುಲಭ ಮಾರ್ಗ ಯಾವುದು..? ಮ್ಯಾನೇಜ್ ಮೆಂಟ್ ಅಂದರೆ ಏನು… 

ಯೋಜನೆಯ ಹಿರಿಯ ನಿರ್ದೇಶಕ ಗಣೇಶ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, `ಯಂತ್ರಶ್ರೀ’ ಕಾರ್ಯಕ್ರಮದ ಮೂಲಕ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಕಳ, ಮೂಡುಬಿದಿರೆ ಒಳಗೊಂಡಂತೆ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ವರ್ಷ 1000 ಎಕ್ರೆ ಹಡಿಲು ಭೂಮಿ ಸಾಗುವಳಿ ಆಗಿದ್ದರೆ ಈ ವರ್ಷ ಒಟ್ಟು 1750 ಎಕ್ರೆಯಷ್ಟು ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯಲಿದೆ; ಒಟ್ಟು 4000 ಎಕ್ರೆಯಲ್ಲಿ ಯಂತ್ರಗಳ ಮೂಲಕ ಕೃಷಿ ಕಾರ್ಯ ನಡೆಸುವ ಗುರಿ ಹೊಂದಲಾಗಿದೆ’ ಎಂದರು.

ಕೃಷಿ ಅಧಿಕಾರಿ ವಿ.ಎಸ್. ಕುಲಕರ್ಣಿ ಅವರು, ಕನಿಷ್ಟ ಒಂದು ದನವಾದರೂ ಸಾಕಿದರೆ ಮೂವತ್ತು ಎಕ್ರೆ ಭೂಮಿಯನ್ನು ಹಸನಾಗಿಸಬಹುದು; ಒಂದು ಬ್ಯಾರೆಲ್ ಜೀವಾಮೃತದ ಮೂಲಕ ಒಂದು ಎಕ್ರೆಯಲ್ಲಿ ಕೃಷಿ ಕಾರ್ಯ ನಡೆಸಲು ಸಾಧ್ಯವಿದೆ’ ಎಂದರು.

ಯೋಜನೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್ ಮಾತನಾಡಿ, ಭತ್ತದ ಬೀಜ ಬಿತ್ತನೆಯಿಂದ ಕಟಾವಿನವರೆಗೆ ಎಲ್ಲ ಕೃಷಿಕಾರ್ಯಗಳನ್ನೂ ಯಂತ್ರಗಳ ಮೂಲಕವೇ ನಡೆಸಲು ಕೃಷಿ ಇಲಾಖೆ ಮತ್ತು ಗ್ರಾಮಾಭಿವೃದ್ದಿ ಯೋಜನೆ ಜಂಟಿ ಕಾರ್ಯಾಚರಣೆ ನಡೆಸುತ್ತಿವೆ’ ಎಂದು ವಿವರ ನೀಡಿದರು.

ಗ್ರಾ.ಪಂ. ಸದಸ್ಯ ಜಗದೀಶ ಕೋಟ್ಯಾನ್, ರೈತ ಪ್ರಮುಖರಾದ ಧನಕೀರ್ತಿ ಬಲಿಪ, ರಾಜವರ್ಮ ಬೈಲಂಗಡಿ, ಮಿತ್ತಬೈಲು ವಾಸುದೇವ ನಾಯಕ್, ವಾದಿರಾಜ ಮಡ್ಮಣ್ಣಾಯ, ‘ಯಂತ್ರಶ್ರೀ’ ಮೇಲ್ವಿಚಾರಕ ಬೃಜೇಶ್, ಆನಡ್ಕ ಸುಧೀಶ್ ಕುಮಾರ್ ಉಪಸ್ಥಿತರಿದ್ದರು.

ರುಕ್ಕು ಮತ್ತು ತಂಡದವರು `ರಾವೋ ರಾವು ಕೊರುಂಗೋ ರಾವೆರೇನೆ ಕೇನುಜಲೇ ‘ ಪಾಡ್ದನ ಹಾಡಿದರು. ಮೂಡುಬಿದಿರೆ ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ ಸ್ವಾಗತಿಸಿದರು. ಮೇಲ್ವಿಚಾರಕ ವಿಠಲ್ ನಿರೂಪಿಸಿದರು. ಆನಡ್ಕದ ಬಾಕಿಮಾರು ಗದ್ದೆ ಸಹಿತ ಐದು ಎಕ್ರೆಯಷ್ಟು ವಿಸ್ತಾರದ ಹೊಲದಲ್ಲಿ ಯಂತ್ರದ ಮೂಲಕ ಕಜೆ ಜಯ ಭತ್ತದ ಸಸಿ ನಾಟಿ ಕಾರ್ಯನಡೆಸಲಾಯಿತು.

ಇದನ್ನೂ ಓದಿ : ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆಯಾಗಿ “ಶೋಭಾ”ಯಾನ ಆರಂಭ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.