ಮೂಡಬಿದಿರೆ: ಅಡಿಕೆ ಸಸಿಗಳಿಗೆ ವಿಚಿತ್ರ ರೋಗ


Team Udayavani, Sep 22, 2018, 10:13 AM IST

22-sepctember-2.jpg

ಮೂಡಬಿದಿರೆ: ಪುತ್ತಿಗೆ ಗ್ರಾ.ಪಂ. ವ್ಯಾಪ್ತಿಯ ಕೊಡ್ಯಡ್ಕ ಮಿತ್ತಬೈಲ್‌ನ ಆಗಸ್ಟಿನ್‌ ಪಿಂಟೋ ಅವರ ಅಡಿಕೆ ತೋಟಕ್ಕೆ ವಿಚಿತ್ರ ರೋಗ ಬಂದಿದೆ. ಎರಡು ಮೂರು ವರ್ಷಗಳ ಹಿಂದೆ ನೆಟ್ಟ ಅಡಿಕೆ ಸಸಿಗಳ ಸೋಗೆ ಹಳದಿ ಬಣ್ಣಕ್ಕೆ ತಿರುಗುತ್ತ, ಸುಟ್ಟ ಗಾಯಗಳಂತೆ ಕಂದು ಬಣ್ಣದ ಚುಕ್ಕಿಗಳು ಮೂಡುತ್ತ ಕ್ರಮೇಣ ಇಡೀ ಸೋಗೆಯೇ ಸುಟ್ಟುಹೋದಂತಾಗುತ್ತಿದೆ. ಕೆಲವೇ ವಾರಗಳಲ್ಲಿ ಅಡಿಕೆ ಗಿಡದ ಬುಡವೇ ಕಿತ್ತು ನೆಲಕ್ಕುರುಳುತ್ತಿವೆ. 400 ಗಿಡಗಳಿರುವ ತೋಟದಲ್ಲಿ ಈಗಾಗಲೇ 35-40 ಗಿಡಗಳು ಹೀಗೆ ಧರಾಶಾಯಿಯಾಗಿವೆ.

ಗಿಡ ಸಾಯುತ್ತಿರುವುದನ್ನು ಪರಿಶೀಲಿಸಿದಾಗ ನೆಲದಿಂದ ಗೇಣೆತ್ತರದಲ್ಲಿ ಗಿಡದ ಕಾಂಡ ಕೊಳೆತು ಹೋಗಿರುವುದು ಕಂಡು ಬರುತ್ತಿದೆ. ಜೋರಾಗಿ ಮಳೆ ಸುರಿಯುತ್ತಿರುವಾಗಲೇ ಆರಂಭವಾದ ಈ ರೋಗ ಈಗ ಜೋರಾದ ಬಿಸಿಲು ಕಾಯುತ್ತಿರುವ ವೇಳೆ ಇನ್ನಷ್ಟು ವ್ಯಾಪಕವಾಗಿ ಹರಡಿದ್ದು, ಹತ್ತಿರದ ತೆಂಗು, ಬಾಳೆಗಿಡಗಳಿಗೂ ವ್ಯಾಪಿಸುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

ಕೊಡ್ಯಡ್ಕದಲ್ಲಿ ಕೇವಲ ಆಗಸ್ಟಿನ್‌ ಅವರ ತೋಟದಲ್ಲಿ ಮಾತ್ರ ಈ ರೋಗ ಕಂಡು ಬಂದಿರುವುದಲ್ಲ. ಹತ್ತಿರದ ಗೋವರ್ಧನ ನಾಯಕ್‌, ಮೈಕಲ್‌ ಡಿ’ಸೋಜಾ ಮೊದಲಾದವರ ತೋಟಗಳಲ್ಲೂ  ಗಿಡಗಳು ನೆಲಕ್ಕು ರುಳುತ್ತಿವೆ. ಕೆಲವೆಡೆ ದೊಡ್ಡ ಮರಗಳಲ್ಲೂ ಈ ರೋಗ ಕಾಣಿಸಿಕೊಳ್ಳತೊಡಗಿದೆ.

ದರೆಗುಡೆಯಲ್ಲೂ ?
ಕೊಡ್ಯಡ್ಕ ಮಾತ್ರವಲ್ಲ, ಮೂಡಬಿದಿರೆಯಿಂದ ಪೂರ್ವಕ್ಕೆ ದರೆಗುಡ್ಡೆ ಪರಿಸರದ ತೋಟಗಳಲ್ಲೂ ಈ ರೋಗ ಕಾಣಿಸಿಕೊಂಡಿರುವುದಾಗಿ ಅಲ್ಲಿನ ಕೃಷಿಕರು ತಿಳಿಸಿದ್ದಾರೆ. ಬೆನ್ನಿ ಲೋಬೋ ಅವರ ತೋಟದ ದೊಡ್ಡ ಮರಗಳಲ್ಲಿ ಸೋಗೆ ಮೂಡುತ್ತಿರುವಾಗಲೇ ಹಳದಿ ಬಣ್ಣಕ್ಕೆ ತಿರುಗಿತ್ತಿವೆ. ಇನ್ನಷ್ಟು ತೋಟಗಳಿಗೆ ರೋಗ ವ್ಯಾಪಿಸುವ ಭಯ ಕಾಡುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಭರವಸೆ ಮಾತ್ರ
ಕೃಷಿವಿಜ್ಞಾನ ಕೇಂದ್ರಗಳ ಅಧಿಕಾರಿಗಳನ್ನೂ ಸಂಪರ್ಕಿಸಿದ್ದೇನೆ. ಬರುತ್ತೇವೆ ಎಂದಷ್ಟೇ ಭರವಸೆ ನೀಡುತ್ತಾರೆ. ಇನ್ನಷ್ಟು ಒತ್ತಾಯ ಮಾಡಿದರೆ ನಮ್ಮಲ್ಲಿ ವಿಜ್ಞಾನಿಗಳ ಕೊರತೆ ಇದೆ, ಕಾರ್ಯದೊತ್ತಡ ಇದೆ ಎನ್ನುತ್ತಾರೆ.
– ಆಗಸ್ಟಿನ್‌, ಕೃಷಿಕರು

ಮುಂದಿನ ವಾರ ಪರಿಶೀಲನೆ
ನಮ್ಮ ಇಲಾಖೆಯ ಮೂಡಬಿದಿರೆ ವಲಯದ ಅಧಿಕಾರಿ ಯೋಗೀಂದ್ರ ಅವರನ್ನು ಕೊಡ್ಯಡ್ಕ ಮಿತ್ತಬೈಲ್‌ಗೆ ಕಳುಹಿಸಿದ್ದೇವೆ. ಅವರು ಪರಿಶೀಲಿಸಿ ನೀಡಿದ ಸಲಹೆಗಳಿಂದ ತೋಟದ ಮಾಲಕರಿಗೆ ಸಮಾಧಾನವಾಗದ ಕಾರಣ ನಾವು ಕಾಸರಗೋಡು ಸಿಪಿಸಿಆರ್‌ಐ ವಿಜ್ಞಾನಿಗಳಲ್ಲಿ ವಿನಂತಿಸಿದ್ದು ಮುಂದಿನ ವಾರ ಅವರು ಸ್ಥಳಕ್ಕೆ ಭೇಟಿ ನೀಡಬಹುದು.
– ಎಚ್‌. ಆರ್‌. ನಾಯಕ್‌,
ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ
ಮಂಗಳೂರು

ಧನಂಜಯ ಮೂಡಬಿದಿರೆ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.