ಮೂಡಬಿದಿರೆ: 50ನೇ ಉಚಿತ ವೈದ್ಯಕೀಯ ತಪಾಸಣ ಶಿಬಿರ


Team Udayavani, Jan 22, 2018, 2:45 PM IST

22-Jan-15.jpg

ಮೂಡಬಿದಿರೆ: ವಿಧಾನ ಪರಿಷತ್‌ ಸರಕಾರಿ ಮುಖ್ಯಸಚೇತಕ ಐವನ್‌ ಡಿ’ಸೋಜಾ ನೇತೃತ್ವದಲ್ಲಿ ಅಲಂಗಾರು ಲಯನ್ಸ್‌ ಕ್ಲಬ್‌, ಜಿಲ್ಲಾ ಅಂಧತ್ವ ನಿವಾರಣಾ ಸಂಘ, ಮಂಗಳೂರು ಎ.ಜೆ. ಆಸ್ಪತ್ರೆಯ ಗೈನಕಾಲಜಿ ಮತ್ತು ಇತರ ವಿಭಾಗಗಳ ಸಹಕಾರದಲ್ಲಿ ಮೂಡಬಿದಿರೆ ಮೆನೇಜಸ್‌ ಕಾಂಪ್ಲೆಕ್ಸ್‌ನಲ್ಲಿರುವ ಜನಸ್ಪಂದನ ಕಚೇರಿಯ ಸಭಾಂಗಣದಲ್ಲಿ ರವಿವಾರ ಏರ್ಪಡಿಸಲಾಗಿದ್ದ 50ನೇ ವೈದ್ಯಕೀಯ ತಪಾಸಣ ಉಚಿತ ಶಿಬಿರವನ್ನು ಉದ್ಯಮಿ ಕೆ. ಶ್ರೀಪತಿ ಭಟ್‌ ಉದ್ಘಾಟಿಸಿದರು.

ಐವನ್‌ ಡಿ’ಸೋಜಾ, ಎ.ಜೆ. ಆಸ್ಪತ್ರೆಯ ಗೈನಕಾಲಜಿ ವಿಭಾಗ ಮುಖ್ಯಸ್ಥೆ ಡಾ| ಕವಿತಾ ಡಿ’ಸೋಜಾ, ಡಾ| ಸುನಂದಾ ಪ್ರಭು, ಅಲಂಗಾರು ಲಯನ್ಸ್‌ ಕ್ಲಬ್‌ ಅಧ್ಯಕ್ಷ ಜೆರಾಲ್ಡ್‌ ಲೋಬೋ, ಕಾರ್ಯದರ್ಶಿ ಸುಜಾತಾ ರಮೇಶ್‌, ಪಡುಮಾರ್ನಾಡು ಗ್ರಾ.ಪಂ. ಅಧ್ಯಕ್ಷ ಶ್ರೀನಾಥ್‌ ಸುವರ್ಣ, ಮೂಡಬಿದಿರೆ ಜಮೀಯತುಲ್‌ ಫಲಾಃ ಅಧ್ಯಕ್ಷ ಸಲೀಂ ಹಂಡೇಲು, ಬಜಪೆ ಗ್ರಾ.ಪಂ. ಸದಸ್ಯ ಸಿರಾಜ್‌, ಕಾಂಗ್ರೆಸ್‌ ಪಕ್ಷ ಪ್ರಮುಖರಾದ ಕೆಪಿಸಿಸಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಗುರುರಾಜ್‌ ಎಸ್‌., ಅಕ್ರಮ ಸಕ್ರಮ ಸಮಿತಿಯ ಸುಂದರ ಪೂಜಾರಿ, ವಕೀಲರಾದ ಹರೀಶ್‌ ಪಿ., ಪ್ರಕಾಶ್‌ ಪಿ., ಜಿಲ್ಲಾ ಯುವ ಇಂಟಕ್‌ ಅಧ್ಯಕ್ಷ ಪುನೀತ್‌ ಶೆಟ್ಟಿ, ತೆಂಕ ಎಕ್ಕಾರು ಗ್ರಾ.ಪಂ. ಸದಸ್ಯೆ ನಫಿಸಾ ಖಾನ್‌, ಜಿ.ಪಂ. ಮಾಜಿ ಸದಸ್ಯ ಫೆಲಿಕ್ಸ್‌ ಕರ್ಡೋಝಾ, ಜೆರಾಲ್ಡ್‌ ಲೋಬೋ, ಕಲ್ಲಮುಂಡ್ಕೂರು ಗ್ರಾ.ಪಂ. ಸದಸ್ಯ ಲಾಝರಸ್‌ ಡಿ’ಕೋಸ್ಟಾ, ಮೂಡಬಿದಿರೆ ಪುರಸಭಾ ನಾಮನಿರ್ದೇಶಿತ ಸದಸ್ಯ ಆಲ್ವಿನ್‌ ಮೆನೇಜಸ್‌ ಮೊದಲಾದವರಿದ್ದರು. 

ಡಾ| ಕವಿತಾ ಡಿ’ಸೋಜಾ ಮಾತನಾಡಿ, ಸೂಕ್ತವಾಗಿ ತಪಾಸಣೆ ಮಾಡಿಸಿಕೊಂಡು, ಅಗತ್ಯವಿದ್ದಲ್ಲಿ ಔಷಧ ಸೇವನೆ, ಶಸ್ತ್ರ
ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಜನರು ಆರೋಗ್ಯಕರ ಜೀವನವನ್ನು ನಡೆಸಲು ಕಾಳಜಿ ವಹಿಸಬೇಕು ಎಂದು ಹೇಳಿದರು.

ವಿಶೇಷವಾಗಿ ಮಹಿಳೆಯರ ಕ್ಯಾನ್ಸರ್‌ ಬಗ್ಗೆ ಅವರು ವಿವರಣೆ ನೀಡಿದರು. ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಮೂಡಿಸುವ ದೃಕ್‌ಶ್ರವಣ ಕಾರ್ಯಕ್ರಮ ಸಂಯೋಜಿಸಲಾಗಿತ್ತು. ಐವನ್‌ ಡಿ’ ಸೋಜಾ ಅವರು ಇದುವರೆಗಿನ ಶಿಬಿರಗಳ ವಿವರ ನೀಡಿದರು. ಇದುವರೆಗಿನ 49 ಉಚಿತ ವೈದ್ಯಕೀಯ ಶಿಬಿರಗಳನ್ನು ಗ್ರಾಮೀಣ ಪ್ರದೇಶಗಳಲ್ಲೇ ನಡೆಸಲಾಗಿದ್ದು 8,186 ಮಂದಿ ಫಲಾನುಭವಿಗಳಾಗಿದ್ದಾರೆ. 1,000ಕ್ಕೂ ಅಧಿಕ ಕೆಎಂಸಿ ಹೆಲ್ತ್‌ ಕಾರ್ಡ್‌ ಮಾಡಿಸಲಾಗಿದೆ. 1,500 ಮಂದಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗಿದೆ. 186 ಮಂದಿಗೆ ಉಚಿತ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಹಿಳೆಯರಲ್ಲಿ ವಿಶೇಷವಾಗಿ ಕಾಣಿಸಿಕೊಳ್ಳುವ ಕ್ಯಾನ್ಸರ್‌ ತಪಾಸಣೆ, ನಡೆಸಲಾಗಿದೆ. ಮೂಡಬಿದಿರೆಯಲ್ಲಿ ಇದೇ ಮೊದಲಾಗಿ ಉಚಿತ ಶಿಬಿರ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು. ರಾಜೇಶ್‌ ಕಡಲಕೆರೆ ನಿರೂಪಿಸಿದರು.

455 ಮಂದಿ ಭಾಗಿ
50ನೇ ಶಿಬಿರದಲ್ಲಿ 455 ಮಂದಿ ಪಾಲ್ಗೊಂಡಿದ್ದು ವಿವಿಧ ವಿಭಾಗಗಳಲ್ಲಿ 70 ಮಂದಿಯನ್ನು ಹೆಚ್ಚಿನ ತಪಾಸಣೆ ಮತ್ತು ಉಚಿತ ಚಿಕಿತ್ಸೆಗಾಗಿ ಜ. 24ರಂದು ಬೆಳಗ್ಗೆ 9.30ಕ್ಕೆ ಮೂಡಬಿದಿರೆ ಜನಸ್ಪಂದನ ಕಚೇರಿಯಿಂದ ಮಂಗಳೂರು ಎಜೆ
ಆಸ್ಪತ್ರೆಗೆ ಕರೆದೊಯ್ಯಲಾಗುವುದು . 50 ಶಿಬಿರಗಳಲ್ಲಿ ಒಟ್ಟು 8,661 ಮಂದಿ ಪಾಲ್ಗೊಂಡಂತಾಗಿದೆ ಎಂದು ಶಿಬಿರಾಂತ್ಯದಲ್ಲಿ ಪ್ರಕಟಿಸಲಾಯಿತು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.