Moodbidri: ನಾಳೆಯಿಂದ “ಸಪ್ತ’ ಮೇಳ ಸಮ್ಮಿಲಿತ “ಆಳ್ವಾಸ್‌ ವಿರಾಸತ್‌’

ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಅಣಿಯಾದ ವಿದ್ಯಾಕಾಶಿ

Team Udayavani, Dec 13, 2023, 7:05 AM IST

Moodbidri: ನಾಳೆಯಿಂದ “ಸಪ್ತ’ ಮೇಳ ಸಮ್ಮಿಲಿತ “ಆಳ್ವಾಸ್‌ ವಿರಾಸತ್‌’

ಮಂಗಳೂರು: ಈ ಬಾರಿ ಸಪ್ತಮೇಳಗಳ ಸಾಮೀಪ್ಯದೊಂದಿಗೆ ಸಾಂಸ್ಕೃತಿಕ ರಸದೌತಣ ಉಣಬಡಿಸುವ “ಆಳ್ವಾಸ್‌ ವಿರಾಸತ್‌-2023′ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಮೂಡುಬಿದಿರೆಯಲ್ಲಿ ಸರ್ವ ತಯಾರಿ ನಡೆಸಲಾಗಿದ್ದು, ಪ್ರತೀದಿನ ತಲಾ 1 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗಮಂದಿರದಲ್ಲಿ ನಡೆಯಲಿರುವ ವಿರಾಸತ್‌ ಅನ್ನು ಇತ್ತೀಚೆಗೆ ಹುತಾತ್ಮರಾದ ವೀರಯೋಧ ಕ್ಯಾ| ಎಂ.ವಿ. ಪ್ರಾಂಜಲ್‌ ಅವರಿಗೆ ಅರ್ಪಣೆ ಮಾಡಲಾಗಿದೆ.

ಡಿ. 14ರಿಂದ 17ರ  ವರೆಗೆ ಸಂಜೆ 5ರಿಂದ ರಾತ್ರಿ 10ರ ವರೆಗೆ ಸಾಂಸ್ಕೃತಿಕ ವೈಭವ ಅನಾವರಣಗೊಳ್ಳಲಿದ್ದು ಸಾವಿರಕ್ಕೂ ಮಿಕ್ಕಿದ ದೇಶ-ವಿದೇಶದ ಕಲಾವಿದರು ವಿವಿಧ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಬೆಳಗ್ಗೆ 9ರಿಂದ ರಾತ್ರಿ 10ರ ವರೆಗೆ ಸಪ್ತ ಮೇಳಗಳಾದ ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಮೇಳ, ಚಿತ್ರಕಲಾ ಮೇಳ, ಕಲಾಕೃತಿಗಳ ಪ್ರದರ್ಶನ ಹಾಗೂ ಛಾಯಾಚಿತ್ರಗಳ ಪ್ರದರ್ಶನಗಳು ಜನಮನ ಆಕರ್ಷಿಸಲಿವೆ.

ಡಿ. 14ರಂದು ಸಂಜೆ 5.45ಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ವಿರಾಸತ್‌ ಉದ್ಘಾಟಿಸಲಿದ್ದಾರೆ. ಸಂಜೆ 6.35ಕ್ಕೆ ಭವ್ಯ ಸಾಂಸ್ಕೃತಿಕ ಮೆರವಣಿಗೆ, ಸಾಂಸ್ಕೃತಿಕ ರಥ ಸಂಚಲನ ನಡೆಯಲಿದೆ. ಜಾತಿ, ಭಾಷೆ, ಊರು, ಕಸುಬಿಗೆ ಅನುಗುಣವಾಗಿ ಬಹಳಷ್ಟು ಜಾನಪದ ಕಲೆಗಳಿವೆ. ಇಂತಹ ಕಲೆಗಳಿಗೆ ಪ್ರೋತ್ಸಾಹ ನೀಡುವ ಆಶಯದಿಂದ ಈ ಬಾರಿಯ ವಿರಾಸತ್‌ ಮೆರವಣಿಗೆಯಲ್ಲಿ ನೂರಕ್ಕೂ ಮಿಕ್ಕಿದ ಕಲಾತಂಡಗಳು ಬರ ಲಿವೆ. 4 ಸಾವಿರಕ್ಕೂ ಅಧಿಕ ಕಲಾವಿದರು ಭಾಗವಹಿಸಲಿದ್ದಾರೆ.

ಡಿ. 15ರಂದು ಸಂಜೆ 6ರಿಂದ 8ರ ವರೆಗೆ ಚಲನಚಿತ್ರ ಹಿನ್ನೆಲೆ ಗಾಯಕ ಬೆನ್ನಿ ದಯಾಲ್‌ ಅವರಿಂದ “ಗಾನ ವೈಭವ’, ಡಿ. 16ರಂದು ಚಲನಚಿತ್ರ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌ ಅವರಿಂದ “ಭಾವ ಲಹರಿ’, ಡಿ. 17ರಂದು ಸಂಜೆ 5.15ಕ್ಕೆ ನಡೆಯುವ ಸಮಾರಂಭದಲ್ಲಿ ಆಳ್ವಾಸ್‌ ವಿರಾಸತ್‌-2023 ಪ್ರಶಸ್ತಿ ಪ್ರದಾನ ನಡೆಯಲಿದೆ.

ಈ ಬಾರಿ ಖ್ಯಾತ ವಯಲಿನ್‌ ವಾದಕ ಡಾ| ಮೈಸೂರು ಮಂಜುನಾಥ್‌, ಜನಪ್ರಿಯ ಬಾನ್ಸುರಿ ಮಾಂತ್ರಿಕ ಡಾ| ಪ್ರವೀಣ್‌ ಗೋಡ್ಖಿಂಡಿ ಹಾಗೂ ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಸಾಂಸ್ಕೃತಿಕ “ರಥ’ ಸಂಚಲನ-ರಥಾರತಿ
ಡಿ. 14ರ ಉದ್ಘಾಟನೆ ಬಳಿಕ ರಾತ್ರಿ 8.05ರಿಂದ 9ರ ವರೆಗೆ ಸಾಂಸ್ಕೃತಿಕ ರಥ ಸಂಚಲನವಿರಲಿದೆ. ಲೋಕ ಪೂಜಿತ ಶ್ರೀ ರಾಮ ಹಾಗೂ ಶ್ರೀಕೃಷ್ಣನ ವಿಗ್ರಹಗಳನ್ನು ಇಟ್ಟು ಸಾಂಸ್ಕೃತಿಕ ರಥ ಸಂಚಲನ ವಿರಾಸತ್‌ನ ಈ ಬಾರಿಯ ವಿಶೇಷ. ಮುಂಭಾಗ ದಲ್ಲಿ ವಿಘ್ನ ನಿವಾರಕ ವಿನಾಯಕನ ರಥವು ಸಾಗಲಿದೆ. ಜತೆಗೆ ಶ್ರೀ ಲಕ್ಷ್ಮೀ, ಸರಸ್ವತಿ ಹಾಗೂ ಹನುಮಂತನ ವಿಗ್ರಹಗಳಿರುವ 3 ಪಲ್ಲಕ್ಕಿಗಳು ಇರಲಿವೆ.

ಪಂಢರಾಪುರ, ಮೈಸೂರು ಹಾಗೂ ಹರೇರಾಮ ಹರೇಕೃಷ್ಣ ತಂಡದ ಭಜಕರಿಂದ ಭಜನೆ ನಡೆಯಲಿದೆ. ವೇದಿಕೆ ಸಮೀಪ ಬರುವಾಗ ಅದಕ್ಕೆ ರಥಾರತಿ ಆಗಲಿದೆ. ಅದಕ್ಕಾಗಿ ಹರಿದ್ವಾರದಿಂದ ಪ್ರಮುಖರು ಆಗಮಿಸಲಿದ್ದಾರೆ. ವೇದಿಕೆಯ ಬಲ ಭಾಗದಿಂದ ರಥ ಹೊರಟು ವೇದಿಕೆಯ ಎಡಭಾಗಕ್ಕೆ ತೆರಳಲಿದೆ. ವಿರಾಸತ್‌ನ ಕೊನೆಯ ದಿನ ಅದನ್ನು ಮತ್ತೆ ವಾಪಸ್‌ ಬಲ ಬದಿಗೆ ತಂದು ನಿಲ್ಲಿಸಲಾಗುತ್ತದೆ ಎಂದು ಡಾ| ಎಂ. ಮೋಹನ ಆಳ್ವ ತಿಳಿಸಿದ್ದಾರೆ.

ಸಪ್ತ ಮೇಳಗಳು
– ಕೃಷಿ ಮೇಳ , ಆಹಾರ ಮೇಳ , ಫಲಪುಷ್ಪ ಮೇಳ, ಕರಕುಶಲ-ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿಗಳ ಪ್ರದರ್ಶನ , ಛಾಯಾಚಿತ್ರಗಳ ಪ್ರದರ್ಶನ

 

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.