ಮೂಡಬಿದಿರೆ: ಮೆಸ್ಕಾಂ ಜನಸಂಪರ್ಕ ಸಭೆ


Team Udayavani, Mar 25, 2018, 9:43 AM IST

25-March-1.jpg

ಮೂಡಬಿದಿರೆ : ರೈತರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ತೋಡುವುದಾದರೆ ಒಂದರಿಂದ ಇನ್ನೊಂದಕ್ಕೆ 500 ಮೀಟರ್‌ ಅಂತರವಿದ್ದಲ್ಲಿ ಮಾತ್ರ ಗ್ರಾಮ ಪಂಚಾಯತ್‌ನಿಂದ ನಿರಾಕ್ಷೇಪಣೆ ಪತ್ರ ಸಿಗುತ್ತದೆ. ಆದರೆ ಸರಕಾರವೇ ತೋ ಡುವ ಕೊಳವೆ ಬಾವಿಗೆ ಈ ಮಿತಿ ಇರುವುದಿಲ್ಲ. ಈ ತಾರತಮ್ಯ ಯಾಕೆ? ಎಂದು ರೈತ ಸಂಘದ ಮೂಡಬಿದಿರೆ ವಲಯ ಅಧ್ಯಕ್ಷ ಧನಕೀರ್ತಿ ಬಲಿಪ ಪ್ರಶ್ನಿಸಿದರು.

ಇಲ್ಲಿನ ಸಮಾಜ ಮಂದಿರದಲ್ಲಿ ಶನಿವಾರ ನಡೆದ ಮೆಸ್ಕಾಂ ಇಲಾಖೆಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಕೊಳವೆ ಬಾವಿ ತೋಡಲು ಸರಕಾರಕ್ಕೊಂದು ಖಾಸಗಿಯವರಿಗೆ ಕಾನೂನೇ? ಎಂದು ಪ್ರಶ್ನಿಸಿದರು. ಮೆಸ್ಕಾಂ ಅಧೀಕ್ಷಕ ಎಂಜಿನಿಯರ್‌ ಮಂಜಪ್ಪ ಉತ್ತರಿಸಿ, ಇದು ಸರಕಾರದ ನಿಯಮ. ಜಿಲ್ಲಾಧಿಕಾರಿಯವರೇ ಇದನ್ನು ಸರಿಪಡಿಸಬೇಕು. ಈ ವಿಷಯವನ್ನು ಅವರ ಗಮನಕ್ಕೆ ತರುತ್ತೇನೆ ಎಂದರು.

ನಿರಾಕ್ಷೇಪಣೆ ಪತ್ರ ನೀಡಿಲ್ಲ
ಒಂದು ಕೊಳವೆ ಬಾವಿಯಿಂದ ಇನ್ನೊಂದು ಕೊಳವೆ ಬಾವಿಗೆ 500 ಮೀಟರ್‌ಗಿಂತ ಹೆಚ್ಚು ಅಂತರವಿದ್ದರೂ ಪಡುಮಾರ್ನಾಡು ಪಿಡಿಒ ಜಿಪಿಎಸ್‌ ಅಳತೆಯ ಕಾರಣ ನೀಡಿ ನಿರಾಕ್ಷೇಪಣೆ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಬಲಿಪರು ಆರೋಪಿಸಿದರು. ವಿದ್ಯುತ್‌ ತಂತಿ, ಕಂಬಗಳಲ್ಲಿರುವ ದೋಷಗಳನ್ನು ಪತ್ತೆ ಹಚ್ಚಿ ಸರಿಪಡಿಸಿದರೆ ಮಳೆಗಾಲದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿಂದ ವಿದ್ಯುತ್‌ ಕೈಕೊಡುವುದನ್ನು ತಪ್ಪಿಸಬಹುದು ಎಂದು ಪುರಸಭಾ ಸದಸ್ಯ ಅಲ್ವಿನ್‌ ಮೆನೇಜಸ್‌ ಸಲಹೆ ನೀಡಿದರು.

ವರದಿ ಬಳಿಕ ತೀರ್ಮಾನ
ಕರಿಂಜೆ ಮಾರಿಂಜಗುಡ್ಡೆಯಲ್ಲಿ ಬೇಟೆಗೆ ಹೋದ ವ್ಯಕ್ತಿಗಳಿಬ್ಬರು ವಿದ್ಯುತ್‌ ತಂತಿ ತಗಲಿ ಸಾವನಪ್ಪಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆಯಲ್ಲ ಎಂಬ ಬಲಿಪ ಅವರ ಪ್ರಶ್ನೆಗೆ ಉತ್ತರಿಸಿದ ಮಂಜಪ್ಪ, ನಮ್ಮ ವಿದ್ಯುತ್‌ ಪರಿವೀಕ್ಷಕರು ಈ ಬಗ್ಗೆ ತನಿಖೆ ನಡೆಸಿ ವರದಿ ನೀಡಲಿದ್ದಾರೆ. ನಮ್ಮ ವರದಿ ಮತ್ತು ಪೊಲೀಸ್‌ ವರದಿಯನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಾವೂರಿನ ಕಾರ್ಯನಿರ್ವಾಹಕ ಎಂಜಿನಿಯರ್‌ ದೀಪಕ್‌, ಮೂಡಬಿದಿರೆ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸತೀಶ್‌ ಮತ್ತಿತರರು ಉಪಸ್ಥಿತರಿದ್ದರು

ಸಭೆಯ ಬಗ್ಗೆ ಮಾಹಿತಿ ನೀಡಿ
ಜನಸಂಪರ್ಕ ಸಭೆಗೆ ಜನರಿಗೆ ಸರಿಯಾದ ಮಾಹಿತಿ ಸಿಗದೆ ಇರುವುದರಿಂದಲೇ ಸಭೆಗೆ ಜನರು ಬರುತ್ತಿಲ್ಲ ಎಂದು ಮೆಸ್ಕಾಂ ಸಲಹಾ ಸಮಿತಿ ಸದಸ್ಯೆ, ಪುರಸಭಾ ಸದಸ್ಯೆ ಸುಪ್ರಿಯಾ ಡಿ. ಶೆಟ್ಟಿ ಆರೋಪಿಸಿದರು. ಪ್ರತಿಕ್ರಿಯಿಸಿದ ಅಧಿಧೀಕ್ಷಕ ಎಂಜಿನಿಯರ್‌ ಮಂಜಪ್ಪ ಅವರು, ಸಭೆಗೆ ಮೊದಲು ಸಾರ್ವಜನಿಕರಿಗೆ ಮಾಹಿತಿ ನೀಡಿ ಹಾಗೂ ಎಲ್ಲ ಮೆಸ್ಕಾಂ ಕಚೇರಿ ಎದುರು ಬ್ಯಾನರ್‌ಗಳನ್ನು ಅಳವಡಿಸಬೇಕೆಂದು ಅಧಿ ಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.