ಮೂಡಬಿದಿರೆ, ಬೆಳುವಾಯಿಯಲ್ಲಿ ರಸ್ತೆ ತಡೆ, ಪ್ರತಿಭಟನೆ
Team Udayavani, Jan 5, 2018, 9:42 AM IST
ಮೂಡಬಿದಿರೆ: ಕಾಟಿಪಳ್ಳ ಕೈಕಂಬದಲ್ಲಿ ಬುಧವಾರ ನಡೆದ ದೀಪಕ್ ಕೊಲೆ ಪ್ರಕರಣದ ಬಗ್ಗೆ ಬಿಜೆಪಿ ಸಹಿತ ಸಂಘಪರಿವಾರದವರು ಮೂಡಬಿದಿರೆ ಮತ್ತು ಬೆಳುವಾಯಿಯಲ್ಲಿ ಗುರುವಾರ ಅಪರಾಹ್ನ 3.30ರ ವೇಳೆಗೆ ರಸ್ತೆ ತಡೆಯೊಂದಿಗೆ ಪ್ರತಿಭಟನೆ ನಡೆಸಿದರು.
ಮೂಡಬಿದಿರೆಯ ಬಸ್ನಿಲ್ದಾಣದ ಪ್ರವೇಶ ಭಾಗದಲ್ಲಿ ನಡೆದ ರಸ್ತೆ ತಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಿ.ಪಂ. ಸದಸ್ಯ ಸುಚರಿತ ಶೆಟ್ಟಿ, ಮುಸ್ಲಿಂ ಉದ್ಯಮಿಯ ವ್ಯವಹಾರ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ , ಯಾವುದೇ ಪೊಲೀಸ್ ಕೇಸ್ಗಳಿಲ್ಲದ, ಅಮಾಯಕ ಹಿಂದೂ ಯುವಕನನ್ನು ಮತಾಂಧ ಶಕ್ತಿಗಳು ಕೊಲೆ ಮಾಡಿವೆ. ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರು ನೀಡುತ್ತಿರುವ ಹೇಳಿಕೆಗಳು ಕರಾವಳಿಯಲ್ಲಿ ಸಂಘರ್ಷದ ವಾತಾವರಣವನ್ನು ಉಂಟು ಮಾಡುತ್ತಿವೆ. ಹಿಂದೂಗಳನ್ನು ಹತ್ಯೆಗೈಯುತ್ತಿರುವ ಪಿಎಫ್ಐಯಂಥ ಸಂಘಟನೆಗಳನ್ನು ನಿಷೇಧಿಸಬೇಕಾಗಿದೆ ಎಂದು ಆಗ್ರಹಿಸಿದರು. ಉಸ್ತುವಾರಿ ಸಚಿವರ ಹೊಣೆಗಾರಿಕೆಯಲ್ಲಿ ನಡೆಯುವ ಇಂಥ ದೌರ್ಜನ್ಯಕ್ಕೆ ತಕ್ಕ ಉತ್ತರ ನೀಡುವ ಶಕ್ತಿ ಹಿಂದೂ ಸಂಘಟನೆಗಳಿಗೆ ಇದೆಯಾದರೂ ಕಾನೂನನ್ನು ಗೌರವಿಸಿ ಸಾಂಕೇತಿಕ, ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು. ರಸ್ತೆ ತಡೆ ನಡೆಸಿದವರು ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪುರಸಭಾ ಸದಸ್ಯರಾದ ಲಕ್ಷ್ಮಣ ಪೂಜಾರಿ, ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾ ವಕ್ತಾರ ಕೆ. ಕೃಷ್ಣರಾಜ ಹೆಗ್ಡೆ, ಮೇಘನಾದ್ ಶೆಟ್ಟಿ, ಹರೀಶ್ ಎಂ.ಕೆ. ತಾಲೂಕು ಗೋರಕ್ಷಾ ಪ್ರಮುಖ ಸುನಿಲ್ ಇರುವೈಲು, ಗಣೇಶ್ ಪೈ ಮೊದಲಾದವರು ರಸ್ತೆ ತಡೆ- ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
50 ಲಕ್ಪ ರೂ. ಪರಿಹಾರ
ಪುರಸಭಾ ಸದಸ್ಯ ನಾಗರಾಜ ಪೂಜಾರಿ ಮಾತನಾಡಿ, ಮನೆಗೆ ಆಧಾರಸ್ತಂಭವಾಗಿದ್ದ ದೀಪಕ್ನನ್ನು ಕಳಕೊಂಡ ಕುಟುಂಬಕ್ಕೆ ಸರಕಾರ ಕನಿಷ್ಠ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ