ಮೂಡಬಿದಿರೆ: ಗೊಂದಲದ ಗೂಡಾಗಿದೆ ಪಾರ್ಕಿಂಗ್‌ ವ್ಯವಸ್ಥೆ 


Team Udayavani, Aug 30, 2018, 10:44 AM IST

30-agust-5.jpg

ಮೂಡಬಿದಿರೆ: ಮೇಲ್ನೋಟಕ್ಕೆ ವಿಶಾಲವಾಗಿ ಕಾಣುವ ಮೂಡಬಿದಿರೆ ಬಸ್‌ ನಿಲ್ದಾಣ ಅವ್ಯವಸ್ಥೆಯ ಆಗರವಾಗಿದೆ. ಇಲ್ಲಿ ಪಾರ್ಕಿಂಗ್‌ ವ್ಯವಸ್ಥೆಯೇ ಗೊಂದಲಗಳ ಗೂಡಾಗಿದೆ. ಮಂಗಳೂರು, ಕಾರ್ಕಳ, ಬೆಳ್ತಂಗಡಿಯ ಬಸ್‌ಗಳಿಗೆ ಹೊರತುಪಡಿಸಿ ಉಳಿದ ಬಸ್‌ ಗಳ ನಿಲ್ದಾಣಕ್ಕೆ ಸರಿಯಾದ ಜಾಗವೇ ಇಲ್ಲದಂತಾಗಿದೆ. ಏಕಕಾಲಕ್ಕೆ 30ರಿಂದ 50 ಬಸ್‌ಗಳು ನಿಲ್ಲಬಹುದಾದಷ್ಟು ಸ್ಥಳ ಇಲ್ಲಿದ್ದರೂ ಈಗ ಕೇವಲ 15 ಬಸ್‌ಗಳು ಮಾತ್ರ ನಿಲ್ಲಬಹುದಾದ ಪರಿಸ್ಥಿತಿ ಇದೆ.

ರಸ್ತೆಯಲ್ಲೇ ಪಾರ್ಕಿಂಗ್‌
ಬಸ್‌ನಿಲ್ದಾಣದ ದಕ್ಷಿಣದಲ್ಲಿರುವ ಪುರಸಭಾ ವಾಣಿಜ್ಯ ಸಂಕೀರ್ಣದ 2 ಅಂತಸ್ತು ಮತ್ತು ಪೂರ್ವದಲ್ಲಿರುವ ಖಾಸಗಿ ವಾಣಿಜ್ಯ ಸಂಕೀರ್ಣಗಳಲ್ಲಿ ಈಗಾಗಲೇ 150 ವರ್ತಕರ ಅಂಗಡಿಗಳಿವೆ. ಈ ಎಲ್ಲ ಅಂಗಡಿಗಳ ಮಾಲಕರು, ಕೆಲಸಗಾರರ ವಾಹನಗಳು, ಅಂಗಡಿಗಳಿಗೆ ಬರುವ ಗ್ರಾಹಕರ ವಾಹನಗಳ ನಿಲುಗಡೆಗೆ ಸೂಕ್ತ ಜಾಗಕ್ಕೆ ಅವಕಾಶ ಕಲ್ಪಿಸದೆ ಇರುವುದರಿಂದ ದಿನೇ ದಿನೇ ಪರಿಸ್ಥಿತಿ ಬಿಗಡಾಯಿಸುತ್ತಿದೆ.

ಮನವಿಗೂ ಸ್ಪಂದನೆಯಿಲ್ಲ
ಈ ಬಗ್ಗೆ ಸಾಕಷ್ಟು ಬಾರಿ ವರ್ತಕರಿಗೆ ಪ್ರತ್ಯೇಕ ಪಾರ್ಕಿಂಗ್‌ ಸ್ಥಳ ನಿಗದಿಪಡಿಸಿ, ಪೇ ಪಾರ್ಕಿಂಗ್‌ ವ್ಯವಸ್ಥೆಯನ್ನೂ ಅಳವಡಿಸಿ ಪುರಸಭೆ ಸಮಸ್ಯೆ ನಿವಾರಿಸಲು ಮುಂದಾದರೂ ಅದರ ಅನುಷ್ಠಾನ ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ ಬಿ.ಸಿ.ರೋಡ್‌, ನಾರಾವಿ, ಮಿತ್ತಬೈಲು, ಶಿರ್ತಾಡಿ ಹೀಗೆ ಗ್ರಾಮಾಂತರ ಪರಿಸರದ ಬಸ್ಸುಗಳ ನಿಲುಗಡೆಯಾಗುವಲ್ಲಿ ಇತರೆ ಖಾಸಗಿ ವಾಹನಗಳು ಸ್ಥಳ ಆಕ್ರಮಿಸಿಕೊಳ್ಳುತ್ತಿವೆ. 

ಪರಿಹಾರ ಹೇಗೆ?
ಮುಖ್ಯರಸ್ತೆಯಿಂದ ಎತ್ತರದಲ್ಲಿ ರುವ ಬಸ್‌ ನಿಲ್ದಾಣವನ್ನು ಸಮತಟ್ಟುಗೊಳಿಸಿ ಅಂಡರ್‌ ಗ್ರೌಂಡ್‌ ಪಾರ್ಕಿಂಗ್‌ ಯೋಜನೆ ಜಾರಿಗೊಳಿಸಲು ಸಾಧ್ಯವಾದರೆ ಪುರಸಭೆಗೂ ಆದಾಯ ಹೆಚ್ಚಲಿದೆ. ಹೆಚ್ಚುವರಿ ಸ್ಥಳಾವಕಾಶವೂ ದೊರೆಯಲಿದೆ. ಲಂಬಕೋನದಲ್ಲಿ ಬಸ್‌ ನಿಲ್ದಾಣವನ್ನು ಪ್ರವೇಶಿಸುವ ಅಪಾಯಕಾರಿ ಸನ್ನಿವೇಶವನ್ನು ನಿವಾರಿಸಿ ಪಿಡಬ್ಲ್ಯುಡಿ ಯಿಂದ ಇದೊಂದು ಕಾನೂನುಬದ್ಧ ಬಸ್‌ನಿಲ್ದಾಣವೆಂಬ  ಸಿರುನಿಶಾನೆ ಪಡೆದುಕೊಳ್ಳಬೇಕಾಗಿದೆ. ಈ ಬಗ್ಗೆ ಪುರಸಭೆ ಸಹಿತ ಸಂಬಂಧ ಪಟ್ಟವರೆಲ್ಲ ಯೋಜಿತ ಕ್ರಮ ಕೈಗೊಳ್ಳಲೇಬೇಕಾಗಿದೆ.

ಶೀಘ್ರ ಪರಿಹಾರ
ಕೆಳಗಡೆ ನಿರ್ಮಾಣವಾಗುತ್ತಿರುವ ಮಾರುಕಟ್ಟೆಯ ತಳ ಅಂತಸ್ತುಗಳಲ್ಲಿ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಕೆಲವೇ ತಿಂಗಳಲ್ಲಿ ಅಲ್ಲಿ ಪಾರ್ಕಿಂಗ್‌ಗೆ ಅವಕಾಶವಾಗಲಿದೆ. ತನ್ಮೂಲಕ ಬಸ್‌ನಿಲ್ದಾಣ ಮಾತ್ರವಲ್ಲ ಪೇಟೆಯನ್ನು ಕಾಡುತ್ತಿರುವ ಪಾರ್ಕಿಂಗ್‌ ಸಮಸ್ಯೆಗೆ ಪರಿಹಾರ ಸಿಗಲಿದೆ.
 - ಶೀನಾ ನಾಯ್ಕ ಪುರಸಭಾ ಮುಖ್ಯಾಧಿಕಾರಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.