ಮೂಡುಕೋಡಿ ಗ್ರಾಮಸ್ಥರಿಂದ ಯೋಧನ ಮನೆಯಲ್ಲಿ  ಹಬ್ಬ 


Team Udayavani, Oct 21, 2017, 5:11 PM IST

21-Mng-12.jpg

ಬೆಳ್ತಂಗಡಿ: ದೇಶದ ಗಡಿಯಲ್ಲಿ ಸೈನಿಕರ ಜತೆ ಪ್ರಧಾನಿ ನರೇಂದ್ರ ಮೋದಿಯವರು ದೀಪಾವಳಿ ಆಚರಣೆಯಲ್ಲಿ ತೊಡಗಿದ್ದರೆ, ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನಡ್ತಿಕಲ್ಲು – ಮೂಡುಕೋಡಿ ಗ್ರಾಮಸ್ಥರು ಯೋಧರೊಬ್ಬರ ಮನೆಯಲ್ಲಿ ವಿನೂತನ ರೀತಿಯಲ್ಲಿ ದೀಪಾವಳಿ ಆಚರಣೆಗೆ ಮುಂದಾಗಿದ್ದಾರೆ.

ಬೆಳಕಿನ ಹಬ್ಬವನ್ನು ನಾವು ಮನೆಯಲ್ಲಿ ಆಚರಿಸಿ ಸಂಭ್ರಮಿಸುತ್ತಿದ್ದರೆ, ಈ ಗ್ರಾಮಸ್ಥರು ದೇಶ ಸೇವಕನ ಮನೆಯಲ್ಲಿ ಆಚರಿಸಿ ‘ನಿಮ್ಮೊಂದಿಗೆ ನಾವಿದ್ದೇವೆ’
ಎಂದು ಧೈರ್ಯ ತುಂಬಲು ಹೊರಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ವೇಣೂರಿನ ಯೋಧರಾದ ರಾಧಾಕೃಷ್ಣ ದೋಟ ಅವರ ತೋಟದಲ್ಲಿರುವ ಪಾಂಚಜನ್ಯ ಮನೆಯಲ್ಲಿ ಅ. 21ರಂದು ಸಂಜೆ 6 ರಿಂದ 10 ಗಂಟೆಯವರೆಗೆ ‘ಯೋಧನ ಮನೆಯಲ್ಲಿ ನಮ್ಮ ದೀಪಾವಳಿ’ ಯಡಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ದೀಪಾವಳಿ ಆಚರಣೆಯ ಮಹತ್ವದ ಕುರಿತು ಉಪನ್ಯಾಸವಲ್ಲದೇ ಹಣತೆ ಹಚ್ಚಿ ಸಂಭ್ರಮಿಸಲಾಗುತ್ತಿದೆ. ಸೇನೆಯಲ್ಲಿ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಯೋಧ ರಾಧಾಕೃಷ್ಣ ಅವರನ್ನು ಸಮ್ಮಾನಿಸಲಾಗುತ್ತಿದೆ. ಬಳಿಕ ಗಡಿಯಲ್ಲಿನ ಅನುಭವಗಳು, ಸೈನ್ಯದಲ್ಲಿನ ಕೆಲಸದ ಬಗ್ಗೆ ರಾಧಾಕೃಷ್ಣ ಅವರು ಸ್ಫೂರ್ತಿಯ ಮಾತುಗಳನ್ನಾಡುವರು. ಸಿಹಿತಿಂಡಿ ಸೇರಿದಂತೆ ದೀಪಾವಳಿಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಗ್ರಾಮಸ್ಥರೇ ಒಟ್ಟಾಗಿ ಮಾಡುತ್ತಿರುವುದೇ ವಿಶೇಷ.

ಸೈನಿಕರ ನೆನಪಿನಲ್ಲಿ ಆಚರಣೆ
ಇಲ್ಲಿಯ ಶ್ರೀ ರಾಮ ಭಜನಾ ಮಂಡಳಿ ನೇತೃತ್ವ ವಹಿಸಿಕೊಂಡಿದೆ. ಮಂಡಳಿಯ ಪದಾಧಿಕಾರಿ ಉಮೇಶ್‌ ಅವರ ಪ್ರಕಾರ, ‘ನಾವು ವಿವಿಧ ಹಬ್ಬಗಳನ್ನು ಸಂಭ್ರಮಿಸುತ್ತೇವೆ. ಆದರೆ ದೇಶ ಕಾಯುವ ಯೋಧರಿಗೆ ಅದ್ಯಾವುದೂ ಇರದು. ನಮ್ಮೂರಿನ ಯೋಧರಾದ ರಾಧಾಕೃಷ್ಣ ದೋಟ ಅವರು ಈ ಬಾರಿಯ ದೀಪಾವಳಿಗೆ ಊರಿಗೆ ಬಂದಿದ್ದಾರೆ. ಹಾಗಾಗಿ ಸೈನಿಕರ ನೆನಪಿನಲ್ಲಿ ಅವರ ಮನೆಯಲ್ಲೇ ದೀಪಾವಳಿ ಆಚರಣೆಗೆ ಮುಂದಾಗಿದ್ದೇವೆ. ಆ ಮೂಲಕ ದೇಶ
ರಕ್ಷಕರೊಂದಿಗೆ ನಾವೆಲ್ಲರೂ ಇದ್ದೇವೆ ಎಂಬ ಸಂದೇಶ ಸಾರುವ ಉದ್ದೇಶ ಎಂದು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಕಳೆದ ವರ್ಷ ಹರೀಶ್‌ ಪೂಂಜಾ ಅವರ ನೇತೃತ್ವದಲ್ಲಿ ದುರ್ಗಮ, ಗುಡ್ಡಗಾಡು ಪ್ರದೇಶವಾದ ಬಾಂಜಾರುಮಲೆಗೆ ತೆರಳಿ ಅಲ್ಲಿನ ನಿವಾಸಿಗಳೊಂದಿಗೆ ದೀಪಾವಳಿ ಆಚರಿಸಲಾಗಿತ್ತು.

16 ವರ್ಷಗಳಿಂದ ದೇಶಸೇವೆ
ಯೋಧ ರಾಧಾಕೃಷ್ಣ ಅವರು ವೇಣೂರಿನ ದೋಟ ಲೋಕಯ್ಯ ಪೂಜಾರಿ ಮತ್ತು ಸುನಂದಾ ಅವರ ಪುತ್ರ. ಹದಿನಾರು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 2003-06ರ ತನಕ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲ, 2006-09ರ ವರೆಗೆ ಪಶ್ಚಿಮ ಬಂಗಾಳ, 2009-12ರ ವರೆಗೆ ಜಮ್ಮು ಕಾಶ್ಮೀರದ ಅಕ್ಕೂರ್‌, 2012-16ರವರೆಗೆ ಪಠಾಣ್‌ಕೋಟ್‌ನಲ್ಲಿ ಹಾಗೂ 2016ರಿಂದ ಅಸ್ಸಾಂನಲ್ಲಿ ಕಾರ್ಯ ನಿರತರಾಗಿದ್ದಾರೆ. 2018ರ ಎಪ್ರಿಲ್‌ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿರುವರು.

ಹೆಮ್ಮೆಯಾಗುತ್ತಿದೆ
ಪ್ರಧಾನಿಯವರು ಪ್ರತೀ ಬಾರಿ ಗಡಿಗೆ ತೆರಳಿ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಾರೆ. ಸೈನ್ಯಕ್ಕೆ ಸೇರಿದ ಅನಂತರ ಎರಡು ಬಾರಿ ಊರಿನಲ್ಲಿ ದೀಪಾವಳಿ ಆಚರಿಸಿದ್ದೇನೆ. ಇದೀಗ ನಡ್ತಿಕಲ್ಲು- ಮೂಡುಕೋಡಿ ಗ್ರಾಮಸ್ಥರು ನನ್ನ ಮನೆಯಲ್ಲಿ ದೀಪಾವಳಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ. ದೇಶಕ್ಕಾಗಿ ದುಡಿಯುವ ನಮಗೆ ಜನರಿಂದ ಇಂತಹ ಸ್ಫೂರ್ತಿ ತುಂಬುವ ವಾತಾವರಣ ಸಿಗುತ್ತಿರುವುದು ಖುಷಿಯ ವಿಷಯ.
-ರಾಧಾಕೃಷ್ಣ ದೋಟ, ಯೋಧ

 ಧನ್ಯಾ ಬಾಳೆಕಜೆ 

ಟಾಪ್ ನ್ಯೂಸ್

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ʼರಾಮಾಯಣʼ ಸೆಟ್‌ ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.