ಕರಾವಳಿ ಭದ್ರತಾ ಪಡೆ ಬಲವರ್ಧನೆಗೆ ತೀರ್ಮಾನ: ಬೊಮ್ಮಾಯಿ
Team Udayavani, Oct 24, 2019, 1:09 PM IST
ಬಂಟ್ವಾಳ: ಕರಾವಳಿ ಭದ್ರತಾ ಪಡೆಯನ್ನು ಬಲವರ್ಧನೆ ಗೊಳಿಸುವುದು ಹಾಗೂ ಅದಕ್ಕೆ ಹೆಚ್ಚಿನ ಸೌಲಭ್ಯ ನೀಡುವುದಕ್ಕೆ ರಾಜ್ಯ ಗೃಹ ಇಲಾಖೆ ತೀರ್ಮಾನಿಸಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಗುರುವಾರ ಬಂಟ್ವಾಳ ಐಬಿಯಲ್ಲಿ ಪಶ್ಚಿಮ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದರು.
ಬಂಟ್ವಾಳ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೇರಿಸುವ ವಿಚಾರವನ್ನು ಅಧಿಕಾರಿಗಳು ತನ್ನ ಗಮನಕ್ಕೆ ತಂದಿದ್ದು, ಅದರ ಕುರಿತು ಚರ್ಚಿಸಿ ಇನ್ಸ್ಪೆಕ್ಟರ್ ಗಳನ್ನು ನಿಯೋಜಿಸುವ ಕುರಿತು ತೀರ್ಮಾನಿಸಲಾಗುತ್ತದೆ. ದ.ಕ.ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಕುರಿತು ಶೀಘ್ರ ಬೆಂಗಳೂರಿನಲ್ಲಿ ಸಭೆ ಕರೆಯಲಾಗುತ್ತದೆ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸೇರಿದಂತೆ ಪೊಲೀಸ್ ಅಧಿಕಾರಿಗಳು, ಬಿಜೆಪಿ ಮುಂದಾಳುಗಳು ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು