ಕೆಸರು ಗದ್ದೆ ಕ್ರೀಡಾಕೂಟದಲ್ಲಿ 100ಕ್ಕೂ ಅಧಿಕ ಪ್ರಶಸ್ತಿ

 ಗ್ರಾಮೀಣ ಪ್ರತಿಭೆಯ ದಾಖಲೆ ; ಕಂಬಳ ಓಟಗಾರನಾಗಿಯೂ ತರಬೇತಿ

Team Udayavani, Dec 13, 2021, 6:53 PM IST

ಕೆಸರು ಗದ್ದೆ ಕ್ರೀಡಾಕೂಟದಲ್ಲಿ 100ಕ್ಕೂ ಅಧಿಕ ಪ್ರಶಸ್ತಿ

ಸುಬ್ರಹ್ಮಣ್ಯ: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ತಿರುಮಲೇಶ್ವರ ಸಾಕೋಟೆ ಎಂಬ ಯುವಕ ತುಳುನಾಡಿನ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ನೂರಕ್ಕೂ ಅಧಿಕ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿದ್ದಾರೆ. ಇದೀಗ ತಿರುಮಲೇಶ್ವರ ಇತ್ತೀಚೆಗೆ ನೆಲ್ಯಾಡಿ ಹಾರ್ಪಳದಲ್ಲಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಎರಡು ಪ್ರಶಸ್ತಿ ಪಡೆದು ತನ್ನ ಪ್ರಶಸ್ತಿಗಳ ಸಂಖ್ಯೆಯನ್ನು 104ಕ್ಕೆ ಏರಿಸಿದ್ದಾರೆ.

ತಿರುಮಲೇಶ್ವರ ಕೆಸರು ಗದ್ದೆ ಕ್ರೀಡಾ ಕೂಟದಲ್ಲಿ ಮೊದಲಿಗೆ ಭಾಗವಹಿಸಿದ್ದು ಕಾವಿನಮೂಲೆಯಲ್ಲಿ. ಅಲ್ಲಿ ಯಾವುದೇ ಪ್ರಶಸ್ತಿ ಪಡೆಯಲು ಸಾಧ್ಯವಾಗದಿದ್ದರೂ ಛಲ ಬಿಡದ ಅವರು, ಮುಂದೆ ರೆಂಜಿಲಾಡಿಯ ನೂಜಿಬೈಲ್‌ನಲ್ಲಿ ನಡೆದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಮೊದಲ ಪ್ರಶಸ್ತಿ ಪಡೆದರು. ಬಳಿಕ ತುಳುನಾಡಿನ ಹಲವೆಡೆ ನಿರಂತರವಾಗಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ 104 ಪ್ರಶಸ್ತಿ ಪಡೆದು ಸಾಧನೆ ಮೆರೆದಿದ್ದಾರೆ. ತಿರುಮಲೇಶ್ವರ ಕೆಲವು ಕಡೆ ಸೋಲನ್ನು ಅನುಭವಿಸಿದ್ದಾರೆ. ಆದರೆ ಅವರು ತನ್ನ ಸಾಧನೆಯ ಛಲದಿಂದ ಯಾವುತ್ತೂ ಹಿಂದೆ ಸರಿಯಲಿಲ್ಲ.

26 ವರ್ಷದ ತಿರುಮಲೇಶ್ವರ ಅಂಗಡಿ ಉದ್ಯಮ ನಡೆಸುವ ಜತೆಗೆ ಕೃಷಿಯನ್ನೂ ಮಾಡುತ್ತಾರೆ. ಬಿಡುವಿನ ವೇಳೆಯಲ್ಲಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಸ್ತುತ ನೂಜಿಬೈಲ್‌ ತುಳುನಾಡ ತುಡರ್‌ ಯುವಕ ಮಂಡಲದ ಅಧ್ಯಕ್ಷರಾಗಿ, ತೆಗ್‌ರ್‌ ತುಳುಕೂಟದ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಂಬಳದಲ್ಲೂ ಆಸಕ್ತಿ ಹೊಂದಿರುವ ಇವರು ಕಂಬಳದ ಕೋಣಗಳ ಓಡಿಸುವ ತರಬೇತಿಯನ್ನು ಮೂಡುಬಿದಿರೆಯಲ್ಲಿ ಪಡೆಯುತ್ತಿದ್ದಾರೆ. ತನ್ನ ಗದ್ದೆಯಲ್ಲಿ ಬೆಳಗ್ಗೆ ಬೇಗ ಎದ್ದು ಓಟದ ತರಬೇತಿ ನಡೆಸುವ ಇವರು ಕೆಸರು ಗದ್ದೆ ಕ್ರೀಡಾಕೂಟದ ಆಸಕ್ತ ಯುವಕರನ್ನು ಈ ಕ್ರೀಡೆಗೆ ಆಹ್ವಾನಿಸಿ ಅವರನ್ನು ಪ್ರೋತ್ಸಾಹಿಸುತ್ತಿದ್ದಾರೆ. ಜತೆಗೆ ಕೆಸರುಗದ್ದೆ ಕ್ರೀಡಾಕೂಟ ಆಯೋಜಿ ಸುವಲ್ಲಿಯೂ ಸಹಕಾರ ನೀಡುತ್ತಿದ್ದಾರೆ.

ಕೆಸರು ಗದ್ದೆ ಕ್ರೀಡಾಕೂಟ
ತುಳುನಾಡಿನ ಅಪ್ಪಟ ಗ್ರಾಮೀಣ ಸೊಗಡಿನ, ಸಂಸ್ಕೃತಿಯ ಪ್ರತೀಕ ಕೆಸರು ಗದ್ದೆ ಕ್ರೀಡಾಕೂಟ. ಇದು ಕೆಸರು ಗದ್ದೆಯಲ್ಲಿ ನಡೆಯುತ್ತದೆ. ಕೊಯ್ಲು ಮುಗಿದ ಬಳಿಕ ಈ ಕ್ರೀಡಾಕೂಟ ಸಂಘಟನೆಗಳ ನೇತೃತ್ವದಲ್ಲಿ ಆಯೋಜನೆಗೊಳ್ಳುತ್ತದೆ. ಕೆಸರು ಗದ್ದೆ ಓಟ, ಹಿಮ್ಮುಖ ಓಟ, ರಿಲೇ, ಗೋಣಿಚೀಲ ಓಟ, ಹಗ್ಗಜಗ್ಗಾಟ, ಕಬಡ್ಡಿ, ಮಡಿಕೆ ಒಡಿಯುವುದು, ನಿಧಿ ಶೋಧ, ಉಪ್ಪು ಮೂಟೆ ಸೇರಿದಂತೆ 30ರಿಂದ 50 ಬಗೆಯ ಸ್ಪರ್ಧೆಗಳು ನಡೆಯುತ್ತವೆ.

ಶ್ಲಾಘನೀಯ
ಕೆಸರು ಗದ್ದೆ ಕ್ರೀಡಾಕೂಟ ನನ್ನ ಆಸಕ್ತಿಯ ಕ್ಷೇತ್ರ. ಇಲ್ಲಿ ಆಡುವುದು ಮನಸ್ಸಿಗೆ ಉಲ್ಲಾಸ ನೀಡುವ ಜತೆಗೆ ಪ್ರತಿಭೆ ಅನಾವರಣ ಮಾಡಲು ಸಾಧ್ಯ. ಕೆಸರು ಗದ್ದೆ ಆಯೋಜನೆ ಪ್ರಸ್ತುತ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿರುವುದು ಶ್ಲಾಘನೀಯ.
-ತಿರುಮಲೇಶ್ವರ ಸಾಕೋಟೆ, ರೆಂಜಿಲಾಡಿ

-ದಯಾನಂದ ಕಲ್ನಾರ್

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.