ಮಂಗಳೂರು ಕೆಎಸ್ ಆರ್ ಟಿಸಿಗೆ 1 ಕೋಟಿ ನಷ್ಟ: ಇಂದಿನಿಂದ ಮಂಗಳೂರು- ಪುಣೆ ಬಸ್ ಪುನರಾರಂಭ
Team Udayavani, Aug 13, 2019, 3:17 PM IST
ಸುರತ್ಕಲ್: ಕರ್ನಾಟಕ ಮತ್ತು ಮಹಾರಾಷ್ಟ್ರದ ಪ್ರವಾಹದ ಕಾರಣದಿಂದ ರದ್ದಾಗಿದ್ದ ಮಂಗಳೂರು- ಪುಣೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಮಂಗಳವಾರದಿಂದ ಪುನರಾರಂಭವಾಗಲಿದೆ ಎಂದು ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗ ಜಿಲ್ಲಾ ನಿಯಂತ್ರಣಾಧಿಕಾರಿ ಅಶ್ರಫ್ ಅವರು ಹೇಳಿದ್ದಾರೆ.
ಮಂಗಳೂರು, ಉಡುಪಿ, ಕುಂದಾಪುರ ವಿಭಾಗದಿಂದ ಮಹಾರಾಷ್ಟ್ರದ ಮುಂಬೈ, ಪುಣೆ, ಕೊಲ್ಲಾಪುರಕ್ಕೆ ಬಸ್ ಸಂಚಾರವಿದ್ದು, ಪ್ರವಾಹದ ಕಾರಣದಿಂದ ಇದನ್ನು ಕೆಲ ದಿನಗಳ ಮಟ್ಟಿಗೆ ರದ್ದು ಮಾಡಲಾಗಿತ್ತು. ಆದರೆ ಈಗ ಪುಣೆಗೆ ಸುಗಮ ಸಂಚಾರಕ್ಕೆ ಅನುಮತಿ ದೊರೆತ ಕಾರಣ ಇಂದಿನಿಂದ ಬಸ್ ಸಂಚಾರ ಆರಂಭವಾಗಲಿದೆ. ಆದರೆ ಮುಂಬೈ ಮತ್ತು ಕೊಲ್ಲಾಪುರಕ್ಕೆ ಬಸ್ ಪುನರಾರಂಭಿಸುವ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.
ಮಂಗಳೂರು ವಿಭಾಗಕ್ಕೆ ಒಂದು ಕೋಟಿ ನಷ್ಟ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಸುರಿದ ಧಾರಕಾರ ಮಳೆ ಮತ್ತು ಘಟ್ಟ ಪ್ರದೇಶಗಳ ಗುಡ್ಡ ಕುಸಿತದಿಂದಾಗಿ ಕೆಎಸ್ ಆರ್ ಟಿಸಿ ಗೆ ಹಲವು ನಷ್ಟವಾಗಿದೆ. ಶಿರಾಡಿ, ಚಾರ್ಮಾಡಿ ಘಾಟಿ ಬಂದ್ ಆಗಿದ್ದ ಕಾರಣ ಸುಮಾರು 265 ಶೆಡ್ಯೂಲ್ ಗಳನ್ನು ರದ್ದುಗೊಳಸಿಲಾಗಿದೆ. ಇದರಿಂದಾಗಿ ಮಂಗಳೂರು ವಿಭಾಗಕ್ಕೆ ಒಂದು ಕೋಟಿಗೂ ಹೆಚ್ಚಿನ ನಷ್ಟವಾಗಿದೆ ಎಂದು ಜಿಲ್ಲಾ ನಿಯಂತ್ರಣಾಧಿಕಾರಿ ಅಶ್ರಫ್ ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ