ಮಳಲಿ ಮಸೀದಿ ವಿವಾದ: ಸುದೀರ್ಘ ವಿಚಾರಣೆ; ಸರ್ವೇ ಮಾಡಲು ಮನವಿ
ಐತಿಹಾಸಿಕ ಸ್ಮಾರಕವೋ ಮಸೀದಿಯೋ ಅನ್ನೋದನ್ನ ವಕ್ಫ್ ಟ್ರಿಬ್ಯುನಲ್ ನಿರ್ಧರಿಸಲು ಆಗುವುದಿಲ್ಲ
Team Udayavani, Jun 9, 2022, 4:42 PM IST
ಮಂಗಳೂರು:ಮಳಲಿ ಮಸೀದಿಯಲ್ಲಿ ದೇವಾಲಯ ಹೋಲುವ ರಚನೆ ಕಂಡುಬಂದಿರುವ ಹಿನ್ನೆಲೆಯಲ್ಲಿ ನಗರದ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಲ್ಲಿ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ಸುದೀರ್ಘ ವಿಚಾರಣೆ ಗುರುವಾರ ನಡೆಸಲಾಯಿತು.
ವಿಶ್ವ ಹಿಂದೂ ಪರಿಷತ್ ಪರ ವಕೀಲ ಚಿದಾನಂದ ಕೆದಿಲಾಯ ವಾದ ಮಂಡನೆ ಮಾಡಿದರು. ನಮ್ಮ ಅರ್ಜಿದಾರರು ಸಲ್ಲಿಸಿರುವ ಅರ್ಜಿ ವಕ್ಫ್ ಟ್ರಿಬ್ಯುನಲ್ ವ್ಯಾಪ್ತಿಗೆ ಬರುವುದಿಲ್ಲ. ನಾವು ಎಲ್ಲೂ ಅದು ವಕ್ಫ್ ಆಸ್ತಿಯೋ ಅಲ್ಲವೋ ಎಂಬ ಬಗ್ಗೆ ಪ್ರಶ್ನಿಸಿಲ್ಲ. ನಮ್ಮ ಅರ್ಜಿದಾರರು ಅದೊಂದು ಐತಿಹಾಸಿಕ ಸ್ಮಾರಕ ಅಥವಾ ದೇವಸ್ಥಾನ ಅಂತ ಹೇಳಿದ್ದಾರೆ. ಹೀಗಾಗಿ ಅದರ ಸಂರಕ್ಷಣೆ ಮಾಡುವಂತೆ ಅರ್ಜಿಯಲ್ಲಿ ಕೇಳಿದ್ದಾರೆ. ಅದು ಐತಿಹಾಸಿಕ ಸ್ಮಾರಕವೋ ಮಸೀದಿಯೋ ಅನ್ನೋದನ್ನ ವಕ್ಫ್ ಟ್ರಿಬ್ಯುನಲ್ ನಿರ್ಧರಿಸಲು ಆಗುವುದಿಲ್ಲ. ಹೀಗಾಗಿ ಅದನ್ನ ಸಿವಿಲ್ ಕೋರ್ಟ್ ತಕ್ಷಣ ನಿರ್ಧರಿಸಬೇಕು. ಹೀಗಾಗಿ ಆ ಜಾಗದ ಸರ್ವೆಗೆ ಆದೇಶ ಮಾಡಿದರೆ ಅಲ್ಲಿನ ಸ್ಮಾರಕ ಏನು ಅನ್ನುವುದು ಗೊತ್ತಾಗುತ್ತದೆ ಎಂದು ಮನವಿ ಮಾಡಿದ್ದಾರೆ.
ವಕ್ಫ್ ಟ್ರಿಬ್ಯೂನಲ್ ವ್ಯಾಪ್ತಿಗೆ ಈ ಅರ್ಜಿ ಬರುವುದಿಲ್ಲ. 1991ರ ಪೂಜಾ ಸ್ಥಳ ಕಾಯ್ದೆಯಡಿಯೂ ಅರ್ಜಿ ವಜಾ ಮಾಡಲು ಆಗುವುದಿಲ್ಲ. ಪೂಜಾ ಸ್ಥಳ ಕಾಯಿದೆಯಲ್ಲೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಹೇಳಲಾಗಿದೆ. ಯಾವುದೇ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಬಗ್ಗೆ ಉಲ್ಲೇಖ ಇದೆ. ಹೀಗಿರುವಾಗ ನಮ್ಮ ಅರ್ಜಿದಾರರ ವಾದದಂತೆ ಅಲ್ಲಿರುವ ಸ್ಮಾರಕ ಏನು ಅಂತ ಗೊತ್ತಾಗಬೇಕು. ಅದು ಸರ್ವೇ ಮೂಲಕ ಗೊತ್ತಾದರೆ ಅದನ್ನ ಸಂರಕ್ಷಣೆ ಮಾಡಲು ಸಾಧ್ಯ. ಈಗ ಇರುವ ತಡೆಯಾಜ್ಞೆ ತೆರವು ಮಾಡಿದರೆ ಅಲ್ಲಿ ಮಸೀದಿ ನಿರ್ಮಾಣ ಆಗುತ್ತದೆ. ಇದರಿಂದ ಐತಿಹಾಸಿಕ ಸ್ಮಾರಕವೊಂದರ ಸಂರಕ್ಷಣೆ ಅಸಾಧ್ಯ ಎಂದು ವಕೀಲ ಚಿದಾನಂದ ಕೆದಿಲಾಯ ಸುದೀರ್ಘ ವಾದ ಮಂಡನೆ ಮಾಡಿದರು.
ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನಾಳೆಗೆ ವಿಚಾರಣೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ