ಮಳಲಿ ಮಸೀದಿ ವಿವಾದ: ವಿಚಾರಣೆ ಜೂ. 6ಕ್ಕೆ ಮುಂದೂಡಿಕೆ
Team Udayavani, Jun 2, 2022, 1:50 AM IST
ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಜೂ. 6ಕ್ಕೆ ಮುಂದೂಡಿದೆ.
ವಿಶ್ವಹಿಂದೂ ಪರಿಷತ್ ಪರವಾಗಿ ಚಿದಾನಂದ ಕೆದಿಲಾಯ ಮತ್ತು ಮಸೀದಿ ಆಡಳಿತ ಮಂಡಳಿಯ ಪರವಾಗಿ ಎನ್.ಪಿ. ಶೆಣೈ ವಾದ ಮಂಡಿಸಿದರು.
ಮಸೀದಿ ನವೀಕರಣ ಸಂದರ್ಭ ದೇವಾಲಯವನ್ನು ಹೋಲುವ ರಚನೆ ಕಂಡುಬಂದಿರುವ ಹಿನ್ನೆಲೆ
ಯಲ್ಲಿ ಜ್ಞಾನವಾಪಿ ಮಾದರಿಯಲ್ಲಿ ಕೋರ್ಟ್ ಕಮಿಷನರ್ ಮೂಲಕ ಪುರಾತತ್ವ ಇಲಾಖೆಯ ಸಹಾಯದಲ್ಲಿ ಸರ್ವೇ ನಡೆಸಬೇಕು ಎಂದು ಕೆದಿಲಾಯ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಪ್ರಕರಣದಲ್ಲಿ ಸರಕಾರವನ್ನು ಕೂಡ ಒಂದು ಪಕ್ಷಕಾರನನ್ನಾಗಿ (ಪಾರ್ಟಿ) ಮಾಡಬೇಕು ಎಂಬುದಾಗಿ ಅರ್ಜಿ ಸಲ್ಲಿಸಿದರು. ಅಲ್ಲದೆ ಈಗಾಗಲೇ ಸ್ಥಳೀಯ ಗ್ರಾ.ಪಂ. ಪಿಡಿಒ ಅವರು ಅನುಮತಿಯನ್ನು ತಡೆಹಿಡಿದಿದ್ದಾರೆ ಎಂದು ಹೇಳಿದರು.
ಎನ್.ಪಿ. ಶೆಣೈ ವಾದ ಮಂಡಿಸಿ ಮಳಲಿಯಲ್ಲಿ ಯಾವ ದೇವರಿದ್ದರು,ದೇವಸ್ಥಾನದ ಇತಿಹಾಸ ಏನು ಎಂಬ ಬಗ್ಗೆ ಅರ್ಜಿ ದಾರರು ಸಾಕ್ಷ್ಯ ನೀಡಿಲ್ಲ. ಆದರೆ ಅಲ್ಲಿ 700 ವರ್ಷಗಳಿಂದ ಮಸೀದಿ ಇತ್ತು ಎನ್ನುವುದಕ್ಕೆ ದಾಖಲೆ ಇದೆ. ನವೀಕರಣಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.ವಾದ ಪ್ರತಿವಾದ ಆಲಿಸಿದ ನ್ಯಾಯಾ ಧೀಶರು ವಿಚಾರಣೆಯನ್ನು ಜೂ. 6ಕ್ಕೆ ಮುಂದೂಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?