ಜಲೀಲ್‌ ಕೊಲೆ ಆರೋಪಿಗಳಲ್ಲಿ ಹೆಚ್ಚಿನವರು ಸಂಘಪರಿವಾರದವರು : ರೈ


Team Udayavani, May 2, 2017, 3:18 PM IST

rai-1.jpg

ಮಂಗಳೂರು: ಕರೋಪಾಡಿ ಗ್ರಾ.ಪಂ. ಉಪಾಧ್ಯಕ್ಷ ಅಬ್ದುಲ್‌ ಜಲೀಲ್‌ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ 11 ಆರೋಪಿ ಗಳಲ್ಲಿ ಹೆಚ್ಚಿನವರು ಸಂಘ ಪರಿವಾರಕ್ಕೆ ಸೇರಿದವರರಾಗಿದ್ದು ಜಿಲ್ಲೆಯಲ್ಲಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯುಂಟು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ನೇರ ಆರೋಪ ಮಾಡಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು ಜಲೀಲ್‌ ಗ್ರಾ. ಪಂ. ಅಧ್ಯಕ್ಷನಾಗಿ, ಉಪಾಧ್ಯಕ್ಷನಾಗಿ ಸಾಮಾಜಿಕ ಕಳಕಳಿಯೊಂದಿಗೆ ಕೆಲಸ ಮಾಡುತ್ತಾ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರ ಹತ್ಯೆ ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನಗಳು ನಡೆದವು. ಪೊಲೀಸರು ಕೊಲೆ ಆರೋಪಿಗಳನ್ನು  ಬಂಧಿಸಿದಾಗ ಆರೋಪಿಗಳಲ್ಲಿ ಸಾಕಷ್ಟು ಮಂದಿ ಸಂಘ ಪರಿವಾರದವರು ಇರುವುದು ಬಯಲಾಗಿದೆ ಎಂದರು.

ಹತ್ಯೆ ಪ್ರಕರಣದಲ್ಲಿ ವಿಕ್ಕಿ ಶೆಟ್ಟಿಯ ಪಾತ್ರವಿದೆ ಎಂಬ ಬಗ್ಗೆ ಪೊಲೀಸರ ಮಾಹಿತಿ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ತನಿಖೆ ಮುಂದುವರಿದಿದೆ. ಇನ್ನೂ ಕೆಲವರು ಇರುವ ಗುಮಾನಿ ಇದೆ. ತಪ್ಪಿತಸ್ಥರು ಯಾರೇ ಇರಲಿ ಅವರ ಮೇಲೆ ಕ್ರಮಕೈಗೊಳ್ಳುವ ಕಾರ್ಯವನ್ನು ಪೊಲೀಸರು ಮಾಡುತ್ತಾರೆ. ಮೇ 2ರಂದು ಗೃಹಸಚಿವರು ಜಿಲ್ಲೆಗೆ ಆಗಮಿಸಲಿದ್ದು ಜಲೀಲ್‌ ಮನೆಗೆ ಭೇಟಿ ನೀಡಲಿದ್ದಾರೆ. ನಾನು ಈ ಬಗ್ಗೆ ಸಚಿವರಲ್ಲಿ ವಿನಂತಿಸಿದ್ದೆ ಎಂದರು.

ಸಾಮರಸ್ಯಕ್ಕೆ ಧಕ್ಕೆ ಯಾಗಬಾರದು 
ದ.ಕ.ಮತೀಯ ಸೂಕ್ಷ್ಮ ಜಿಲ್ಲೆ. ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಯತ್ನಗಳನ್ನು ಎಲ್ಲರೂ ಖಂಡಿಸಬೇಕು. ಕಾರ್ತಿಕ್‌ರಾಜ್‌ ಕೊಲೆ ಪ್ರಕರಣವನ್ನು ಸಂಘ ಪರಿವಾರ ಮತೀಯಗೊಳಿಸಿತು. ಪಕ್ಷದ ನಾಯಕರು, ಸಂಸದರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಮತೀಯ ಸಂಘರ್ಷವನ್ನುಂಟು ಮಾಡುವ ಪ್ರಯತ್ನ ನಡೆಸಿದರು. ಪ್ರಕರಣದ ನೈಜ ಆರೋಪಿಗಳನ್ನು ಪೊಲೀಸರು ಬಂಧಿಸುವ ಮೂಲಕ ಸತ್ಯಾಂಶವನ್ನು ಬಯಲು ಮಾಡಿದರು ಎಂದ ಅವರು ಪೊಲೀಸ್‌ ಇಲಾಖೆಯನ್ನು ಅಭಿನಂದಿಸುತ್ತಿದ್ದೇನೆ ಎಂದರು. ಕೊಲೆಯತ್ನ ಪ್ರಕರಣದ ಆರೋಪಿ ಅಹ್ಮದ್‌ ಖುರೇಶಿ ಮೇಲೆ ಪೊಲೀಸ್‌ ದೌರ್ಜನ್ಯ ನಡೆದಿದೆ ಎಂಬುದರ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ಖುರೇಶಿಗೆ ಅನ್ಯಾಯವಾಗಿದ್ದರೆ ಸೂಕ್ತ ನ್ಯಾಯ ದೊರಕಿಸಿಕೊಡಲಾಗುವುದು. ಅದೇ ರೀತಿ  ಖುರೇಶಿಯಿಂದ ಹಲ್ಲೆಗೊಳಗಾದವರಿಗೂ ನ್ಯಾಯ ಒದಗಿಸುವ ಕಾರ್ಯ ಆಗುತ್ತದೆ ಎಂದು ಸಚಿವರು ಹೇಳಿದರು. ಮಂಗಳೂರು ಚಲೋ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮುಖಂಡ ಅಶ್ರಫ್‌ ಭಾಗವಹಿಸುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಕಾಂಗ್ರೆಸ್‌ನಲ್ಲಿರುವವರು ಜಾತ್ಯತೀತ ನಿಲುವು ಹೊಂದಿರುವವರು. ಅವರು ಎಂದೂ ಮತೀಯವಾದಿ ಸಂಘಟನೆಗಳ ಜತೆಗೆ ಹೋಗುವವರಲ್ಲ ಮತೀಯವಾದಿಗಳ ಜತೆ ಸೇರುವವರು ಕಾಂಗ್ರೆಸಿಗರಾಗಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. 

ಗೋಷ್ಠಿಯಲ್ಲಿ ಮೇಯರ್‌ ಕವಿತಾ ಸನಿಲ್‌, ಉಪಮೇಯರ್‌ ರಜನೀಶ್‌, ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.