ತಾಯಿ, ಮಗು ಸಾವು; ಮೂವರಿಗೆ ಗಂಭೀರ ಗಾಯ
Team Udayavani, Jan 21, 2018, 11:22 AM IST
ಮಡಂತ್ಯಾರು: ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಸಮೀಪ ಶನಿವಾರ ಸಂಜೆ ಲಾರಿ ಮತ್ತು ಕಾರು ಮುಖಾಮುಖೀ ಢಿಕ್ಕಿಯಾಗಿ ಕಾರಿನಲ್ಲಿದ್ದ ತಾಯಿ ಮತ್ತು ಮಗು ಸಾವನ್ನಪ್ಪಿದ್ದಾರೆ. ಮೂವರು ಗಂಭೀರ ಗಾಯಗೊಂಡಿದ್ದಾರೆ. ಮಂಗಳೂರು ಬಜಾಲ್ ನಿವಾಸಿಗಳಾದ ಅರ್ಚನಾ (34) ಮತ್ತು 6 ತಿಂಗಳ ಮಗು ಆಶಿ ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಅರ್ಚನಾ ಅವರ ಪತಿ ಜಗದೀಶ್ (38), ಪುತ್ರ ಈಶ್ (5) ಮತ್ತು ಜಗದೀಶ್ ಅವರ ಅಕ್ಕನ ಮಗಳು ವೈಷ್ಣವಿ (14) ಅವರ ತಲೆಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರ್ಚನಾ ಅವರು ಕುದ್ರೋಳಿಯ ಅಳಕೆಯಲ್ಲಿ ಅಲ್ಟ್ರಾ ಡಿಸೈನ್ ಸಂಸ್ಥೆಯನ್ನು ನಡೆಸುತ್ತಿದ್ದು ಮ್ಯಾಗಝಿನ್ಗಳಿಗೆ ಪುಟ ವಿನ್ಯಾಸ ಮಾಡಿಕೊಡುವ ಕೆಲಸ ನಿರ್ವಹಿಸುತ್ತಿದ್ದರು. ಅರ್ಚನಾ ಅವರು ತನ್ನ ಸಹೋದ್ಯೋಗಿಯ ಸಂಬಂಧಿಕರ ಮನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪತಿ, ಮಕ್ಕಳೊಂದಿಗೆ ಶನಿವಾರ ಕಾರಿನಲ್ಲಿ ಮಡಂತ್ಯಾರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಮರಳುತ್ತಿದ್ದಾಗ ಮಡಂತ್ಯಾರಿನ ಕೊಲ್ಪೆದಬೈಲ್ ಸಮೀಪ ಅಪಘಾತ ಸಂಭವಿಸಿತು. ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ