“ಮಾತೆಯರು ಗೌರಿ ಸ್ವರೂಪಿಗಳಾಗಲಿ’
Team Udayavani, Aug 27, 2017, 7:45 AM IST
ಪುಂಜಾಲಕಟ್ಟೆ : ಸುಸಂಸ್ಕೃತ ಸಮಾಜ ನಿರ್ಮಾಣದ ಪ್ರೇರಕ ಶಕ್ತಿ ತಾಯಿ. ಮಾತೃಶಕ್ತಿ ಮನಸ್ಸು ಮಾಡಿದರೆ ಇಡೀ ಸಮಾಜವನ್ನೇ ಬದಲಿಸಬಹುದು. ಹಿಂದೂ ಸಮಾಜದ ಎಲ್ಲ ಮಾತೆಯರು ಗೌರಿ ಸ್ವರೂಪಿಗಳಾಗಬೇಕು ಎಂದು ಸಹನಾ ಕುಂದರ್ ಸೂಡ ಹೇಳಿದರು.
ಅವರು ಶುಕ್ರವಾರ ಬಂಟ್ವಾಳ ತಾ| ವಾಮದಪದವು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ನಡೆಯುತ್ತಿರುವ 34 ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು.
ಮಂಗಳೂರು ಉದ್ಯಮಿ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಅಧ್ಯಕ್ಷ ರಮೇಶ್ ಶೆಟ್ಟಿ ಕೆ., ಪದಾಧಿಕಾರಿಗಳಾದ ಶಂಕರ ಭಂಡಾರಿ, ದಿನೇಶ್ ಸಾಲ್ಯಾನ್, ಮನೋಜ್ ಶೆಟ್ಟಿ, ಉಮೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ರೇಣುಕಾ ರೈ ಸ್ವಾಗತಿಸಿದರು. ಭಾರತಿ ಶೆಟ್ಟಿ ಬದ್ಯಾರು ವಂದಿಸಿದರು. ಸೇವಂತಿ ಕಾರ್ಯಕ್ರಮ ನಿರೂಪಿಸಿದರು.
ಮಹಿಳೆಗೆ ತುಳುನಾಡ ಸಂಸ್ಕೃತಿ ಉಳಿಸುವ ಜವಾಬ್ದಾರಿ ತನ್ನ ಮನೆ, ಸಮಾಜ ರಕ್ಷಣೆಯಲ್ಲಿ ತಾಯಿಯ ಪಾತ್ರ ಮಹತ್ತರವಾಗಿರುವ ಕಾರಣ ತುಳುನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಮಹಿಳೆಯರ ಮೇಲಿದೆ.
– ಸಹನಾ ಕುಂದರ್