ಉದ್ಘಾಟನೆಗೆ ಸಿದ್ಧಗೊಂಡ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರ


Team Udayavani, Jan 28, 2021, 4:50 AM IST

ಉದ್ಘಾಟನೆಗೆ ಸಿದ್ಧಗೊಂಡ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರ

ಉಳ್ಳಾಲ:  ಟ್ರೈಲರ್‌, ಟ್ಯಾಂಕರ್‌ಗಳ ಸಹಿತ ಬೃಹತ್‌ ಗಾತ್ರದ ವಾಹನಗಳಲ್ಲಿ ಸಾಮಾನ್ಯವಾಗಿ ತಮಿಳುನಾಡು ಮೂಲದ ಚಾಲಕರೇ ಹೆಚ್ಚು. ಭಾರೀ ಗಾತ್ರದ ವಾಹನ ಚಲಾಯಿಸುವ ತಮಿಳುನಾಡು ಮೂಲದ ಡ್ರೈವರ್‌ಗಳಿಗೆ ವಿದೇಶದಲ್ಲೂ ಬೇಡಿಕೆ ಇದೆ. ಆದರೆ ಇನ್ನು ಮುಂದೆ ಮಂಗಳೂರು ಮೂಲದ ವಾಹನ ಚಾಲಕರು ಇಂತಹ ಬೃಹತ್‌ ಗಾತ್ರದ ವಾಹನ ಚಲಾವಣೆಗೆ ಸಿದ್ಧರಾಗಲಿದ್ದಾರೆ. ಇದಕ್ಕೆ ಬಂಟ್ವಾಳ ತಾಲೂಕಿನ ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿ ರಾಜ್ಯ ಸರಕಾರದ ಸಾರಿಗೆ ಇಲಾಖೆಯ ದೊಡ್ಡ ವಾಹನ ಚಾಲನಾ ತರಬೇತಿ ಕೇಂದ್ರ ತರಬೇತಿ ನೀಡಲು ಸಿದ್ದಗೊಂಡಿದ್ದು ಇನ್ನೊಂದು ತಿಂಗಳಿನಿಂದ ಇಲ್ಲಿ ತರಬೇತಿ ಆರಂಭವಾಗಲಿದೆ.

ರಾಜ್ಯದಲ್ಲಿ ಈಗಾಗಲೇ ಬೆಂಗಳೂರು ಮತ್ತು ಧಾರವಾಡದಲ್ಲಿ ಭಾರೀ ಗಾತ್ರದ ವಾಹನ ಚಾಲನ ತರಬೇತಿ ನೀಡುವ ಎರಡು ಕೇಂದ್ರಗಳಿವೆ. ಈ ತರಬೇತಿ ಕೇಂದ್ರದಲ್ಲಿ ಈಗಾಗಲೇ ತರಬೇತಿ ನೀಡುವ ಕಾರ್ಯ ನಡೆಯುತ್ತಿದೆ. ಆದರೆ ಕರಾವಳಿ ಪ್ರದೇಶದ ಜನರು ಈ ತರಬೇತಿಯಿಂದ ವಂಚಿತರಾಗಿದ್ದರು. ನೂತನ ತರಬೇತಿ ಕೇಂದ್ರದಿಂದ ಭಾರೀ ವಾಹನ ಚಲಾಯಿಸಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಮುಂದಿನ ಎರಡು ತಿಂಗಳೊಳಗೆ ತರಬೇತಿ ಕಾರ್ಯಗಳು ಆರಂಭವಾಗಲಿವೆ.

15 ಕೋಟಿ ರೂ. ಯೋಜನೆ :

ಕಂಬಳಪದವಿನಲ್ಲಿ ನೂತನವಾಗಿ ಆರಂಭವಾಗಲಿರುವ ತರಬೇತಿ ಕೇಂದ್ರಕ್ಕೆ ಈಗಾಗಲೇ 10 ಎಕ್ರೆ ಪ್ರದೇಶ ಮೀಸಲಿಟ್ಟಿದ್ದು ಈಗಾಗಲೇ ಐದು ಎಕ್ರೆ ಪ್ರದೇಶದಲ್ಲಿ 15 ಕೋ.ರೂ. ವೆಚ್ಚದಲ್ಲಿ ತರಬೇತಿ ಕೇಂದ್ರ ಆಡಳಿತ ಕಚೇರಿ ಮತ್ತು ಚಾಲನ ಟ್ರ್ಯಾಕ್‌ ಗ ಳನ್ನು ನಿರ್ಮಿಸಲಾಗಿದೆ. 30 ದಿನಗಳ ಕಾಲ ನಡೆಯುವ ತರಬೇತಿಯಲ್ಲಿ 100 ಮಂದಿಗೆ ವಸತಿ ವ್ಯವಸ್ಥೆಯಿದ್ದು ಸ್ಥಳೀಯರಿಗೆ ಮನೆಗೆ ಹೋಗಿ ಬಂದು ತರಬೇತಿ ಪಡೆಯಲು ಆವಕಾಶವಿದೆ. ಒಟ್ಟು ಒಂದು ತಿಂಗಳ ಬ್ಯಾಚ್‌ನಲ್ಲಿ 100ಕ್ಕೂ ಹೆಚ್ಚು ಮಂದಿಗೆ ಚಾಲನ ತರಬೇತಿಗೆ ಅವಕಾಶವಿದೆ.

ಆಧುನಿಕ ವಾಹನಗಳ ತರಬೇತಿಗೆ ಪೂರಕ :

ಭಾರೀ ವಾಹನಗಳಾದ ಟ್ಯಾಂಕರ್‌, ಬಸ್‌, ಟ್ರೈಲರ್‌, ಜೆಸಿಬಿ ಸಹಿತ ಈಗಿರುವ ತಂತ್ರಜ್ಞಾನದ ವಾಹನಗಳಿಗೆ ತರಬೇತಿ ನೀಡುವುದರೊಂದಿಗೆ ಆಧುನಿಕ ತಂತ್ರ ಜ್ಞಾನದ ವಾಹನಗಳಿಗೂ ತರಬೇತಿಗೆ ಇಲ್ಲಿ ಅವಕಾಶವಿದೆ. ಸಾಮಾನ್ಯವಾಗಿ ಹೊಸ ತಂತ್ರಜ್ಞಾನದ ಎಂಟರಿಂದ ಒಂಬತ್ತು ಗೇರ್‌ಗಳ ಘನ ವಾಹನಗಳು ರಸ್ತೆಗೆ ಬಂದಾಗ ಈಗಿನ ಚಾಲಕರಿಗೆ ವೈಜ್ಞಾನಿಕವಾಗಿ ಚಾಲನೆ ಮಾಡುವ ತಂತ್ರಗಾರಿಕೆ ಗೊತ್ತಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಸಂಬಂಧಪಟ್ಟ ವಾಹನ ಸಂಸ್ಥೆಗಳ ತಂತ್ರಜ್ಞರು ಈ ವಾಹನದ ಬಗ್ಗೆ ಮಾಹಿತಿ ಮತ್ತು ಚಾಲನೆಯ ತರಬೇತಿ ನೀಡಲು ಸಾಧ್ಯವಾಗುತ್ತದೆ ಎಂದು ಮಂಗಳೂರು ಸಾರಿಗೆ ಇಲಾಖೆಯ ಆರ್‌ಟಿಒ ರಮೇಶ್‌ ವರ್ಣೇಕರ್‌ ತಿಳಿಸಿದ್ದಾರೆ.

ತಮಿಳುನಾಡಿನ ಚಾಲಕರಿಗೆ ಬೇಡಿಕೆ ; 

ಈಗಿರುವ ಭಾರೀ ಗಾತ್ರದ ವಾಹನಗಳಲ್ಲಿ ತಮಿಳುನಾಡಿನ ಚಾಲಕರು ಹೆಚ್ಚಾಗಿ ಕಂಡು ಬರುತ್ತಾರೆ. ವಿದೇಶಗಳಲ್ಲಿಯೂ ಘನ ವಾಹನಗಳ ಚಾಲ ನೆಗೆ ತಮಿಳುನಾಡಿನ ಚಾಲಕರಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಆರಂಭ ವಾಗಲಿರುವ ಈ ಕೇಂದ್ರದಲ್ಲಿ ತರಬೇತಿ ಪಡೆದರೆ ಇಲ್ಲಿ ಸರ್ಟಿಫಿಕೆಟ್‌ನೊಂದಿಗೆ ಈ ಸಂಸ್ಥೆಯಲ್ಲಿ ಕಲಿತ ಚಾಲಕರಿಗೂ ಬೇಡಿಕೆ ಸಾಧ್ಯವಿದ್ದು, ಆಗ ತಮಿಳುನಾಡಿನ ಚಾಲಕರಂತೆ ಮಂಗಳೂರಿನ ಚಾಲಕರಿಗೂ ಆದ್ಯತೆ ಹೆಚ್ಚಲು ಸಾಧ್ಯವಿದೆ ಎನ್ನುತ್ತಾರೆ ಆರ್‌ಟಿಒ ರಮೇಶ್‌ ವರ್ಣೇಕರ್‌.

ಈಗಾಗಲೇ ಇಂತಹ ತರಬೇತಿ ನೀಡುವ ಸಂಸ್ಥೆಗಳನ್ನು ಈ ಕೇಂದ್ರ ನಿರ್ವಹಣೆ ಮಾಡಲು ಟೆಂಡರ್‌ ಕರೆದಿದ್ದು ಮುಂದಿನ ತಿಂಗಳಲ್ಲಿ ಈ ಟೆಂಡರ್‌ ಕಾರ್ಯಪೂರ್ಣಗೊಂಡು ಗುಣಮಟ್ಟದ ತರಬೇತಿ ಕಾರ್ಯ ಆರಂಭಗೊಳ್ಳಲಿದೆ ಎಂದರು.

ಅಭಿವೃದ್ಧಿಗೆ ಪೂರಕ :

ಉಳ್ಳಾಲ ತಾಲೂಕು ಆಗಿ ಪೂರ್ಣ ಪ್ರಮಾಣದ ಕಾರ್ಯ ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ಈ ಸಂದರ್ಭದಲ್ಲಿ ಭಾರೀ ವಾಹನ ತರಬೇತಿ ಕೇಂದ್ರ ಆರಂಭವಾಗುತ್ತಿರುವುದು ಈ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಲಿದೆ. ನೂತನ ಕೇಂದ್ರವನ್ನು ನಡೆಸಲು ಟೆಂಡರ್‌ ಕರೆಯಲಾಗಿದ್ದು, ಈಗಾಗಲೇ ಇಂತಹ ತರಬೇತಿ ನೀಡುವ ಉನ್ನತ ಸಂಸ್ಥೆ ತರಬೇತಿಯ ಜವಾಬ್ದಾರಿ ವಹಿಸಲಿದ್ದು, ಈ ಕೇಂದ್ರದಿಂದ ಯುವ ಚಾಲಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ.

ಜ. 30ಕ್ಕೆ ತರಬೇತಿ ಕೇಂದ್ರ ಉದ್ಘಾಟನೆ  :

ನೂತನವಾಗಿ ನಿರ್ಮಾಣ ಗೊಂಡಿರುವ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರ ಜ. 30ರಂದು ಉದ್ಘಾಟನೆಯಾಗಲಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಹಿತ ಸಂಸದ ನಳಿನ್‌ ಕುಮಾರ್‌ ಕಟೀಲು, ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯು.ಟಿ. ಖಾದರ್‌ ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ  ಸಿದ್ಧರಾಮಯ್ಯ ಅವರ ಸರಕಾರವಿದ್ದಾಗ ಈ ಯೋಜನೆಯನ್ನು ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಂದಿದ್ದೆ. 2018ರಲ್ಲಿ ಶಿಲಾನ್ಯಾಸ ನಡೆದು ಎರಡು ವರ್ಷದಲ್ಲಿ ನೂತನ ಕೇಂದ್ರದ ಕಾಮಗಾರಿ ಸಂಪೂರ್ಣಗೊಂಡಿದೆ. ಎರಡನೇ ಹಂತದಲ್ಲಿ ಲಘು ವಾಹನಗಳ ತರಬೇತಿ ಕೇಂದ್ರ ಸ್ಥಾಪನೆ ನಿಟ್ಟಿನಲ್ಲಿ 7.5 ಕೋಟಿ ರೂ.ಗಳ ಪ್ರಸ್ತಾವವನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದ್ದು, ಐದು ಎಕರೆ ಪ್ರದೇಶಗಳಲ್ಲಿ ಈ ಕಾಮಗಾರಿ ನಡೆಯಲಿದೆ. ಇದರೊಂದಿಗೆ ಉಳ್ಳಾಲ ತಾಲೂಕು ಆಗುವ ಹಿನ್ನೆಲೆಯಲ್ಲಿ ಆರ್‌ಟಿಒ ಕೇಂದ್ರ ಈ ವ್ಯಾಪ್ತಿಯಲ್ಲಿ ಆರಂಭವಾಗಲಿದ್ದು ಪ್ರಸ್ತಾವವನ್ನು ಸಲ್ಲಿಸಲಾಗಿದೆ.  -ಯು.ಟಿ. ಖಾದರ್‌,  ಶಾಸಕರು

ನೂತನ ಕೇಂದ್ರದಲ್ಲಿ ಚಾಲಕರಿಗೆ ಭಾರೀ ಗಾತ್ರದ ವಾಹನ ತರಬೇತಿಯೊಂದಿಗೆ ಈಗಾಗಲೇ ಚಾಲಕರಾಗಿರುವವರು ಲೈಸನ್ಸ್‌ ನವೀಕರಿಸುವ ಸಂದರ್ಭದಲ್ಲಿ ಅವರಿಗೆ ಮೂರು ದಿನಗಳ ತರಬೇತಿ ಕಡ್ಡಾಯವಾಗಲಿದ್ದು ಬಳಿಕವೇ ಅವರ ಲೈಸನ್ಸ್‌ ನವೀಕರಣ ಮಾಡಿಕೊಡಲಾಗುವುದು. ನೂತನ ಸಂಸ್ಥೆಯಲ್ಲಿ ತಜ್ಞರಿಂದಲೇ ತರಬೇತಿ ನೀಡುವ ಕಾರ್ಯವಾಗಲಿದೆ. -ರಮೇಶ್‌ ವರ್ಣೇಕರ್‌, ಆರ್‌ಟಿಒ  ಮಂಗಳೂರು

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.