ಮೋಟಾರು ವಾಹನ ಕಾಯ್ದೆ ನಿಯಮ ಉಲ್ಲಂಘನೆ 90ಕ್ಕೂ ಹೆಚ್ಚು ಪ್ರಕರಣ ದಾಖಲು


Team Udayavani, Jul 7, 2017, 3:45 AM IST

prakarana.jpg

ಸ್ಟೇಟ್‌ಬ್ಯಾಂಕ್‌: ಬಸ್‌ ಪ್ರಯಾಣಕ್ಕೆ ಸಂಬಂಧಿಸಿ ಸಾರ್ವಜನಿ ಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ  ಮಂಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ಗುರುವಾರ ಸ್ಟೇಟ್‌ಬ್ಯಾಂಕ್‌ ಬಳಿ ಕಾರ್ಯಾಚರಣೆ ನಡೆಸಿ ಮೋಟಾರು ವಾಹನ ಕಾಯ್ದೆಯ ವಿವಿಧ ನಿಯಮ ಉಲ್ಲಂಘನೆಗೆ ಸಂಬಂಧಿಸಿ 90ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದರು. 

ಕರ್ಕಶ ಹಾರ್ನ್ಗೆ ಸಂಬಂಧಿಸಿ 65 ಕೇಸು, ಎತ್ತರದ ಮೆಟ್ಟಿಲುಗಳ ಕುರಿತಂತೆ 15 ಪ್ರಕರಣ, ಟಿಕೆಟ್‌ ಮೆಶಿನ್‌ ಇಲ್ಲದ ಹಾಗೂ ಟಿಕೆಟ್‌ ಕೊಡದ 7 ಬಸ್‌ಗಳ ನಿರ್ವಾಹಕರ ವಿರುದ್ಧ ಹಾಗೂ ವಲಯ ನಿಯಮ ಉಲ್ಲಂಘಿಸಿದ 6 ಆಟೋ ರಿಕ್ಷಾ ಚಾಲಕರ ಮೇಲೆ ಪ್ರಕರಣವನ್ನು ದಾಖಲಿಸಿಕೊಂಡರು. ಈ ಎಲ್ಲ ಪ್ರಕರಣಗಳಲ್ಲಿ ಒಟ್ಟು ಸುಮಾರು 6 ಸಾವಿರ ರೂ. ದಂಡವನ್ನು ವಿಧಿಸಲಾಗಿದೆ. 

ಪರವಾನಿಗೆ ಉಲ್ಲಂಘಿಸಿ ಕಾರ್ಯಾಚರಿಸಿದ 8 ಕಾಂಟ್ರ್ಯಾಕ್ಟ್  ಕ್ಯಾರೇಜ್‌ ಮತ್ತು 2 ಸರ್ವಿಸ್‌ ಬಸ್‌ಗಳ 
ವಿರುದ್ಧ ಬುಧವಾರ ಕೇಸು ದಾಖಲಿಸಲಾಗಿತ್ತು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್‌.ಹೆಗಡೆ ಅವರು ತಿಳಿಸಿದ್ದಾರೆ. 

ಮುಂಬರುವ ದಿನಗಳಲ್ಲಿ  ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಜಂಟಿ ಸಹಯೋಗದಲ್ಲಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ತಿಳಿಸಿದರು. 

ಬಸ್‌ಗಳ ಮೆಟ್ಟಿಲುಗಳು ನೆಲದಿಂದ 52 ಸೆಂಟಿ ಮೀಟರ್‌ ಎತ್ತರದಲ್ಲಿ ಇರಬೇಕೆಂಬ ನಿಯಮವಿದೆ. ಆದರೆ ಕೆಲವು ಬಸ್‌ಗಳ ಮಾಲಕರು ಈ ನಿಯಮವನ್ನು  ಪಾಲನೆ ಮಾಡಿಲ್ಲ. ಮೆಟ್ಟಿಲು ಎತ್ತರದಲ್ಲಿ ಇರುವುದರಿಂದ ಮಕ್ಕಳು, ಮಹಿಳೆಯರು ಮತ್ತು  ಹಿರಿಯ ನಾಗರಿಕರಿಗೆ ಬಸ್‌ ಹತ್ತಿ, ಇಳಿಯಲು ಕಷ್ಟವಾಗುತ್ತಿದೆ. ಇಂತಹ ಬಸ್‌ಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ಬಸ್‌ಗಳ ನಿಯಮ ಉಲ್ಲಂಘನೆ
ಕಾಂಟ್ರ್ಯಾಕ್ಟ್  ಕ್ಯಾರೇಜ್‌ ಬಸ್‌ಗಳು ಸರ್ವಿಸ್‌ ಬಸ್‌ ನಿಲ್ದಾಣ ಪ್ರವೇಶಿಸುವಂತಿಲ್ಲ. ಹಾಗೆಯೇ ಕೆಲವು ಸರ್ವಿಸ್‌ ಬಸ್‌ಗಳಿಗೆ ಮಲ್ಲಿಕಟ್ಟೆ, ಕಂಕನಾಡಿ ತನಕ ಮಾತ್ರ ಪರವಾನಿಗೆ ಇರುತ್ತದೆ ಎಂದರು. 

ಪರವಾನಿಗೆ ಇರುವ ಬಸ್‌ಗಳಲ್ಲಿ ಕೆಲವು ಬಸ್‌ಗಳು ನಿಯಮ ಉಲ್ಲಂಘಿಸಿ ಕಾರ್ಯಾಚರಿಸುತ್ತಿವೆ.  ಅವುಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ವಿವರಿಸಿದರು.

ಕಾರ್ಯಾಚರಣೆ 
ಮಂಗಳೂರು ನಗರದೊಳಗೆ ಸಂಚರಿಸಲು 2500ರಷ್ಟು ಆಟೋರಿಕ್ಷಾಗಳು ಮಾತ್ರ ಪರವಾನಿಗೆ ಪಡೆದಿವೆ. ಆದರೆ ಈಗ ಸುಮಾರು 6500ರಷ್ಟು ಆಟೋಗಳು ಓಡಾಡುತ್ತಿವೆ. ನಗರದ ಹೊರ ವಲಯಲ್ಲಿ ಗ್ರಾಮೀಣ ಪರವಾನಿಗೆಯನ್ನು ಪಡೆದು ನಗರದಲ್ಲಿ ಬಾಡಿಗೆ ಮಾಡುವ ರಿಕ್ಷಾ ಚಾಲಕ/ ಮಾಲಕರ ವಿರುದ್ಧ ಕಾರ್ಯಾಚರಣೆ ನಡೆಸಲಾಗುವುದು ಎಂದರು. 
ಗುರುವಾರ ನಡೆದ ಕಾರ್ಯಾಚರಣೆಯ ಸಂದರ್ಭ ದಲ್ಲಿ ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಮೋಹನ್‌ ಕೊಟ್ಟಾರಿ, ದಕ್ಷಿಣ ಕನ್ನಡ ಬಸ್‌ ಮಾಲಕರ ಸಂಘದ ಅಧ್ಯಕ್ಷ  ಅಜೀಜ್‌ ಪರ್ತಿಪಾಡಿ  ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.