ಸೈಕಲ್ ಬಳಕೆ ಪರಿಸರಸ್ನೇಹಿ: ಜಯಾನಂದ ಬಂಟ್ರಿಯಾಲ್
Team Udayavani, Jul 11, 2017, 3:20 AM IST
ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ಪ್ರೌಢ ಶಾಲಾ 8ನೇ ತರಗತಿ ಮಕ್ಕಳಿಗೆ ಸರಕಾರದ ಉಚಿತ ಸೈಕಲ್ ವಿತರಿಸಲಾಯಿತು. 26 ಹುಡುಗರು ಮತ್ತು 24 ಹುಡುಗಿಯರು ಈ ಸೌಲಭ್ಯದ ಫಲಾನುಭವಿಗಳಾಗಿದ್ದರು.
ಅತಿಥಿಗಳಾಗಿ ಆಗಮಿಸಿ ಸೈಕಲ್ ವಿತರಿಸಿದ ನೆಲ್ಯಾಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಸರ್ವೋತ್ತಮ ಗೌಡರು ಸೈಕಲ್ಗಳನ್ನು ಕಲಿಕೆಗೆ ಪೂರಕವಾಗಿ ಬಳಸಿಕೊಳ್ಳಿ ಎಂದು ಹೇಳಿದರು.
ಪುತ್ತೂರು ತಾಲೂಕು ಪಂಚಾçತ್ ಸದಸ್ಯೆ ಉಷಾ ಅಂಚನ್ ಮಾತನಾಡಿ ಸೈಕಲ್ ಬಳಕೆಯಿಂದ ಹೆಣ್ಣು ಮಕ್ಕಳಲ್ಲಿ ಧೈರ್ಯ, ಸ್ಥೆ „ರ್ಯ ಹೆಚ್ಚುತ್ತದೆ ಎಂದರು.ನೆಲ್ಯಾಡಿ ಪಂಚಾಯತ್ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಅವರು ಮಾತನಾಡಿ ಸೈಕಲ್ ಬಳಕೆ ಪರಿಸರ ಮಾಲಿನ್ಯ ತಡೆಯುವಲ್ಲಿ ಬಲುದೊಡ್ಡ ಕೊಡುಗೆಯಾಗಿದೆ ಎಂದರು.
ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್ ಅವರು ಫಲಾನುಭವಿ ಮಕ್ಕಳಿಗೆ ಎಚ್ಚರಿಕೆಯಿಂದ ಸೈಕಲ್ ಬಳಸಲು ಕರೆ ನೀಡಿದದು. ಮುಖ್ಯ ಶಿಕ್ಷಕಿ ಸರೋಜಾಕುಮಾರಿ ಸ್ವಾಗತಿಸಿ ಶಿಕ್ಷಕ ಉಲಹನ್ನನ್ ವಂದಿಸಿದರು. ಪ್ರಾಚಾರ್ಯ ಎಂ. ಕೆ. ಏಲಿಯಾಸ್, ಮುಖ್ಯಗುರು ಹರಿಪ್ರಸಾದ್, ಶಿಕ್ಷಕರಾದ ಕೆ.ಸಿ. ಪೌಲೋಸ್ ಪ್ರಮೀಳಾ ಅತಿಥಿಗಳನ್ನು ಗೌರವಿಸಿದರು. ಶಿಕ್ಷಕ ಎಂ. ಐ. ತೋಮಸ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?