MP ಡಿ.ಕೆ. ಸುರೇಶ್ ವಿರುದ್ಧ ನ್ಯಾಯಾಲಯದಲ್ಲಿ ದೂರು
Team Udayavani, Feb 3, 2024, 12:17 AM IST
ಮಂಗಳೂರು: ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ವಿರುದ್ಧ ಮಂಗಳೂರಿನ ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರು 2ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ ದೂರು ನೀಡಿದ್ದಾರೆ.
ಸಂಸದ ಸುರೇಶ್ ಬಜೆಟ್ ಪ್ರತಿಕ್ರಿಯೆ ಸಂದರ್ಭ, ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮುಂದುವರಿದರೆ ದಕ್ಷಿಣ ಭಾರತದವರು ಪ್ರತ್ಯೇಕ ರಾಷ್ಟ್ರದ ಕೂಗು ಎತ್ತುವುದು ಅನಿವಾರ್ಯವಾಗಲಿದೆ ಎಂದು ಹೇಳಿಕೆ ನೀಡಿದ್ದರು. ಈ ರೀತಿಯ ಹೇಳಿಕೆ ದೇಶದ್ರೋಹಿ, ಭಯೋತ್ಪಾದಕರಿಗೆ ಮತ್ತು ಭಾರತವನ್ನು ತುಂಡರಿಸಬೇಕು ಎಂದು ಷಡ್ಯಂತರ ರೂಪಿಸುವ ಪ್ರತ್ಯೇಕವಾದಿಗಳಿಗೆ ಕುಮ್ಮಕ್ಕು ನೀಡುವ ರೀತಿಯಲ್ಲಿದೆ.
ಭಾರತೀಯ ದಂಡ ಸಂಹಿತೆಯ ಕಲಂ 124 ಎ ಅನ್ವಯ ಇದು ಅಪರಾಧವಾಗುತ್ತದೆ. ಆದ್ದರಿಂದ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣಾಧಿಕಾರಿಗೆ ತನಿಖೆ ಮತ್ತು ವರದಿಗಾಗಿ ಆದೇಶಿಸುವಂತೆ ದೂರುದಾರ ವಿಕಾಸ್ ಪುತ್ತೂರು ಅವರು ಪಿರ್ಯಾದಿನಲ್ಲಿ ವಿನಂತಿಸಿದ್ದಾರೆ.ಈ ಬಗ್ಗೆ ನ್ಯಾಯಾಲಯ ಫೆ. 7ರಂದು ತೀರ್ಮಾನಿಸುವುದಾಗಿ ತಿಳಿಸಿದೆ ಎಂದು ವಿಕಾಸ್ ಪುತ್ತೂರು ತಿಳಿಸಿದ್ದಾರೆ.
ಅರ್ಜಿದಾರರ ಪರ ವಕೀಲ ಮೋಹನರಾಜ್ ಕೆ.ಆರ್., ಬಿಜೆಪಿ ಯುವ ಮುಖಂಡ ಗುರುಚರಣ್ ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ
Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ
Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ