ಮಂಗಳೂರು ಅಭಿವೃದ್ಧಿಯಲ್ಲಿ ಸಂಸದರ ನಿರ್ಲಕ್ಷ್ಯ: ಎಸ್ಡಿಪಿಐ
Team Udayavani, Apr 9, 2019, 6:03 AM IST
ಮಹಾನಗರ: ಜಾಗತಿಕವಾಗಿ ಹೆಸರುವಾಸಿಯಾದ ಮಂಗಳೂರಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಡ್ರೈನೇಜ್ ಸಮಸ್ಯೆ ದೊಡ್ಡ ಮಟ್ಟದಲ್ಲಿ ಮುಂದು ವರಿದಿದೆ. ಗುಣಮಟ್ಟದ ರಸ್ತೆ, ಬಸ್ ನಿಲ್ದಾಣ ವ್ಯವಸ್ಥೆಯನ್ನು ಮಾಡಲು ಸಂಸದರಿಗೆ ಸಾಧ್ಯವಾಗಿಲ್ಲ ಎಂದು ಎಸ್ಡಿಪಿಐ ಪಕ್ಷದ ದ.ಕ. ಲೋಕಸಭಾ ಅಭ್ಯರ್ಥಿ ಮಹಮ್ಮದ್ ಇಲಿಯಾಸ್ ತುಂಬೆ ಅವರು ತಿಳಿಸಿದ್ದಾರೆ.
ನಗರದ ಸೆಂಟ್ರಲ್ ಮಾರುಕಟ್ಟೆ, ಸ್ಟೇಟ್ ಬ್ಯಾಂಕ್, ಬಂದರು, ಕುದ್ರೋಳಿ ಸುತ್ತ ಮುತ್ತ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಿ ಅವರು ಮಾತನಾಡಿದರು.
ಸೆಂಟ್ರಲ್ ಮಾರುಕಟ್ಟೆ ಮತ್ತು ಕೇಂದ್ರ ಬಸ್ ನಿಲ್ದಾಣ ತುರ್ತಾಗಿ ಆಧುನೀ ಕರಣಗೊಳ್ಳಬೇಕಾಗಿದೆ. ಕಂದಕ್, ಬಂದರು ಮತ್ತು ಕುದ್ರೋಳಿ ಪ್ರದೇಶಗಳಲ್ಲಿ ಹತ್ತು ಹಲವು ಸಮಸ್ಯೆಗಳಿವೆ. ಎಸ್ಡಿಪಿಐ ಪಕ್ಷದ ಸಂಸದರಾಗಿ ಜನರು ಆಯ್ಕೆ ಮಾಡಿದರೆ ನಗರವನ್ನು ತುರ್ತಾಗಿ ಅಭಿವೃದ್ಧಿಗೊಳಿಸಲು ತಾನು ಬದ್ಧ, ಹಳೆ ಬಂದರಿನ ಮೀನುಗಾರಿಕೆ ಜೆಟ್ಟಿ ಸಮಸ್ಯೆ ಪರಿಹರಿಸಬೇಕಾಗಿದೆ ಎಂದು ಅವರು ಹೇಳಿದರು.
ಎಸ್ಡಿಪಿಐ ಮುಖಂಡರಾದ ಜಲೀಲ್ ಕೆ., ಅಕ್ರಮ್ ಹಸನ್, ಅಥಾವುಲ್ಲಾ ಜೋಕಟ್ಟೆ, ಅಶ್ರಫ್ ಮಂಚಿ, ಸುಹೇಲ್ಖಾನ್, ಹಾರಿಸ್ ಮಲಾರ್, ಮುಝೈರ್ ಕುದ್ರೋಳಿ, ಚುನಾವಣ ಮುಖ್ಯಉಸ್ತುವಾರಿ ಅಬ್ದುಲ್ ಹನ್ನಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ