ಬಾಂದ ಕೆರೆ ಅಭಿವೃದ್ಧಿಗೆ ಎಂಆರ್‌ಪಿಎಲ್‌ ನೆರವು : ಡಾ| ಸೆಲ್ವಮಣಿ

ಪಡುಪಣಂಬೂರು ಗ್ರಾಮ ಪಂಚಾಯತ್‌ಗೆ ಜಿಲ್ಲಾ ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ ಭೇಟಿ

Team Udayavani, May 23, 2019, 6:06 AM IST

2205HALE-1

ಪಡುಪಣಂಬೂರು: ಇಲ್ಲಿನ ಗ್ರಾಮ ಪಂಚಾಯತ್‌ ವ್ಯಾಪ್ತಿ ಯಲ್ಲಿರುವ ಬಾಂದ ಕೆರೆಯನ್ನು ಸಂಪೂರ್ಣವಾಗಿ ಎಂಆರ್‌ಪಿಎಲ್‌ ಸಂಸ್ಥೆಯು ಅಭಿವೃದ್ಧಿ ಪಡಿಸಲಿದ್ದು ಇದರ ನೀಲ ನಕ್ಷೆ ಹಾಗೂ ಯೋಜನೆಯ ಉಸ್ತುವಾರಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಎಂಜಿನಿಯರಿಂಗ್‌ ವಿಭಾಗವು ನಿಭಾಯಿಸಲಿದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಡಾ| ಸೆಲ್ವಮಣಿ ಹೇಳಿದರು.

ಪಡುಪಣಂಬೂರು ಗ್ರಾ.ಪಂ.ನ ಬಾಂದ ಕೆರೆಯ ಪ್ರದೇಶಕ್ಕೆ ವಿಶೇಷ ತಂಡದೊಂದಿಗೆ ತೆರಳಿ ಅನಂತರ ಮಾಧ್ಯಮ
ದೊಂದಿಗೆ ಅವರು ಮಾತನಾಡಿದರು.

ಎಂಆರ್‌ಪಿಎಲ್‌ನ ಚೀಫ್‌ ಜನರಲ್‌ ಮ್ಯಾನೇಜರ್‌ ಹರೀಶ್‌ ಬಾಳಿಗಾ ಪ್ರತಿಕ್ರಿಯಿಸಿ, ಸಂಸ್ಥೆಯ ಸಿಆರ್‌ಎಫ್‌ನ ಯೋಜನೆಯಲ್ಲಿ ಕೆರೆ ಯನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲು ಇಚ್ಛಿಸಲಾಗಿದೆ. ಕೆರೆಯನ್ನು ಪಾರಂಪರಿಕವಾಗಿಯೇ ನಿರ್ಮಿಸುವುದು, ಸುತ್ತಮುತ್ತ ವಾಕ್‌ಪಾತ್‌, ರಕ್ಷಣಾ ಬೇಲಿ ಸಹಿತ ಉದ್ಯಾನವನ ನಿರ್ಮಾಣದ ಬಗ್ಗೆ ಚಿಂತನೆ ಇದೆ. ಜಿಲ್ಲಾ ಪಂಚಾಯತ್‌ನ ಎಂಜಿನಿಯರ್‌ಗಳು ರೂಪಿಸುವ ನೀಲನಕ್ಷೆ ಸಹಿತ ಟೆಂಡರ್‌ ಪ್ರಕ್ರಿಯೆಗಳನ್ನು ಮುಗಿಸಿ ವರ್ಷದ ಅವಧಿಯಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ. ನ ಸದಸ್ಯ ವಿನೋದ್‌ ಬೊಳ್ಳೂರು, ಪಡುಪಣಂಬೂರು ಗ್ರಾ.ಪಂ.ನ ಅಧ್ಯಕ್ಷ ಮೋಹನ್‌ದಾಸ್‌, ಮೂಲ್ಕಿ ಅರಮನೆಯ ಗೌತಮ್‌ ಜೈನ್‌, ಪಂಚಾಯತ್‌ ಸದಸ್ಯರು ಸಲಹೆಗಳನ್ನು ನೀಡಿದರು.

ಮೂಲ್ಕಿ ಸೀಮೆಯ ಅರಸರಾದ ಎಂ. ದುಗ್ಗಣ್ಣ ಸಾವಂತರು, ಎಂಆರ್‌ಪಿಎಲ್‌ನ ಸೀನಿಯರ್‌ ಮ್ಯಾನೇಜರ್‌ ರಾಮ ಸುಬ್ರಹ್ಮಣ್ಯಂ ,ಜಿ.ಪಂ.ಎಂಜಿನಿಯರ್‌ಗಳಾದ ಪ್ರಭಾಕರ್‌, ಪ್ರಶಾಂತ್‌ ಆಳ್ವ. ಪಡುಪಣಂಬೂರು ಗ್ರಾ.ಪಂ.ಸದಸ್ಯರಾದ ಉಮೇಶ್‌ ಪೂಜಾರಿ ಪಿ.,ಮಂಜುಳಾ,ಪಂ.ಅಭಿವೃದ್ಧಿ ಅಧಿ ಕಾರಿ ಅನಿತಾ ವಿ.ಕ್ಯಾಥರಿನ್‌,ಕಾರ್ಯದರ್ಶಿ ಲೋಕನಾಥ ಭಂಡಾರಿ,ಸಿಬಂದಿ,ಗ್ರಾಮಸ್ಥರು ಉಪಸ್ಥಿತರಿದ್ದರು.

ಕೃಷಿಗೆ ವರದಾನ
ಸುಮಾರು 30 ಸೆಂಟ್ಸ್‌ ಸರಕಾರಿ ಭೂಮಿಯಾಗಿರುವ ಬಾಂದ ಕೆರೆಯಲ್ಲಿನ ನೀರು ಇಲ್ಲಿನ ಕಂಬಳ,ಕೃಷಿ ಭೂಮಿಗಳಿಗೆ ವರದಾನವಾಗಿದೆ.ಇದರಲ್ಲಿ ಈಗ ಹೂಳು ತುಂಬಿದ್ದರೂ ಕನಿಷ್ಠ 7ರಿಂದ 8 ಅಡಿ ನೀರಿದೆ.ಹೂಳೆತ್ತಿ,
ಆಳವಾಗಿಸಿದರೆ ಉಪ್ಪು ನೀರಿನ ಅಪಾಯವು ಇದೆ.ಕೆರೆ ಅಭಿವೃದ್ಧಿ ಪಡಿಸಿದರೆ ಸುತ್ತ ಮುತ್ತಲಿನ 3 ಕಿ.ಮೀ. ವ್ಯಾಪ್ತಿಯ ನೀರಿನ ಒರತೆಗೆ ಜೀವಜಲವಾಗಲಿದೆ.

ಎಚ್ಚರಿಸಿದ್ದ ಉದಯವಾಣಿ ಸುದಿನ
ಪಡುಪಣಂಬೂರು ಗ್ರಾ.ಪಂ. ವ್ಯಾಪ್ತಿಯ ವಿವಿಧ ಕೆರೆಗಳು ಹಾಗೂ ಅದರ ಅವಶ್ಯಕತೆ ಬಗ್ಗೆ ಉದಯವಾಣಿ ಸುದಿನ ವರದಿ ಪ್ರಕಟಿಸಿತ್ತು. ಆ ವರದಿಗಳು ಸಹ ಮನವಿಯೊಂದಿಗೆ ಸಲ್ಲಿಕೆ ಮಾಡಲಾಗಿತ್ತು.

 ಎರಡು ವರ್ಷಗಳ ಹಿಂದೆಯೇ ಯೋಜನೆ
ಪಡುಪಣಂಬೂರು ಗ್ರಾ.ಪಂ. ಶಾಶ್ವತ ಕುಡಿಯುವ ನೀರಿಗಾಗಿ ಯೋಜನೆಯನ್ನು ಎರಡು ವರ್ಷಗಳ ಹಿಂದೆಯೇ ರೂಪಿಸಿತ್ತು. ಅದರಂತೆ ಎಂಆರ್‌ಪಿಎಲ್‌ಗೆ ಜಿ.ಪಂ.ನ ಮಾರ್ಗದರ್ಶನದಲ್ಲಿ ಮನವಿ ನೀಡಲಾಗಿತ್ತು. ನಿರಂತರ ಪ್ರಯತ್ನದಿಂದ ಇಂದು ಅದು ಫಲ ನೀಡಿದೆ. ತೋಕೂರಿನಲ್ಲಿ ಕಿಂಡಿ ಅಣೆಕಟ್ಟುಗಳು ಆಸರೆಯಾದರೇ ಪಡುಪಣಂಬೂರು, ಬೆಳ್ಳಾಯರುವಿನ ಒಂದು ಭಾಗಕ್ಕೆ ಬಾಂದ ಕೆರೆ ನೆರವಾಗಲಿದೆ.
 - ಅನಿತಾ ಕ್ಯಾಥರಿನ್‌,
ಅಭಿವೃದ್ಧಿ ಅಧಿಕಾರಿ, ಪಡುಪಣಂಬೂರು ಗ್ರಾ.ಪಂ.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.