ಮುಚ್ಚಾರು ಗ್ರಾ.ಪಂ.: ಅಂತರ್ಜಾಲ ಸೇವೆ ಕಡಿತ


Team Udayavani, May 25, 2018, 10:10 AM IST

25-may-1.jpg

ಮುಚ್ಚಾರು: ಇಲ್ಲಿನ ಗ್ರಾಮ ಪಂಚಾಯತ್‌ನ ಅಂತರ್ಜಾಲ ಸೇವೆಯು ಮೇ 21ರಿಂದ ಕಡಿತವಾಗಿದ್ದು, ಗ್ರಾ.ಪಂ.ನ ಆನ್‌ಲೈನಿಂದ ಸಿಗುವ ಸೇವಾ ಸೌಲಭ್ಯಗಳು ನಿಂತು ಹೋಗಿವೆ. ಇದರಿಂದಾಗಿ ಗ್ರಾಮದ ಜನರಿಗೆ ತೊಂದರೆಯಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಮುಚ್ಚಾರು ಗ್ರಾ. ಪಂ. 2008-09 ರಿಂದ ಗ್ರಾಮಸ್ಥರಿಗೆ ಅಂತರ್ಜಾಲದಿಂದ ಹಲವು ಸೇವೆಗಳನ್ನು ನೀಡುತ್ತಾ ಬಂದಿದೆ. ಪಂಚತಂತ್ರ, ಮಿಂಚಂಚೆ, ಗಾಂಧಿ ಸಾಕ್ಷಿ ಕಾಯಕ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸಕಾಲ, ಇ-ಸ್ವತ್ತು, ಪಡಿತರ ಚೀಟಿ, ಬಾಪೂಜಿ ಸೇವಾ ಕೇಂದ್ರ ಹಾಗೂ ಇತರ ಸೇವೆಗಳನ್ನು ಗ್ರಾಮ ಪಂಚಾಯತ್‌ನಲ್ಲಿ ನೀಡಲಾಗುತ್ತಿತ್ತು. ಈ ಸೇವೆಗಳು ಹಾಗೂ ದೂರವಾಣಿ ಸೇವೆ ಸೇರಿ ಪ್ರತಿ ತಿಂಗಳು ಸರಾಸರಿ 4,364 ರೂ. ಪಂಚಾಯತ್‌ ಪಾವತಿಸುತ್ತಿದೆ.

ಗ್ರಾ.ಪಂ. ನಲ್ಲಿ ಅಂತರ್ಜಾಲ ವ್ಯವಸ್ಥೆ ಉತ್ತಮ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಒಪ್ಟಿಕಲ್‌ ಫೈಬರ್‌ ಕೇಬಲ್‌ ಅಳವಡಿಸಲು ಕ್ರಮಕೈಗೊಂಡಿದೆ ಹಾಗೂ ಒಎಫ್‌ಸಿ ದರಗಳು ತುಂಬ ದುಬಾರಿ ಆಗಿದೆ. ಯೋಜನೆ ದರ ರೂ.1,499 ನಿಯಮಗಳ ಅವಕಾಶಗಳಿಂದ ಅಧಿಕವಾಗಿರುತ್ತದೆ.

ಅಧಿಕ ಬಿಲ್‌ಗೆ ಅವಕಾಶ ಇಲ್ಲ
ಕರ್ನಾಟಕ ಗ್ರಾ.ಪಂ. ಆಯವ್ಯಯ ಮತ್ತು ಲೆಕ್ಕ ನಿಯಮಗಳ ಪ್ರಕಾರ 2006ರಲ್ಲಿ 1,000 ರೂ. ಗಿಂತ ಹೆಚ್ಚು ಬಿಲ್‌ಗೆ ಅವಕಾಶ ವಿಲ್ಲ. ಲೆಕ್ಕ ಪರಿಶೋಧನೆಯಲ್ಲಿ ದತ್ತಾಂಶ ಮೊತ್ತ 1,000 ರೂ. ಅನಂತರ ಹೆಚ್ಚಿನ ಮೊತ್ತವನ್ನು ಅಧ್ಯಕ್ಷರು, ಕಾರ್ಯದರ್ಶಿ, ಪಿಡಿಒ ದೂರವಾಣಿ ವೆಚ್ಚವನ್ನು ಪಂಚಾಯತ್‌ ನಿಧಿಗೆ ಜಮೆ ಮಾಡಲು ಅದೇಶಿಸಿದೆ. ಈ ನಿಯಮ 2006ರಲ್ಲಿ ತಯಾರಾಗಿದ್ದು ಆಗ ಗ್ರಾಮ ಪಂಚಾಯತ್‌ ನಲ್ಲಿ ಈ ಎಲ್ಲ ಸೌಲಭ್ಯಗಳು ಸಿಗುತ್ತಿರಲಿಲ್ಲ.

ಈ ಬಗ್ಗೆ ಮುಚ್ಚಾರು ಪಂ. ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಣಾಧಿ ಕಾರಿಗಳ ಮೂಲಕ ಜಿಲ್ಲಾ ಪಂಚಾಯತ್‌ಗೆ ಮನವಿ ಮಾಡಲಾಗಿದೆ.

ಈ ಬಗ್ಗೆ ಕ್ರಮ ತೆಗೆದುಕೊಳ್ಳದ ಕಾರಣ ಒಟ್ಟು ಬಿಲ್‌ 12,097 ರೂ. ಎ. 30ಕ್ಕೆ ಆಗಿದೆ. ಇದನ್ನು ಕಟ್ಟದ ಕಾರಣ ಬಿಎಸ್‌ಎನ್‌ಎಲ್‌ ಸಂಸ್ಥೆ ಮೇ 21ರಂದು ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸಿದೆ.

ವರದಿ ಸಲ್ಲಿಕೆ
ಈ ಬಗ್ಗೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ವರದಿಯನ್ನು ಜಿ.ಪಂ. ಗೆ ಮೇ 22ರಂದು ಸಲ್ಲಿಸಿದ್ದಾರೆ. ಪಂಚಾಯತ್‌ ಅಧ್ಯಕ್ಷರು ಹಾಗೂ ಸದಸ್ಯರು ಇದರಿಂದ ಜನರಿಗೆ ಆಗುವ ಸಮಸ್ಯೆಯ ಬಗ್ಗೆ ಚರ್ಚಿಸಲಾಗಿದೆ. ಮುಂದಿನ ಅಗತ್ಯ ಕ್ರಮವನ್ನು ಸರಕಾರ ನಿರ್ಧರಿಸಬೇಕು.
– ವೀರಪ್ಪ ಗೌಡ
ಗ್ರಾ. ಪಂ. ಅಧ್ಯಕ್ಷ

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.