ನಾಮಪತ್ರ ಹಿಂಪಡೆಯಲು ಹಣ ಪಡೆದಿಲ್ಲ

ಸ್ಪಷ್ಟನೆಗಾಗಿ ಧರ್ಮಸ್ಥಳ ಭೇಟಿ: ಮುದ್ದಹನುಮೇಗೌಡ

Team Udayavani, May 3, 2019, 9:37 AM IST

mudda-hanuma

ಬೆಳ್ತಂಗಡಿ: ತುಮಕೂರು ಕ್ಷೇತ್ರದಲ್ಲಿ ನಾಮಪತ್ರ ಹಿಂಪಡೆಯಲು ಯಾರಿಂದಲೂ ಬಿಡಿ ಗಾಸು ಪಡೆದಿಲ್ಲ. ನನ್ನ ಮೇಲೆ ಭರವಸೆ ಇಟ್ಟಿರುವ ಜನತೆಗೆ ಇದನ್ನು ಸ್ಪಷ್ಟಪಡಿಸಲು ಅನಿವಾರ್ಯವಾಗಿ ಧರ್ಮಸ್ಥಳಕ್ಕೆ ಬರಬೇಕಾಯಿತು ಎಂದು ತುಮ ಕೂರಿನ ಸಂಸದ ಎಸ್‌. ಪಿ. ಮುದ್ದಹನುಮೇಗೌಡ ಹೇಳಿದ್ದಾರೆ.

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುದ್ದ ಹನುಮೇಗೌಡ ಬಳಿಕ ನಾಮಪತ್ರ ಹಿಂಪಡೆದಿದ್ದರು. ಇದಕ್ಕಾಗಿ ಅವರಿಗೆ 3.5 ಕೋ.ರೂ. ಹಣ ಸಂದಾಯವಾಗಿದೆ ಎಂಬ ಆಡಿಯೋ ವೈರಲ್‌ ಆಗಿರುವ ಹಿನ್ನೆಲೆಯಲ್ಲಿ ಗುರುವಾರ ಅವರ ಭೇಟಿ ತೀವ್ರ ಕುತೂಹಲ ಸೃಷ್ಟಿಸಿತ್ತು.

ಗುರುವಾರ ಧರ್ಮಸ್ಥಳಕ್ಕೆ ಸ್ನೇಹಿತರ ಜತೆ ಆಗಮಿಸಿದ ಮುದ್ದಹನುಮೇಗೌಡ ದೇವರ ದರ್ಶನ ಪಡೆದರು. ಬಳಿಕ ಕ್ಷೇತ್ರದ ಮುಂಭಾಗದಲ್ಲೇ ಪತ್ರಕರ್ತರ ಜತೆ ಮಾತನಾಡಿದರು.

ನಾಮಪತ್ರ ಹಿಂಪಡೆಯಲು ನಾನು ಕೋಟ್ಯಂತರ ಹಣ ಪಡೆದಿದ್ದೇನೆ ಎಂದು ಆಡಿಯೋ ವೈರಲ್‌ ಆಗಿದೆ. ಇದರಿಂದ ನನ್ನ ಬಗ್ಗೆ ತಪ್ಪು ಅಭಿಪ್ರಾಯ ಮೂಡು ವಂತಾಗಿದೆ. ನನ್ನ ರಾಜಕೀಯ ಬೆಳವಣಿಗೆಯನ್ನು ಸಹಿಸದವರು ಈ ರೀತಿ ಮಾಡಿರುವ ಸಾಧ್ಯತೆ ಇದೆ ಎಂದ ವರು ಹೇಳಿದರು.

ನಾನು 10 ವರ್ಷಗಳ ಕಾಲ ಕುಣಿಗಲ್‌ ಶಾಸಕನಾಗಿ, 2019ರಿಂದ ಸಂಸದನಾಗಿ ಕೆಲಸ ಮಾಡಿದ್ದೇನೆ. ಯಾರಿಂದಲೂ ಹಣ ಪಡೆದಿಲ್ಲ ಎಂಬುದನ್ನು ಜನತೆಗೆ ಸ್ಪಷ್ಟಪಡಿಸಲು ಅನಿವಾರ್ಯವಾಗಿ ಧರ್ಮಸ್ಥಳಕ್ಕೆ ಅನಿವಾರ್ಯ ವಾಗಿ ಬಂದಿದ್ದೇನೆ. ನನ್ನ ವಿರುದ್ಧ ಆರೋಪ ಹೊರಿಸಿದವರಿಗೆ ದೇವರೇ ಬುದ್ಧಿ ಕೊಡಲಿ ಎಂದು ವಿವರಿಸಿದರು.

ಮನವರಿಕೆಯಾಗಿ ಹಿಂದೆಗೆತ
ಅಸಮಾಧಾನಗೊಂಡು ನಾಮಪತ್ರ ಸಲ್ಲಿಸಿದ್ದು ನಿಜ. ಆದರೆ ಪಕ್ಷದ ಪ್ರಮುಖರಾದ ರಾಹುಲ್‌ ಗಾಂಧಿ, ಕೆ.ಸಿ. ವೇಣುಗೋಪಾಲ್‌, ಸಿದ್ದರಾಮಯ್ಯ, ಡಾ| ಜಿ. ಪರಮೇಶ್ವರ್‌ ಮತ್ತು ದಿನೇಶ್‌ ಗುಂಡೂ ರಾವ್‌ ಅವರು ಮೈತ್ರಿ ಅಭ್ಯರ್ಥಿಗೆ ಸೀಟು ಬಿಟ್ಟುಕೊಡುವ ಅನಿವಾರ್ಯ ತೆಯನ್ನು ಮನವರಿಕೆ ಮಾಡಿದ ಬಳಿಕ ನಾಮಪತ್ರ ಹಿಂಪಡೆದು ಮೈತ್ರಿ ಅಭ್ಯರ್ಥಿಯ ಪರ ಪ್ರಚಾರ ನಡೆಸಿದ್ದೇನೆ.

ಪ್ರಸ್ತುತ ಈ ಆಡಿಯೋ ವೈರಲ್‌ ಆಗುತ್ತಿದ್ದು, ಇದಕ್ಕೆ ಸ್ಪಷ್ಟನೆ ಕೊಡ ಬೇಕಾ ದವರು ಸುಮ್ಮನಿದ್ದಾರೆ ಎಂದು ಮುದ್ದಹನುಮೇಗೌಡ ಹೇಳಿದರಾದರೂ ಯಾರು ಸ್ಪಷ್ಟನೆ ಕೊಡ ಬೇಕು ಎಂಬುದನ್ನು ತಿಳಿಸಲು ನಿರಾಕರಿಸಿದರು. ಕಾಂಗ್ರೆಸ್‌ನ ನಾಯಕರು ತನ್ನ ಪರ ನಿಂತಿದ್ದು, ಪಕ್ಷದ ವತಿಯಿಂದ ದೂರನ್ನೂ ನೀಡಲಾಗಿದೆ ಎಂದರು.

ಟಿಕೆಟ್‌ ತಪ್ಪಿರುವುದಕ್ಕೆ ಬೇಸರವಿದೆ
ಟಿಕೆಟ್‌ ತಪ್ಪಿರುವುದಕ್ಕೆ ಬೇಸರವಿದೆ. ಇಂತಹ ಕ್ಷೇತ್ರಕ್ಕೆ ಬಂದು ಬೇಸರವಿಲ್ಲ ಎಂದು ಸುಳ್ಳು ಹೇಳಲು ಸಾಧ್ಯವಿದೆಯೇ ಎಂದು ಮುದ್ದ ಹನುಮೇಗೌಡರು ಹೇಳಿದರು. ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುತ್ತಾರೆಯೇ ಎಂದು ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದನ್ನು ಮತದಾರರು ತೀರ್ಮಾನಿಸುತ್ತಾರೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದಷ್ಟೇ ತಿಳಿಸಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.