Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ
Team Udayavani, Sep 24, 2023, 10:10 PM IST
ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆ ಸಂದರ್ಭ ದೇವರ ವಿಗ್ರಹವಿರಿಸಿದ ವಾಹನ ಚಲಾಯಿಸುವ ಸೇವೆಯಲ್ಲಿ ನಿರತರಾಗಿದ್ದ ಸಮಿತಿ ಪ್ರಧಾನ ಕಾರ್ಯದರ್ಶಿ ನಾರಾಯಣ ಪಿ.ಎಂ. ಅವರ ಮನೆಗೆ ನುಗ್ಗಿದ ಕಳ್ಳರು ರೂ. ಒಂದೂವರೆ ಲಕ್ಷ ನಗದು ಎತ್ತಿಕೊಂಡೊಯ್ದ ಘಟನೆ ಶನಿವಾರ ರಾತ್ರಿ ಮಾಸ್ತಿಕಟ್ಟೆಯಲ್ಲಿ ನಡೆದಿದೆ.
ಕಳೆದ 20 ವರ್ಷಗಳಿಂದಲೂ ನಾರಾಯಣ ಪಿ.ಎಂ. ಅವರು ಹೊಸ ಚೇಸಿಸ್ ಖರೀದಿಸಿ ಅದರಲ್ಲಿ ಗಣೇಶ ವಿಗ್ರಹವನ್ನಿರಿಸಿ ಸ್ವತ: ತಾವೇ ಚಲಾಯಿಸುತ್ತ ಬರುತ್ತಿರುವಂತೆ ಅವರು ಶನಿವಾರವೂ ಗಣೇಶನ ವಿಗ್ರಹವನ್ನು ಹೊತ್ತ ವಾಹನವನ್ನು ಚಾಲನೆ ಮಾಡುತ್ತಿದ್ದರು.
ಉತ್ಸವದಲ್ಲಿ ತೊಡಗಿಸಿಕೊಂಡಿರುವ ನಾರಾಯಣ ಅವರ ಓಡಾಟ ಗಮನಿಸಿರಬಹುದಾದ ಕಳ್ಳರು ಪೇಟೆಯಲ್ಲಿ ಜನರೆಲ್ಲ ಮೆರವಣಿಗೆಯನ್ನು ವೀಕ್ಷಿಸಲು ಜಮಾಯಿಸಿದ ಹೊತ್ತಿನಲ್ಲಿ ಮನೆಯ ಬಾಲ್ಕನಿಯ ಬಾಗಿಲನ್ನು ಮುರಿದು ಒಳಹೊಕ್ಕಿರುವುದಾಗಿ ತಿಳಿದುಬಂದಿದ್ದು ಮನೆಯಲ್ಲಿ ಸಿಸಿ ಕೆಮರಾ ಇರುವುದನ್ನು ಗಮನಿಸಿ ಅದರ ಡಿವಿಆರ್ನ್ನು ಎತ್ತಿಕೊಂಡು ಹೋಗಿದ್ದಾರೆ. ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಘಟನೆ ನಡೆದಿರಬಹುದು ಎಂದು ಪೊಲೀಸರು ಆಂದಾಜಿಸಿದ್ದಾರೆ.
ಮೆರವಣಿಗೆ ವೀಕ್ಷಣೆಗೆಂದು ತೆರಳಿದ್ದ ನಾರಾಯಣ ಪಿ.ಎಂ.ಅವರ ಪತ್ನಿ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.
ಈ ಪರಿಸರದ ಪರಿಚಯ ಇರುವ, ವಿಶೇಷವಾಗಿ ಅನ್ಯರಾಜ್ಯಗಳಿಂದ ಇಲ್ಲಿಗೆ ಬಂದಿರುವ ಕಾರ್ಮಿಕರ ಬಗ್ಗೆ ಸಾರ್ವಜನಿಕವಾಗಿ ಸಂಶಯ ವ್ಯಕ್ತವಾಗುತ್ತಿದೆ.
ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ