ಮೂಲ್ಕಿ: ಮಲೇರಿಯಾ ವ್ಯಾಪಕ
Team Udayavani, Jun 27, 2019, 5:56 AM IST
ಮೂಲ್ಕಿ: ನಗರ ಪಂಚಾಯತ್ ವ್ಯಾಪ್ತಿಯ ಕಾರ್ನಾಡು ಸದಾಶಿವ ನಗರ, ಬಿಜಾಪುರ ಕಾಲನಿ ಹಾಗೂ ಆಶ್ರಯ ಕಾಲನಿಯಲ್ಲಿ ಕಳೆದ ಎರಡು ತಿಂಗಳಿನಿಂದ ಮಲೇರಿಯಾ ಜ್ವರ ಬಾಧಿಸುತ್ತಿದೆ. ಮೂಲ್ಕಿ ಸರಕಾರಿ ಆಸ್ಪತ್ರೆಗೆ ಕಳೆದೆರಡು ತಿಂಗಳಲ್ಲಿ ಚಿಕಿತ್ಸೆಗಾಗಿ ಬಂದ 25 ಮಂದಿಗೆ ಮಲೇರಿಯಾ ದೃಢಪಟ್ಟಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ನಗರ ಪಂಚಾಯತ್ ಮತ್ತು ಆರೋಗ್ಯ ಇಲಾಖೆಯ 10 ಜನರ ತಂಡವು ಮಲೇರಿಯಾ ಬಾಧಿತ ಪ್ರದೇಶದಲ್ಲಿ ಸರ್ವೇ ನಡೆಸುತ್ತಿರುವುದಲ್ಲದೆ ಮನೆಗಳ ಒಳಗೆ, ಪರಿಸರದಲ್ಲಿ ಫಾಗಿಂಗ್ ಮತ್ತು ಚರಂಡಿಗಳಿಗೆ ಔಷಧ ಸಿಂಪರಣೆ ಮಾಡುತ್ತಿದೆ. ಸ್ವತ್ಛತೆಯ ಕಾಮಗಾರಿಯನ್ನೂ ನಡೆಸಲಾಗುತ್ತಿದೆ. ಪ್ರಸ್ತುತ ಮಲೇರಿಯಾ ಪ್ರಕರಣ ನಿಯಂತ್ರಣದಲ್ಲಿದೆ.
22 ಮಂದಿಗೆ ಈಗಲೂ ಚಿಕಿತ್ಸೆ
ಆಸ್ಪತ್ರೆಯಲ್ಲಿ ಈ ವರೆಗೆ ಕಳೆದೆರಡು ತಿಂಗಳ ಅವಧಿಯಲ್ಲಿ ದಾಖಲಾಗಿರುವ 25 ಮಂದಿ ಮಲೇರಿಯಾ ಪೀಡಿತರಲ್ಲಿ ಮೂವರು ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಉಳಿದ 22 ಮಂದಿ ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ನಾಗರಿಕರು ತಮ್ಮ ಮನೆಗಳ ಪರಿಸರ ಹಾಗೂ ನಗರದ ಅಂಗಡಿ ಮುಂಗಟ್ಟುಗಳ ಎದುರಿನಲ್ಲಿ ಕಸ ಸಂಗ್ರಹ ಮಾಡಬಾರದು ಹಾಗೂ ಸೀಯಾಳದ ಚಿಪ್ಪುಗಳಲ್ಲಿ, ಟಯರ್ಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಸೂಕ್ತ ಮಾರ್ಗದರ್ಶನವನ್ನು ನೀಡಲಾಗಿದೆ ಎಂದು ನಗರ ಪಂಚಾಯತ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ