ಮೂಲ್ಕಿ: ಕಲ್ಲಿನಿಂದ ಮುಖಕ್ಕೆ ಜಜ್ಜಿ ವ್ಯಕ್ತಿ ಕೊಲೆ; ಆರೋಪಿ ಬಂಧನ
Team Udayavani, Mar 22, 2022, 10:20 AM IST
ಮೂಲ್ಕಿ: ಬಪ್ಪನಾಡು ಗ್ರಾಮದ ಮೂಲ್ಕಿ ಪೇಟೆಯ ಪುನರೂರು ಪೆಟ್ರೋಲ್ ಬಂಕ್ ಬಳಿ ಮಾ. 19 ರಂದು ನಡೆದ ಕೊಲೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ವ್ಯಕ್ತಿಯೊರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಮುರುಗನ್ (46) ಎಂದು ಗುರುತಿಸಲಾಗಿದ್ದು, ಇವರು ಪ್ರಸ್ತುತ ತೋಕೂರು ನಿವಾಸಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ ರಾತ್ರಿ ಮುಖವನ್ನು ಕಲ್ಲಿನಿಂದ ಜಜ್ಜಿ ವ್ಯಕ್ತಿಯನ್ನು ಕೊಲೆ ಮಾಡಿದ್ದು, ಭಾನುವಾರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಕಾರ್ಕಳದ ಮುಂಡ್ಕೂರಿನ ಕಟ್ಟಡ ಕಾರ್ಮಿಕ ಹರೀಶ್ ಸಾಲಿಯಾನ್ (37) ಎಂದು ಗುರುತಿಸಲಾಗಿದೆ.
ಹರೀಶ್ ಸಾಲಿಯಾನ್ ಮತ್ತು ಆರೋಪಿ ಮುರುಗನ್ ಶನಿವಾರ ರಾತ್ರಿ ದೇವಸ್ಥಾನಕ್ಕೆ ಬಂದಿದ್ದಾಗ, ಹಣಕಾಸಿನ ವ್ಯವಹಾರದ ವಿಚಾರವಾಗಿ ಮನಸ್ತಾಪವುಂಟಾಗಿದೆ.
ಬಳಿಕ ಇಬ್ಬರೂ ಬಾರ್ಗೆ ಹೋಗಿ ಕುಡಿದಿದ್ದರು. ಸಣ್ಣಪುಟ್ಟ ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ಸಿಟ್ಟಿಗೆದ್ದ ಮುರುಗನ್ ಹರೀಶ್ ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ರಷ್ಯಾ ಆಕ್ರಮಣ ವಿರೋಧಿಸುವಲ್ಲಿ ಭಾರತದಿಂದ ‘ಅಸ್ಥಿರ’ ನಿಲುವು: ಜೋ ಬೈಡನ್
ಕೊಲೆ ಆರೋಪಿ ಮುರುಗನ್ ನನ್ನು ಮುಲ್ಕಿ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ .
ಮಂಗಳೂರು ನಗರದ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀ ಮಹೇಶ್ ಕುಮಾರ್ ರವರ ಮಾರ್ಗದರ್ಶನದಲ್ಲಿ, ಮುಲ್ಕಿ ಪೊಲೀಸ್ ನಿರೀಕ್ಷಕರಾದ ಶ್ರೀ ಕುಸುಮಾಧರ್ ರವರ ನೇತೃತ್ವದಲ್ಲಿ, ಪಿಎಸ್ಐ ಶ್ರೀ ವಿನಾಯಕ ತೋರಗಲ್, ಪ್ರೋಬೆಷನರಿ ಪಿಎಸ್ ಐ ಕೃಷ್ಣ, ಎಎಸ್ಐ ಉಮೇಶ್, ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್