ಮೂಲ್ಕಿ-ಪೊಳಲಿ-ಕಟೀಲು-ಮುಡಿಪು-ತೊಕ್ಕೊಟ್ಟು ಚತುಷ್ಪಥ ರಸ್ತೆ

ವರ್ತುಲ ರಸ್ತೆಯ ಮಾರ್ಗನಕ್ಷೆ ಮರು ಸರ್ವೆ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧಾರ

Team Udayavani, Jul 24, 2019, 6:36 AM IST

chatushpata

ಮಂಗಳೂರು: ದ.ಕ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರಕಾರ ಪ್ರಸ್ತಾವಿತ 2,800 ಕೋ.ರೂ. ವೆಚ್ಚದ ಚತುಷ್ಪಥ ಮಾದರಿ ವರ್ತುಲ ರಸ್ತೆಯ ಮಾರ್ಗನಕ್ಷೆಗೆ ಆಕ್ಷೇಪ ಎದುರಾಗಿದ್ದು, ಮರು ಸರ್ವೆ ನಡೆಸಿ ವರದಿ ಪಡೆಯಲು
ರಾ. ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.

ಮೂಲ್ಕಿಯಿಂದ ಕಿನ್ನಿಗೋಳಿ, ಕಟೀಲು, ಕೈಕಂಬ, ಪೊಳಲಿ, ಬಿ.ಸಿ. ರೋಡ್‌, ಮುಡಿಪು ಮೂಲಕ ತೊಕ್ಕೊಟ್ಟು ಜಂಕ್ಷನ್‌ ಸೇರುವ ಉದ್ದೇಶಿತ ವರ್ತುಲ ರಸ್ತೆಗೆ ಅಧಿಕ ವೆಚ್ಚ ತಗುಲುವುದರಿಂದ ಪ್ರತ್ಯೇಕ ಮಾರ್ಗನಕ್ಷೆ ಸಿದ್ದಪಡಿಸಲು ಪ್ರಾಧಿಕಾರ ಯೋಚಿಸಿತ್ತು. ಇದರಂತೆ ಹೆಜಮಾಡಿ, ಏಳಿಂಜೆ, ತೋಡಾರ್‌, ಹೊಸಬೆಟ್ಟು, ನರಿಕೊಂಬು, ಮೆಲ್ಕಾರ್‌, ಇರಾ, ಬಾಳೆಪುಣಿ, ಸೋಮೇಶ್ವರ ಮೂಲಕ ಹೊಸ ವರ್ತುಲ ರಸ್ತೆಗೆ ಉದ್ದೇಶಿಸಲಾಗಿತ್ತು. ಆದರೆ ಈ ಬದಲಾ ವಣೆಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಎರಡೂ ರಸ್ತೆಗಳ ಮರು ಸರ್ವೆ ನಡೆಸಿ ಪೂರ್ಣ ವರದಿ ನೀಡುವಂತೆ ರಾ.ಹೆ. ಪ್ರಾಧಿಕಾರವು ಸೂಚಿಸಿದೆ.

ವಿಶೇಷವೆಂದರೆ ಈ ಹಿಂದೆ ಗೊತ್ತು ಪಡಿಸಿ ಡಿಪಿಆರ್‌ ಸಿದ್ಧವಾಗಿದ್ದ ಈ ವರ್ತುಲ ರಸ್ತೆಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಮಾ. 5ರಂದು ಶಿಲಾನ್ಯಾಸವನ್ನೂ ನಡೆಸಿದ್ದರು.

ರಾ.ಹೆ. ಪ್ರಾಧಿಕಾರದ ವಾದವೇನು?
ಈಗಾಗಲೇ ಡಿಪಿಆರ್‌ ಸಿದ್ಧಪಡಿಸಿ ರುವ ಮಾರ್ಗನಕ್ಷೆ ಪ್ರಕಾರ ಹಾಲಿ ರಸ್ತೆಗಳನ್ನೇ ಅಗಲಗೊಳಿಸಲಾಗುತ್ತದೆ. ಹೀಗಾಗಿ ಭೂಸ್ವಾಧೀನ ವೆಚ್ಚ ಅಧಿಕ. ಅಭಿವೃದ್ಧಿ ಆದ ಪ್ರದೇಶವೇ ಮತ್ತೆ ಅಭಿವೃದ್ಧಿ ಆಗಲಿದೆ. ಕಾನೂನು ಸಮಸ್ಯೆಗಳು ಕೂಡ ಅಧಿಕ. ಇದರ ಬದಲು “ಗ್ರೀನ್‌ ಬೆಲ್ಟ್’ ಆಧಾರದಲ್ಲಿ ಹೊಸ ರಸ್ತೆ ಮಾಡಿದರೆ ಅಭಿವೃದ್ಧಿಗೆ ಅವಕಾಶ ಹೆಚ್ಚು ಮತ್ತು ಹಸಿರು ಪ್ರದೇಶಗಳಲ್ಲಿ ಹಾದುಹೋಗುವ ಕಾರಣ ವೆಚ್ಚ ಕಡಿಮೆ ಎಂಬುದು ಪ್ರಾಧಿಕಾರದ ಲೆಕ್ಕಾಚಾರ.

ಹಾಲಿ ಸಿದ್ಧವಿರುವ ಡಿಪಿಆರ್‌ ನಕ್ಷೆ
ಯೋಜನೆಯ ಸಲಹೆಗಾರ ಸಂಸ್ಥೆ ಸ್ತೂಪ್‌ ಕನ್ಸಲ್ಟೆಂಟ್ಸ್‌ ಈ ಹಿಂದೆ ನಿರ್ಧರಿ ಸಿದ ಪ್ರಕಾರ ಮೂಲ್ಕಿಯಿಂದ ಕಟೀಲು, ಪೊಳಲಿ, ಮುಡಿಪು ಮೂಲಕ ವರ್ತುಲ ರಸ್ತೆಯು ತೊಕ್ಕೊಟ್ಟು ಜಂಕ್ಷನ್‌ ಸಂಧಿಸಲಿದೆ. ಪಡುಪಣಂಬೂರು ಬಳಿ ಪ್ರಾರಂಭಗೊಂಡು ಕಿನ್ನಿಗೋಳಿ ಮೂಲಕ ಕಟೀಲಿಗೆ ಬರಲಿದೆ.

ಕಿನ್ನಿಗೋಳಿಯಲ್ಲಿ ಪೇಟೆಗೆ ತೊಂದರೆಯಾಗದಂತೆ ಸುಮಾರು 1.5 ಕಿ.ಮೀ. ಉದ್ದದ ಫ್ಲೈಓವರ್‌ ಇರಲಿದೆ. ಮೂರುಕಾವೇರಿ ಜಂಕ್ಷನ್‌ನಲ್ಲಿ ಬಲಕ್ಕೆ ಹೊರಳಿ ರಸ್ತೆ ಮುಂದುವರಿಯಲಿದೆ. ಕಟೀಲಿನಲ್ಲಿ ಪ್ರತ್ಯೇಕ ಸೇತುವೆ, ಬಜಪೆಯಲ್ಲಿ ಫ್ಲೈಓವರ್‌ ಇರಲಿದೆ. ಅಲ್ಲಿಂದ ಕೈಕಂಬ ಸೇರಲಿದ್ದು, ಎನ್‌ಎಚ್‌ 169ರ ಮೇಲ್ಸೇತುವೆಯೂ ಇರಲಿದೆ. ಅಡೂxರಿನಿಂದ ಪ್ರಾರಂಭಗೊಂಡು ಪೊಳಲಿ ಮೂಲಕ ಬಿ.ಸಿ. ರೋಡ್‌ನ‌ ಹೊಸ ಸೇತುವೆಯ ಬಳಿ ಎನ್‌ಎಚ್‌ 66ಕ್ಕೆ “ಟ್ರಂಪೆಟ್‌ ಇಂಟರ್‌ಚೇಂಜ್‌’ ಶೈಲಿಯಲ್ಲಿ ಕೂಡಿಕೊಳ್ಳಲಿದೆ. ಇಲ್ಲಿ ರಸ್ತೆ ಎನ್‌ಎಚ್‌ 264ನ್ನು ಹಾಯುವಲ್ಲಿ ಅಂಡರ್‌ ಪಾಸ್‌ ಇರಲಿದೆ. ಮೆಲ್ಕಾರ್‌ನಿಂದ ಮುಡಿಪು-ಅಲ್ಲಿಂದ ತೊಕ್ಕೊಟ್ಟು ಅಥವಾ ಕೋಟೆಕಾರಿಗೆ ಸೇರಬಹುದು ಎಂದು ಅಂದಾಜಿಸಲಾಗಿತ್ತು.

ಎರಡು ರಸ್ತೆಯ ಪ್ರಸ್ತಾವ-ಆಕ್ಷೇಪ!
ಹೊಸದಿಲ್ಲಿಯಲ್ಲಿ ಕೆಲವು ದಿನಗಳ ಹಿಂದೆ ನಡೆದ ರಾ.ಹೆ. ಪ್ರಾಧಿಕಾರದ ಉನ್ನತ ಮಟ್ಟದ ಸಭೆಯಲ್ಲಿ ಮಾರ್ಗನಕ್ಷೆ ಬದಲಿಸುವ ಚರ್ಚೆ ನಡೆದಿತ್ತು. ಹೊಸ ಮಾರ್ಗದ ಡಿಪಿಆರ್‌ ಮಾಡುವುದು ಉತ್ತಮ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದರು. ಆದರೆ ಹಳೆಯ ಮಾರ್ಗನಕ್ಷೆ ಬದಲಿಸಲು ಸಾಧ್ಯವಿಲ್ಲ ಎಂದು ಸಂಸದರು ಆಕ್ಷೇಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ಮಾರ್ಗ ಗಳ ಪೂರ್ಣ ಮಟ್ಟದ ಅಧ್ಯಯನ ಕೈಗೊಂಡು, ನಿರ್ಮಾಣ ವೆಚ್ಚ, ಖಾಸಗಿ ಭೂಮಿ, ಮನೆ, ಕಟ್ಟಡ ಕಳೆದುಕೊಳ್ಳುವ ಸಂಖ್ಯೆ ಸಹಿತ ಸಂಪೂರ್ಣ ವಿವರ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಮಾರ್ಗನಕ್ಷೆ ಬದಲಿಸುವುದಿಲ್ಲ
ಮೂಲ್ಕಿಯಿಂದ ಕಟೀಲು, ಪೊಳಲಿ, ಮುಡಿಪು ತೊಕ್ಕೊಟ್ಟು ಜಂಕ್ಷನನ್ನು ಸೇರುವ ಪ್ರಸ್ತಾವಿತ ನೂತನ ವರ್ತುಲ ರಸ್ತೆಯ ಮಾರ್ಗನಕ್ಷೆ (ಅಲೈನ್‌ಮೆಂಟ್‌)ಯನ್ನು ಬದಲಿಸಿ ಹೊಸ ಮಾರ್ಗನಕ್ಷೆ ರಚಿಸಿ ರಾ.ಹೆ. ಪ್ರಾಧಿಕಾರವು ಹೊಸ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಅದನ್ನು ಒಪ್ಪಲಾಗದು ಎಂದು ಪ್ರಾಧಿಕಾರದ ಗಮನಕ್ಕೆ ತರಲಾಗಿದೆ. ಈ ಮೊದಲು ನಿರ್ಧರಿಸಿದ ಪ್ರಕಾರವೇ ನೂತನ ವರ್ತುಲ ರಸ್ತೆ ನಡೆಸುವಂತೆ ಪ್ರಾಧಿಕಾರಕ್ಕೆ ತಿಳಿಸಲಾಗಿದೆ. ವರ್ತುಲ ಹೆದ್ದಾರಿ ಮಾರ್ಗನಕ್ಷೆ ಬದಲಿಸುವುದಿಲ್ಲ.
– ನಳಿನ್‌ ಕುಮಾರ್‌ ಕಟೀಲು ಸಂಸದರು-ದಕ್ಷಿಣ ಕನ್ನಡ

– ದಿನೇಶ್‌ ಇರಾ

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.