ಮುಂಬಯಿ ಮಳೆ: ಮಂಗಳೂರು ರೈಲು ಸಂಚಾರ ವ್ಯತ್ಯಯ
Team Udayavani, Aug 31, 2017, 7:20 AM IST
ಮಂಗಳೂರು: ಮುಂಬಯಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಕರಾವಳಿಗೂ ತಟ್ಟಿದ್ದು, ಮುಂಬಯಿ ಯಿಂದ ಮಂಗಳೂರಿಗೆ ಆಗ ಮಿ ಸುವ “ಮತ್ಸಗಂಧ ಎಕ್ಸ್ಪ್ರೆಸ್’ ರೈಲು ಮತ್ತು “ಮುಂಬಯಿ ಎಕ್ಸ್ಪ್ರೆಸ್ ರೈಲು’ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಮಂಗಳವಾರ ಮುಂಜಾನೆ 3.20ಕ್ಕೆ ಮುಂಬಯಿನಿಂದ ಮಂಗಳೂರಿಗೆ ಹೊರಡ ಬೇಕಾಗಿದ್ದ “ಮತ್ಸ Âಗಂಧ ಎಕ್ಸ್ಪ್ರೆಸ್’ (ರೈಲು ನಂ.2619) ರೈಲು ತಡವಾಗಿ ಅಂದರೆ ಬುಧವಾರ ಸಂಜೆ 4.15ಕ್ಕೆ ಹೊರಟಿದೆ. ಅದರಂತೆಯೇ ಮುಂಬಯಿ ಟರ್ಮಿನಲ್ನಿಂದ ಕಂಕನಾಡಿ ಜಂಕ್ಷನ್ಗೆ ಆಗಮಿಸುವ ಮುಂಬಯಿ ಎಕ್ಸ್ಪ್ರೆಸ್ ರೈಲು ಬುಧವಾರ ಬೆಳಗ್ಗೆ 10 ಗಂಟೆಗೆ ಹೊರಡಬೇಕಿತ್ತು. ಆದರೆ ರೈಲು ನಿಲ್ದಾಣದ ಸುತ್ತಮುತ್ತ ನೀರು ತುಂಬಿಕೊಂಡ ಕಾರಣ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ರೈಲು ಮಧ್ಯಾಹ್ನ 3.30ಕ್ಕೆ ಹೊರಟಿದೆ. ಈ ರೈಲು ಗುರುವಾರ ಬೆಳಗ್ಗೆ 7 ಗಂಟೆಗೆ ಕಂಕನಾಡಿ ತಲುಪಲಿದೆ. ಆದರೆ ಮಂಗಳೂರಿನಿಂದ ಮುಂಬಯಿಗೆ ತೆರಳುವ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ ಎಂದು ಮಂಗಳೂರು ಸೆಂಟ್ರಲ್ ರೈಲ್ವೇ ಅಧಿ ಕಾರಿಗಳು ತಿಳಿಸಿದ್ದಾರೆ.
ರೈಲು ಸಂಚಾರದಲ್ಲಿ ಬದಲಾವಣೆ
ಮಂಗಳೂರು ಜಂಕ್ಷನ್- ಮುಂಬಯಿ ಸಿಎಸ್ಎಂಟಿ ಎಕ್ಸ್ಪ್ರೆಸ್ ರೈಲು ಆ. 31ರಂದು 14 ಗಂಟೆಗೆ, ಎರ್ನಾಕುಳಂ ಜಂಕ್ಷನ್- ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲು ಆ. 31 ರಂದು 20 ಗಂಟೆಗೆ, ಕೊಚ್ಚುವೇಲಿ- ಲೋಕ ಮಾನ್ಯ ತಿಲಕ್ ಎಕ್ಸ್ಪ್ರೆಸ್ ರೈಲು ಆ. 31 ರಂದು 23.45ಕ್ಕೆ, ಎರ್ನಾಕುಳಂ ಜಂಕ್ಷನ್- ನಿಜಾಮುದ್ದೀನ್ ಮಂಗಳಾ ಎಕ್ಸ್ಪ್ರೆಸ್ ರೈಲು ಆ. 31ರಂದು 16 ಗಂಟೆಗೆ ಹೊರಡ ಲಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ