ಕರಾವಳಿಯಲ್ಲಿ ಈಗ ನಗರಾಡಳಿತ ಸಂಸ್ಥೆ ಚುನಾವಣ ಹವಾ


Team Udayavani, Dec 20, 2021, 5:30 AM IST

ಕರಾವಳಿಯಲ್ಲಿ ಈಗ ನಗರಾಡಳಿತ ಸಂಸ್ಥೆ ಚುನಾವಣ ಹವಾ

ಮಂಗಳೂರು: ವಿಧಾನಪರಿಷತ್‌ ಚುನಾವಣೆ ಮುಕ್ತಾಯಗೊಳ್ಳುತ್ತಿರುವಂತೆ ಇದೀಗ ಕರಾವಳಿಯಲ್ಲಿ ಪಟ್ಟಣ ಪಂಚಾಯತ್‌ ಹಾಗೂ ಪುರಸಭಾ ಚುನಾವಣೆಯ ಬಿಸಿ ಕಾವೇರತೊಡಗಿದೆ. ರಾಜಕೀಯ ಪಕ್ಷಗಳು ಈ ಚುನಾವಣೆಯನ್ನು ಮುಂಬರುವ ಚುನಾವಣೆಗಳಿಗೆ ದಿಕ್ಸೂಚಿಯಾಗಿ ಪರಿಗಣಿಸಿದ್ದು ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿವೆ ದ.ಕ. ಜಿಲ್ಲೆಯಲ್ಲಿ ಕೋಟೆಕಾರು ಹಾಗೂ ವಿಟ್ಲ ಪ. ಪಂ.ಗಳಿಗೆ ಹಾಗೂ ಉಡುಪಿ ಜಿಲ್ಲೆಯ ಕಾಪು ಪುರಸಭೆಗೆ ಡಿ. 27ರಂದು ಚುನಾವಣೆ ನಡೆಯಲಿದ್ದು ಡಿ. 30ರ ತಾಲೂಕಿನ ಕೇಂದ್ರ ಸ್ಥಾನಗಳಲ್ಲಿ ಮತಗಳ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ.

ಕೋಟೆಕಾರು ಪ. ಪಂ. 17 ಸ್ಥಾನಗಳನ್ನು ಹೊಂದಿದ್ದು 45 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಎಲ್ಲ ವಾರ್ಡ್‌ಗಳಲ್ಲೂ ಸ್ಪರ್ಧಿಸುತ್ತಿದೆ. ಜತೆಗೆ ಎಸ್‌ಡಿಪಿಐ 6, ಸಿಪಿಐಎಂ 2 ಹಾಗೂ 3 ಪಕ್ಷೇತರರು ಕಣದಲ್ಲಿದ್ದಾರೆ. ಕಳೆದ ಬಾರಿ ಇಲ್ಲಿ 11ಸ್ಥಾನಗಳನ್ನು ಹೊಂದಿದ್ದ ಬಿಜೆಪಿ ಆಡಳಿತದಲ್ಲಿತ್ತು. .

ವಿಟ್ಲ ಪ. ಪಂ. 18 ಸ್ಥಾನಗಳನ್ನು ಹೊಂದಿದ್ದು 42 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ. ಇಲ್ಲೂ ಎಲ್ಲ ಸ್ಥಾನಗಳಿಗೆ ಕಾಂಗ್ರೆಸ್‌ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜತೆಗೆ ಎಸ್‌ಡಿಪಿಐ 4 ಹಾಗೂ ಇಬ್ಬರು ಪಕ್ಷೇತರರು ಕಣದಲ್ಲಿದ್ದಾರೆ. ಕಳೆದ ಬಾರಿ ಇಲ್ಲಿ ಒಟ್ಟು 18 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ ಅಡಳಿತದಲಿತ್ತು. ಕಾಂಗ್ರೆಸ್‌ 6 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಕಾಪು ಪುರಸಭೆ ಒಟ್ಟು 23 ಸ್ಥಾನಗಳನ್ನು ಹೊಂದಿದ್ದು 67 ಮಂದಿ ಸ್ಪರ್ಧಾಕಣದಲ್ಲಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಎಲ್ಲ ಸ್ಥಾನಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜತೆಗೆ ಎಸ್‌ಡಿಪಿಐ9, ಜೆಡಿಎಸ್‌ 7, ವೆಲ್ಫೆàರ್‌ ಪಾರ್ಟಿ ಆಫ್‌ ಇಂಡಿಯಾ2 ಹಾಗೂ 3 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿದ್ದಾರೆ. ಕಳೆದ ಬಾರಿ ಇಲ್ಲಿ ಇಲ್ಲಿ ಕಾಂಗ್ರೆಸ್‌ 12 ಹಾಗೂ ಬಿಜೆಪಿ 11 ಸ್ಥಾನಗಳನ್ನು ಹೊಂದಿದ್ದು ಆರಂಭದ ಅವಧಿಯಲ್ಲಿ ಕಾಂಗ್ರೆಸ್‌ ಹಾಗೂ ಅನಂತರದ ಕೆಲವು ತಿಂಗಳು ಬಿಜೆಪಿ ಅಧಿಕಾರದಲ್ಲಿತ್ತು.

ಇದನ್ನೂ ಓದಿ:ಪ್ರಾಥಮಿಕ ಶಾಲೆಗಳಲ್ಲಿ “ಸಂತೋಷ ಪಠ್ಯಕ್ರಮ”; ಉತ್ತರ ಪ್ರದೇಶ ಸರ್ಕಾರದ ವಿಶೇಷ ಕ್ರಮ

ವ್ಯಾಪಕ ಕಾರ್ಯತಂತ್ರ
ಚುನಾವಣೆಯಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ, ಕಾಂಗ್ರೆಸ್‌ ಅಧಿಕಾರವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಚುನಾವಣ ಪ್ರಚಾರ ಕಣಕ್ಕೆ ಇಳಿದಿದೆ. ಪ್ರತಿ ಪ. ಪಂ.ಗಳಿಗೆ ಹಾಗೂ ಪುರಸಭೆಗೆ ಮುಖ್ಯ ಚುನಾವಣ ವೀಕ್ಷಕರಲ್ಲದೆ, ಪ್ರತಿಯೊಂದು ವಾರ್ಡ್‌ಗೆ ಓರ್ವರನ್ನು ವೀಕ್ಷಕರನ್ನಾಗಿ ನೇಮಿಸಿದೆ. ಇದಲ್ಲದೆ ಸ್ಥಳೀಯ
ಮಟ್ಟದಲ್ಲೂ ಅಲ್ಲಿನ ಮುಖಂಡರಿಗೆ ಉಸ್ತುವಾರಿ ಯನ್ನು ವಹಿಸಿಕೊಡಲಾಗಿದೆ. ಎಸ್‌ಡಿಪಿಐ ಕೂಡ ಈಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ವ್ಯಾಪಕ ಪ್ರಚಾರ ಆರಂಭಿಸಿದೆ.

ಚುನಾವಣೆಗೆ ಸಂಬಂಧಿಸಿ ಕೆಪಿಸಿಸಿ ಇಬ್ಬರು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಇದಲ್ಲದೆ ಜಿಲ್ಲಾ ಸಮಿತಿ ಹಾಗೂ ಬ್ಲಾಕ್‌ ಸಮಿತಿಗಳಿಂದ ವೀಕ್ಷಕರನ್ನು ನಿಯೋಜಿಸಲಾಗಿದೆ. ಈಗಾಗಲೇ ಪ್ರಚಾರ ಕಾರ್ಯ
ಭರದಿಂದ ಸಾಗುತ್ತಿದೆ.
– ಹರೀಶ್‌ ಕುಮಾರ್‌,
ಕಾಂಗ್ರೆಸ್‌ ದ.ಕ.ಜಿಲ್ಲಾ ಧ್ಯಕ್ಷರು

ಚುನಾವಣೆಗೆ ಸಂಬಂಧಿಸಿ ಪಕ್ಷದ ಕಾರ್ಯಕರ್ತರಿಂದ ಮನೆಮನೆ ಭೇಟಿ ಮಾಡಿ ಮತಯಾಚನೆ ಆರಂಭಗೊಂಡಿದೆ.
– ಆಶೋಕ್‌ ಕುಮಾರ್‌ ಕೊಡವೂರು,
ಕಾಂಗ್ರೆಸ್‌ ಉಡುಪಿ ಜಿಲ್ಲಾ ಧ್ಯಕ್ಷರು

ಬಿಜೆಪಿ ಜಿಲ್ಲಾ ಮತ್ತು ವಿಧಾನ
ಸಭಾ ಸಮಿತಿಗಳ ವತಿಯಿಂದ ವೀಕ್ಷಕರನ್ನು ನೇಮಿಸಿದ್ದು ಚುನಾವಣೆ ಉಸ್ತುವಾರಿಯನ್ನು ನೋಡಿ
ಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರತಿ ವಾರ್ಡ್‌ಗೂ ಪ್ರಭಾರಿಗಳನ್ನು ನಿಯೋಜಿಸಲಾಗಿದೆ.
– ಸುದರ್ಶನ್‌ ಮೂಡುಬಿದಿರೆ,
ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರು

ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದು ಮತದಾರರ ಮನೆಮನೆ ಭೇಟಿ ನಡೆಯುತ್ತಿದೆ.
– ಕುಯಿಲಾಡಿ ಸುರೇಶ್‌ ನಾಯಕ್‌,
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರು

ಟಾಪ್ ನ್ಯೂಸ್

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.