ಅಂಗನವಾಡಿ ಅಭಿವೃದ್ಧಿಗೆ ಮುಂದಾದ ನಗರಸಭೆ


Team Udayavani, Nov 19, 2017, 2:49 PM IST

19-Nov-12.jpg

ನಗರ: ನಗರಸಭೆ ವ್ಯಾಪ್ತಿಯ 39 ಅಂಗನವಾಡಿಗಳ ಪೈಕಿ 36 ಅಂಗನವಾಡಿಗಳ ದುರಸ್ತಿ ಕಾರ್ಯಕ್ಕೆ 31 ಲಕ್ಷ ರೂ. ಅನುದಾನ ನಿಗದಿ ಮಾಡಲಾಗಿದೆ. ಬಾಲ ವಿಕಾಸ ಸಮಿತಿ ಅಧ್ಯಕ್ಷರು ಆಯಾ ವಾರ್ಡ್‌ ಅಧ್ಯಕ್ಷರೇ ಆಗಿರುವುದರಿಂದ, ಅವರ ಮೂಲಕ ದುರಸ್ತಿಯ ಪಟ್ಟಿ ನೀಡುವಂತೆ ಮನವಿ ಮಾಡಿಕೊಳ್ಳಲಾಯಿತು.

ನಗರಸಭೆ ವ್ಯಾಪ್ತಿಯ ಅಂಗನವಾಡಿಗಳ ಅಭಿವೃದ್ಧಿ ಹಿನ್ನೆಲೆಯಲ್ಲಿ ಶನಿವಾರ ಪುತ್ತೂರು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಯಿತು.

ಟೆಂಡರ್‌ ಕರೆಯಲಾಗುವುದು
ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾತನಾಡಿದ ನಗರಸಭೆ ಸದಸ್ಯ ಮಹಮ್ಮದ್‌ ಆಲಿ, ಗ್ರಾಮೀಣ ಭಾಗದ ಅಂಗನವಾಡಿಗಳ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್‌ ಅನುದಾನ ನೀಡುತ್ತದೆ. ಆದರೆ ನಗರ ವ್ಯಾಪ್ತಿಯನ್ನು ಕೈಬಿಡುತ್ತದೆ. ಇದರಿಂದಾಗಿ ನಗರಸಭೆ ವ್ಯಾಪ್ತಿಯ ಹೆಚ್ಚಿನ ಅಂಗನವಾಡಿಗಳು ದುರಸ್ತಿ ಕಾರ್ಯ ಎದುರು ನೋಡುತ್ತಿದೆ. ಮಾತ್ರವಲ್ಲ ನಗರಸಭೆ ಸದಸ್ಯರೇ ಬಾಲವಿಕಾಸ ಸಮಿತಿ ಅಧ್ಯಕ್ಷರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಗರಸಭೆ ಅಂಗನವಾಡಿ ಅಭಿವೃದ್ಧಿಗೆ ಮುಂದಾಗಿದೆ. ನಗರಸಭೆ ಅನುದಾನದಲ್ಲಿ ತುರ್ತು ಕಾಮಗಾರಿ ನಡೆಸಲಾಗುವುದು. ಅಗತ್ಯ ಕಾಮಗಾರಿಗಳ ಪಟ್ಟಿಯನ್ನು ನಗರಸಭೆ ಸದಸ್ಯರು ತಯಾರಿಸಿ, ನೀಡಬೇಕು. ಇಲ್ಲಿ ಕಾಮಗಾರಿಯ ಸಾಧಕ- ಬಾಧಕದ ಬಗ್ಗೆ ಚರ್ಚಿಸಿ ಟೆಂಡರ್‌ ಕರೆಯಲಾಗುವುದು ಎಂದರು.

ಉಪಾಧ್ಯಕ್ಷ ವಿಶ್ವನಾಥ ಗೌಡ ಮಾತನಾಡಿ, ಆಯಾ ಭಾಗದ ಅಂಗನವಾಡಿಗಳ ದುರಸ್ತಿಯನ್ನು ನಗರಸಭೆ ಸದಸ್ಯರ ಗಮನಕ್ಕೆ ತರಬೇಕು. ಅದನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದರು.

ಸಿಡಿಪಿಒ ಶಾಂತಿ ಹೆಗ್ಡೆ ಮಾತನಾಡಿ, ನಗರಸಭೆ ಅಂಗನವಾಡಿ ದುರಸ್ತಿಗೆ ಮುಂದಾಗಿರುವುದು ರಾಜ್ಯದಲ್ಲೇ ಪ್ರಥಮ. ಕಾಮಗಾರಿಗೆ ಅನುದಾನ ಮೀಸಲಿಟ್ಟಿರುವ ನಗರಸಭೆ, ದುರಸ್ತಿಗೆ ಮೊದಲ ಆದ್ಯತೆ ನೀಡಲಿದೆ. ಮುಕ್ರಂಪಾಡಿಯಂತಹ ಅಂಗನವಾಡಿಗಳಲ್ಲಿ ಹಲವು ಅವಘಡ ನಡೆದಿದೆ. ಹಂಚು, ಕಿಟಕಿ, ಬಾಗಿಲು ರಿಪೇರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ಮೂರು ಅಂಗನವಾಡಿಗಳನ್ನು ದುರಸ್ತಿ ಕಾರ್ಯದಿಂದ ಕೈಬಿಟ್ಟಿರುವುದು ಯಾಕೆ ಎಂದು ನಗರಸಭೆ ಸದಸ್ಯ ರಮೇಶ್‌ ರೈ ಪ್ರಶ್ನಿಸಿದರು. ಬಾಲವನದ ಅಂಗನವಾಡಿಯಂತೆಯೇ ಮೂರು ಅಂಗನವಾಡಿಗಳು ಉತ್ತಮ ಸ್ಥಿತಿಯಲ್ಲಿವೆ. ಆದ್ದರಿಂದ ಕೈ ಬಿಟ್ಟಿದ್ದೇವೆ. ಅಗತ್ಯ ಕಾಮಗಾರಿ ಬೇಕಿದ್ದರೆ ಮಾಡಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಲಾಯಿತು. ನಗರಸಭೆ ಅಧ್ಯಕ್ಷೆ ಜಯಂತಿ ಬಲಾ°ಡ್‌ ಅಧ್ಯಕ್ಷತೆ ವಹಿಸಿದ್ದರು. ಪೌರಾಯುಕ್ತೆ ರೂಪಾ ಶೆಟ್ಟಿ ವಂದಿಸಿದರು.

ದುರಸ್ತಿಗೆ ಮೊದಲ ಆದ್ಯತೆ
ದುರಸ್ತಿಗೆ ಮೊದಲ ಆದ್ಯತೆ ನೀಡಿದ್ದು, ಸೌಕರ್ಯಕ್ಕೆ ದ್ವಿತೀಯ ಆದ್ಯತೆ ನೀಡಲಾಗುವುದು. ಹಲವು ಅಂಗನವಾಡಿಗಳಲ್ಲಿ ಅವಘಡ ನಡೆದ ನಿದರ್ಶನ ಕಣ್ಣ ಮುಂದಿದೆ. ಕೆಲವು ಅಂಗನವಾಡಿಗಳ ಹಂಚು ಬೀಳುವ ಸ್ಥಿತಿಯಲ್ಲಿದೆ. ಇವುಗಳಿಗೆ ಮೊದಲ ಆದ್ಯತೆ ನೀಡಿದ್ದೇವೆ. ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಇಲಾಖೆ ಈ ನಿಟ್ಟಿನಲ್ಲಿ ಸಹಕರಿಸಬೇಕು. ಪಕ್ಕದ ಅಂಗನವಾಡಿಯ ಸ್ಥಿತಿಯನ್ನು ಗಮನಿಸಿಕೊಳ್ಳಿ ಎಂದು ಸಭೆಯಲ್ಲಿ ಸಲಹೆ ನೀಡಲಾಯಿತು.

ವಿದ್ಯುತ್‌ ಬಿಲ್‌ ಪಾವತಿ ಸಾಧ್ಯವಿಲ್ಲ
ಅಂಗನವಾಡಿಯ ವಿದ್ಯುತ್‌ ಬಿಲ್‌ ಪಾವತಿಸುವ ಬಗ್ಗೆ ಕ್ರಮ ಕೈಗೊಳ್ಳಲು ಸಾಧ್ಯವೇ ಎಂದು ಕಾರ್ಯಕರ್ತೆಯೊಬ್ಬರು ಪ್ರಶ್ನಿಸಿದರು. ನಗರಸಭೆ ವತಿಯಿಂದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಇಲಾಖೆಯೇ ಈ ಬಗ್ಗೆ ಗಮನ ಹರಿಸಬೇಕು ಎಂದು ಉಪಾಧ್ಯಕ್ಷ ವಿಶ್ವನಾಥ ಗೌಡ ತಿಳಿಸಿದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.