ದಾಳಿ: 30 ಮಂದಿಗೆ ನೋಟಿಸ್
Team Udayavani, Jun 15, 2018, 1:08 PM IST
ಬಂಟ್ವಾಳ : ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ನೇತೃತ್ವದಲ್ಲಿ ಜೂ. 13ರಂದು ನಗರದ ವಿವಿಧ 30 ಅಂಗಡಿಗಳಿಗೆ ದಾಳಿ ನಡೆಸಿ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿ ಅಂಗಡಿ ಮಾಲಕರಿಗೆ ನೋಟಿಸ್ ನೀಡಿದ್ದಾರೆ.
ಮುಂದಿನ ಹಂತದಲ್ಲಿ ಪ್ಲಾಸ್ಟಿಕ್ ಕೈಚೀಲ ಮಾರಾಟ, ಬಳಕೆ, ಉಪಯೋಗ ಮಾಡುವವರ ಮೇಲೂ ಪ್ರಕರಣ ದಾಖಲಿಸಿ ದಂಡನೆ ವಿಧಿಸುವುದಾಗಿ ತಿಳಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ಸೂಚನೆ ಯಂತೆ ಬೀಟ್ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ ಕ್ರಮದಲ್ಲಿ ಬಂಟ್ವಾಳ ಪುರಸಭೆಯನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿ ಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ದಾಳಿ ಸಂದರ್ಭ ಸಮುದಾಯ ವ್ಯವಹಾರಗಳ ಅಧಿಕಾರಿ ಮತ್ತಡಿ, ಹಿರಿಯ ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಪಿ. ಮತ್ತು ಸಿಬಂದಿ ಭಾಗವಹಿಸಿದರು.