ಅಡ್ಯಾರು ಕಟ್ಟೆ-ಯುವಕನ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ  ಸೆರೆ


Team Udayavani, Jul 10, 2017, 2:05 AM IST

arrest.jpg

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಅಡ್ಯಾರುಪದವಿನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಮಹಮ್ಮದ್‌ ಸಾಜಿದ್‌ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಫರಂಗಿಪೇಟೆ ಅರ್ಕುಳ ನಿತಿನ್‌ ಪೂಜಾರಿ (21),  ಅಡ್ಯಾರ್‌ ಕಟ್ಟೆ ಕೆಂಜೂರು ಮನೆ ಪ್ರಾಣೇಶ್‌ ಪೂಜಾರಿ (20), ಪಡೀಲ…ನ ಅಳಪೆ ಕಂಡೇವಿನ ಕಿಶನ್‌ ಪೂಜಾರಿ (21) ಬಂಧಿತ ಆರೋಪಿಗಳು. ನಿತಿನ್‌, ಪ್ರಾಣೇಶ್‌ ಎಲೆಕ್ಟ್ರಿಶಿಯನ್‌ ಹಾಗೂ ಕಿಶನ್‌ ಕಾಪೆìಂಟರ್‌ ಕೆಲಸ ಮಾಡುತ್ತಿದ್ದರು. ಇವರ ಪೈಕಿ  ನಿತಿನ್‌ ಪೂಜಾರಿ ಹಾಗೂ ಪ್ರಾಣೇಶ್‌ ವಿರುದ್ಧ ಈಗಾಗಲೇ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣಗಳಿವೆ. ಸಾಜಿದ್‌ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದರು ಎನ್ನಲಾದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಹಸ್ತಾಂತರಿಸಲಾಗಿದೆ.

ಪೊಲೀಸ್‌ ಕಮೀಷನರ್‌ ಟಿ. ಆರ್‌. ಸುರೇಶ್‌ ಅವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ,  ಕೆ.ಎಂ. ಶಾಂತರಾಜು ಮತ್ತು ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಹನುಮಂತರಾಯ ಮತ್ತು ಸಿಸಿಆರ್‌ಬಿ ಎಸಿಪಿ ವೆಲೆಂಟೈನ್‌ ಡಿ’ ಸೋಜಾ  ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್‌ಪೆಕ್ಟರ್‌ ಸುನೀಲ… ವೈ. ನಾಯ್ಕ… ಮತ್ತು ಪಿ.ಎಸ್‌.ಐ ಶ್ಯಾಮ… ಸುಂದರ್‌ ಹಾಗೂ ಸಿಬಂದಿ ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

ಪ್ರಕರಣದ ಹಿನ್ನೆಲೆ: ಜು. 7ರಂದು ಬಿತ್ತುಪಾದೆಯ ನೌಷಾದ್‌ನೊಂದಿಗೆ ಆತನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೇರಳದ ಮಲಪುರಂ ನಿವಾಸಿ ಮಹಮ್ಮದ್‌ ಸಜೀದ್‌ನೊಂದಿಗೆ ಅಡ್ಯಾರ್‌ನಲ್ಲಿ ಚಹಾ ಕುಡಿದು ಸಂಜೆ ಸುಮಾರು 4.15ಕ್ಕೆ ಬಿತ್ತುಪಾದೆಯತ್ತ ಬೈಕ್‌ನಲ್ಲಿ ಹಿಂದಿರುಗುತ್ತಿದ್ದರು. ಅಡ್ಯಾರ್‌ ಪದವಿನಿಂದ ಸ್ವಲ್ಪ ಹಿಂದೆ ರಸ್ತೆ ಬದಿಯಲ್ಲಿ ಮೂವರು ಯುವಕರು ನೌಷಾದ್‌ ಹಾಗೂ ಸಾಜಿದ್‌ನನ್ನು ನಿಲ್ಲಿಸಿ, ತಾವು ಬಂದಿದ್ದ ಸ್ಕೂಟರ್‌ ಸ್ಟಾರ್ಟ್‌ ಆಗುವುದಿಲ್ಲ ಎಂದು ಹೇಳಿ ಅವರ ಬಳಿಗೆ ಬಂದಿದ್ದರು. 

ಬಳಿಕ ಅವರ ಪೈಕಿ ಒಬ್ಟಾತನು ನೌಷಾದ್‌ಗೆ ಮಾರಕಾಸ್ತ್ರದಿಂದ ಹೊಡೆಯಲು ಪ್ರಯತ್ನಿಸಿದ್ದನು. ಆಗ ಆತ ತಪ್ಪಿಸಿಕೊಂಡಾಗ ಜತೆಯಲ್ಲಿದ್ದ ಸಜೀದ್‌ನ ಕೈಗೆ ಹಾಗೂ ಬೆನ್ನಿಗೆ ಬಲಭಾಗಕ್ಕೆ ತಲವಾರಿನಿಂದ ಕಡಿದು ತೀವ್ರ ತರಹದ ಗಾಯವುಂಟು ಮಾಡಿ ಕೊಲೆಗೆ ಪ್ರಯತ್ನಿಸಿದ್ದರು. 

ಅನಂತರ ಅಲ್ಲಿಂದ ದ್ವಿಚಕ್ರ ವಾಹನದಲ್ಲಿ ಆರೋಪಿಗಳು ಪರಾರಿಯಾಗಿದ್ದರು.  ಆರೋಪಿಗಳ ಕೈಯಿಂದ ಅವರು ತಪ್ಪಿಸಿಕೊಂಡ ಅನಂತರ ಗಾಯಾಳು ಸಾಋಇದ್‌ನನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಪ್ರಾಣಾಪಾಯದಿಂದ ಪಾರಾಗಿರುವ ಸಾಜೀದ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.