ಕಾಲಿಯಾ ರಫೀಕ್‌ ಕೊಲೆ ಪ್ರಕರಣ: ತಲೆಮರೆಸಿದ್ದ ಆರೋಪಿ ಬಂಧನ


Team Udayavani, Oct 4, 2019, 2:55 AM IST

C-50

ಮಂಗಳೂರು: ಎರಡೂವರೆ ವರ್ಷಗಳ ಹಿಂದೆ ಕೋಟೆಕಾರ್‌ನಲ್ಲಿ ನಡೆದಿದ್ದ ಕುಖ್ಯಾತ ರೌಡಿ ಕಾಲಿಯಾ ರಫೀಕ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿ ಕೊಂಡಿದ್ದ ಪ್ರಮುಖ ಆರೋಪಿ, ಕೇರಳದ ಕಾಸರಗೋಡು ಚಳಯಂಗೋಡ್‌ ಮೇಲ್ಪರಂಬ ನಿವಾಸಿ ಮಹಮ್ಮದ್‌ ನಜೀಬ್‌ ಯಾನೆ ಕಲ್ಲಟ್ರ ನಜೀಬ್‌ (46) ನನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ನೂರ್‌ ಅಲಿ, ರಶೀದ್‌ ಟಿ.ಎಸ್‌. ಹುಸೈನಬ್ಬ ಯಾನೆ ಹುಸೈನ್‌, ಮುತಾಸಿಂ ಯಾನೆ ತಸ್ಲಿಂ ಸಹಿತ ಹಲವರನ್ನು ಈ ಮೊದಲೇ ಬಂಧಿಸಲಾಗಿತ್ತು.

ಪ್ರಕರಣದ ವಿವರ
2017ರ ಫೆ. 14ರಂದು ಮಹಮ್ಮದ್‌ ಝಾಹಿದ್‌ ತನ್ನ ಸ್ನೇಹಿತ ಕಾಲಿಯಾ ರಫೀಕ್‌ನೊಂದಿಗೆ ಮುಜೀಬ್‌ ಹಾಗೂ ಫಿರೋಜ್‌ ಜತೆಯಲ್ಲಿ ರಾತ್ರಿ 11:30ಕ್ಕೆ ಮಾರುತಿ ರಿಟ್‌l ಕಾರಿನಲ್ಲಿ ಕಾಸರಗೋಡಿನ ಹೊಸಂಗಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಬಂದು ರಾತ್ರಿ 12 ಗಂಟೆಗೆ ಕೋಟೆಕಾರ್‌ ಪೆಟ್ರೋಲ್‌ ಪಂಪ್‌ ತಲುಪಿದ್ದರು. ಆ ಹೊತ್ತಿಗೆ ವಿರುದ್ಧ ದಿಕ್ಕಿನಿಂದ ರಾಂಗ್‌ ಸೈಡ್‌ನ‌ಲ್ಲಿ ವೇಗವಾಗಿ ಬಂದ ಆರೋಪಿಗಳಿದ್ದ ಟಿಪ್ಪರ್‌ ಢಿಕ್ಕಿ ಹೊಡೆದಿತ್ತು.

ಆರೋಪಿಗಳ ಪೈಕಿ ಚಾಲಕ ರಶೀದ್‌ ಹೊಂಚು ಹಾಕಿ ಪೆಟ್ರೋಲ್‌ ಬಂಕ್‌ ಬಳಿ ಟಿಪ್ಪರ್‌ ಲಾರಿಯನ್ನು ಮೊದಲೇ ತಂದು ನಿಲ್ಲಿಸಿದ್ದ. ಕಾಲಿಯಾ ರಫೀಕ್‌ ಇದ್ದ ಕಾರು ಬರುತ್ತಿದ್ದಂತೆ ಆರೋಪಿ ಏಕಾಏಕಿ ಟಿಪ್ಪರನ್ನು ಢಿಕ್ಕಿ ಹೊಡೆಸಿ ಕಾರನ್ನು ಅಡ್ಡಗಟ್ಟಿದ್ದ. ಏತನ್ಮಧ್ಯೆ, ಆರೋಪಿಗಳ ತಂಡದ ಮತ್ತೂಂದು ಎರ್ಟಿಕಾ ಕಾರು ಕಾಲಿಯಾ ರಫೀಕ್‌ನನ್ನು ಬೆನ್ನಟ್ಟಿಕೊಂಡು ಬಂದಿತ್ತು. ದುಷ್ಕರ್ಮಿಗಳ ಕೈಯಲ್ಲಿ ಸಿಕ್ಕಿ ಬೀಳುವುದು ಖಾತರಿಯಾಗುತ್ತಿದ್ದಂತೆ ಕಾಲಿಯಾ ರಫೀಕ್‌ ಮತ್ತು ಸಹಚರರು ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆಗ ನೂರ್‌ ಅಲಿ ಹಾಗೂ ಇನ್ನೋರ್ವ ಆರೋಪಿಯು ಪಿಸ್ತೂಲ್‌ನಿಂದ ಕಾಲಿಯಾ ರಫೀಕ್‌ಗೆ ಗುಂಡು ಹಾರಿಸಿದ್ದರು. ಅಲ್ಲದೆ, ಇತರ ಆರೋಪಿಗಳು ಬೆನ್ನಟ್ಟಿ ತಲವಾರಿನಿಂದ ಕಡಿದು ಕೊಲೆಗೈದಿದ್ದರು ಎಂದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರನ್ನು ಬಂಧಿಸಿದ್ದ ಮಂಗಳೂರು ಪೊಲೀಸರು, ಇತರರ ಪತ್ತೆಗೆ ಬಲೆ ಬೀಸಿದ್ದರು. ಘಟನೆ ನಡೆದಾಗ ಕಾಲಿಯಾ ರಫೀಕ್‌ ಇದ್ದ ಕಾರು ಚಾಲಕ ಮಹಮ್ಮದ್‌ ನಜೀಬ್‌ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಎಂದು ಆರೋಪಿಸಲಾಗಿತ್ತು. ಕೃತ್ಯದ ನಂತರ ಈತ ಮುಂಬಯಿ, ಬೆಂಗಳೂರು, ಎರ್ನಾಕುಳಂ ಮುಂತಾದೆಡೆ ತಲೆ ಮರೆಸಿದ್ದ. ಈತನ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕೇರಳದಲ್ಲಿ ಗುರುವಾರ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಪೊಲೀಸ್‌ ಆಯುಕ್ತ ಡಾ| ಹರ್ಷ ಪಿ.ಎಸ್‌. ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ಆರ್‌. ನಾಯ್ಕ, ಎಸ್‌ಐ ಕಬ್ಟಾಳ್‌ರಾಜ್‌ ಎಚ್‌.ಡಿ. ಹಾಗೂ ಸಿಸಿಬಿ ಸಿಬಂದಿ ಭಾಗವಹಿಸಿದ್ದರು.

ಹಲವು ಪ್ರಕರಣಗಳ ಆರೋಪಿ
ಆರೋಪಿ ಮಹಮ್ಮದ್‌ ನಜೀಬ್‌ ಪ್ರಕರಣದ ಪ್ರಮುಖ ಆರೋಪಿ ಝೀಯಾ ಹಾಗೂ ಇತರರೊಂದಿಗೆ ಸೇರಿ ಸಂಚು ರೂಪಿಸಿ ಕೊಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಆರೋಪಿ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು, ಬೇಕಲ, ನೀಲೇಶ್ವರ ಠಾಣೆಗಳಲ್ಲಿ ಕಳ್ಳತನ, ವಂಚನೆ ಪ್ರಕರಣಗಳು ಸಹಿತ ಒಟ್ಟು 5 ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.