ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಇಂದು ಬೃಹತ್ ಸಮಾವೇಶ
ಲಕ್ಷ ಜನರು ಭಾಗವಹಿಸುವ ನಿರೀಕ್ಷೆ
Team Udayavani, Jan 15, 2020, 1:30 AM IST
ಮಂಗಳೂರು: ಕೇಂದ್ರ ಸರಕಾರವು ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಮಧ್ಯಾಹ್ನ 2.30ಕ್ಕೆ ನಗರದ ಅಡ್ಯಾರ್ ಕಣ್ಣೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಶಹಾ ಗಾರ್ಡನ್ ಮೈದಾನದಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ಸುಮಾರು ಒಂದು ಲಕ್ಷಕ್ಕಿಂತ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ.
ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಎಸ್. ಮುಹಮ್ಮದ್ ಮಸೂದ್ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದ್ದು, “ನಾವು ಭಾರತೀಯರು ತಂಡ’ದ ವಿಶ್ರಾಂತ ಐಎಎಸ್ ಅಧಿಕಾರಿಗಳಾದ ಹರ್ಷ್ ಮಂದರ್ ಹಾಗೂ ಕಣ್ಣನ್ ಗೋಪಿನಾಥನ್, ವಿಶ್ರಾಂತ ನ್ಯಾಯಮೂರ್ತಿ ಗೋಪಾಲಗೌಡ, ಮಾನವ ಹಕ್ಕುಗಳ ಹೋರಾಟಗಾರ ಶಿವಸುಂದರ್, ನ್ಯಾಯವಾದಿ ಸುಧೀರ್ ಕುಮಾರ್ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್, ಉಡುಪಿ ಜಿಲ್ಲಾ ಖಾಝಿ ಅಲ್ಹಾಜ್ ಬೇಕಲ ಇಬ್ರಾಹಿಂ ಮುಸ್ಲಿಯಾರ್, ಉಳ್ಳಾಲ ಖಾಝಿ ಸೆಯ್ಯದ್ ಪಝಲ್ ಕೋಯಮ್ಮ ತಂಗಳ್, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಯು.ಕೆ. ಮೋನು, ಮೈಸೂರು ಹುರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಮಂಗಳೂರು ಬಿಷಪ್ ಡಾ| ಪೀಟರ್ ಪಾವ್É ಸಲ್ಡಾನ್ಹಾ, ಪ್ರಮುಖರಾದ ಪಾವ್É ರೂಫಿ ಡಿ ಕಾಸ್ತಾ, ಯು.ಟಿ. ಖಾದರ್, ಬಿ.ಎಂ. ಫಾರೂಕ್, ಬಿ.ಎ. ಮೊದಿನ್ ಬಾವಾ, ಡಾ| ಅಬ್ದುಲ್ ರಶೀದ್ ಝೈನಿ, ಯು.ಕೆ. ಅಬ್ದುಲ್ ಅಝೀಝ್ ದಾರಿಮಿ, ಮುಹಮ್ಮದ್ ಕುಂಞಿ, ಮುಹಮ್ಮದ್ ಶಾಕಿಬ್, ಎಂ.ಜಿ. ಮುಹಮ್ಮದ್, ರಫೀವುದ್ದೀನ್ ಕುದ್ರೋಳಿ, ಬಿ.ಕೆ. ಇಮಿ¤ಯಾಝ್ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕೆ.ಎಸ್. ಮುಹಮ್ಮದ್ ಮಸೂದ್ ತಿಳಿಸಿದ್ದಾರೆ.
ಕಾಂಗ್ರೆಸ್ ಬೆಂಬಲ
ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಬೆಂಬಲ ಘೋಷಿಸಿದೆ. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರು ಸೇರಿದಂತೆ ಕಾರ್ಪೊರೇಟರ್ಗಳು, ಜಿಲ್ಲಾ, ತಾಲೂಕು ಮತ್ತು ಗ್ರಾ.ಪಂ. ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ.
ರಾಷ್ಟ್ರಧ್ವಜಕ್ಕೆ ಮಾತ್ರ ಅವಕಾಶ; ಶಾಂತಿ ಸಂಯಮಕ್ಕೆ ಕರೆ
ಒಂದು ಕೈಯಲ್ಲಿ ರಾಷ್ಟ್ರಧ್ವಜ, ಮತ್ತೂಂದರಲ್ಲಿ ಸಂವಿಧಾನ, ಮನದಲ್ಲಿ ಅಹಿಂಸೆ, ಬಾಯಲ್ಲಿ ಜನಗಣ ಮನ ಇದು ಸಮಾವೇಶದ ಧ್ಯೇಯವಾಕ್ಯ. ಸಮಾವೇಶದಲ್ಲಿ ಭಾಗವಹಿಸುವವರು ರಾಷ್ಟ್ರಧ್ವಜ ಮತ್ತು ಮುಸ್ಲಿಮ್ ಸೆಂಟ್ರಲ್ ಕಮಿಟಿ ಸಿದ್ಧಪಡಿಸಿರುವ ಪ್ಲಕಾರ್ಡ್, ಘೋಷಣೆಗಳಿಗೆ ಮಾತ್ರ ಅವಕಾಶವಿದೆ. ಯಾವುದೇ ಪಕ್ಷ, ಸಂಘಟನೆಯ ಧ್ವಜ, ಘೋಷಣೆಗಳಿಗೆ ಅವಕಾಶವಿರುವುದಿಲ್ಲ. ಸಮಾವೇಶದಲ್ಲಿ ಭಾಗವಹಿಸುವವರು ಶಾಂತಿ, ಸಂಯಮ ಪಾಲಿಸಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮಹಿಳೆಯರು ಮತ್ತು ಮಕ್ಕಳು ಸಮಾವೇಶದಲ್ಲಿ ಭಾಗವಹಿಸುವ ಆವಶ್ಯಕತೆಯಿಲ್ಲ ಎಂದು ಕೆ.ಎಸ್. ಮುಹಮ್ಮದ್ ಮಸೂದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ