ಇದು ನಮ್ಮಲ್ಲೇ ಮೊದಲು! : ಸಿದ್ದಾರ್ಥ್ ನದಿಗೆ ಹಾರುವುದನ್ನು ನೋಡಿದ್ದ ಆ ವ್ಯಕ್ತಿ ಯಾರು!?

ಸೋಮವಾರ ಸಂಜೆ ಏಳು ಗಂಟೆಗೆ ನೇತ್ರಾವತಿಗೆ ಹಾರಿದ ‘ಆ’ ವ್ಯಕ್ತಿ ಯಾರು?

Team Udayavani, Jul 30, 2019, 2:49 PM IST

726 500

ಮಂಗಳೂರು: ರಾಜ್ಯದ ಮಾಜೀ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರ ಅಳಿಯ ಸಿದ್ದಾರ್ಥ್ ಅವರ ನಿಗೂಢ ನಾಪತ್ತೆಗೆ ಸಂಬಂಧಿಸಿದಂತೆ ಉದಯವಾಣಿಗೆ ಎಕ್ಸ್ ಕ್ಲೂಸಿವ್ ಮಾಹಿತಿಯೊಂದು ಲಭಿಸಿದೆ.

ಈ ಭಾಗದ ಮೀನುಗಾರರೊಬ್ಬರು ‘ಉದಯವಾಣಿ’ ಪ್ರತಿನಿಧಿಗೆ ನೀಡಿರುವ ಈ ಎಕ್ಸ್ ಕ್ಲೂಸಿವ್ ವಿಡಿಯೋ ಮಾಹಿತಿಗೂ ಸಿದ್ದಾರ್ಥ್ ಅವರ ನಿಗೂಢ ನಾಪತ್ತೆಗೂ ಏನಾದರೂ ಸಂಬಂಧವಿದೆಯೇ..? ಹಾಗಾದರೆ ಬನ್ನಿ ಆ ಮೀನುಗಾರರು ಹೆಳಿದ ಆ ನಿಗೂಢ ವಿಷಯವಾದ್ರೂ ಏನು? ಇಲ್ಲಿದೆ ಮಾಹಿತಿ…

ಅವರ ಹೆಸರು ಸೈಮನ್ ಡಿಸೋಜಾ, ಉಲ್ಲಾಳ ಭಾಗದ ನಿವಾಸಿ. ಮೀನುಗಾರಿಕೆ ಇವರ ವೃತ್ತಿ. ಸೈಮನ್ ಅವರು ಎಂದಿನಂತೆ ಸೋಮವಾರ ಸಾಯಂಕಾಲ ಮೀನು ಹಿಡಿಯಲೆಂದು ನೇತ್ರಾವತಿ ನದಿಯಲ್ಲಿ ಬಲೆ ಹಾಕುತ್ತಿದ್ದ ಸಂದರ್ಭದಲ್ಲಿ ಸುಮಾರು 7 ಗಂಟೆಯ ಹೊತ್ತಿಗೆ ಏನೋ ಒಂದು ಸೇತುವೆ ಮೇಲಿನಿಂದ ಬಿದ್ದ ಹಾಗೆ ಸೈಮನ್ ಅವರಿಗೆ ಕಾಣಿಸುತ್ತದೆ.

ಅವರೇ ಹೆಳುವಂತೆ ಸೇತುವೆಯ ಆರನೇ ನಂಬರ್ ಪಿಲ್ಲರ್ ಹತ್ತಿರ ಇವರು ಮೀನು ಹಿಡಿಯುತ್ತಿದ್ದರು. ಮೇಲಿನಿಂದ ಬೀಳುವುದು ಇವರಿಗೆ ಕಾಣಿಸಿದ್ದು ಎಂಟನೇ ಕಂಬದ ಹತ್ತಿರ. ಸೇತುವೆ ಮೇಲಿನಿಂದ ಯಾರೋ ನದಿಗೆ ಹಾರಿದ್ದಾರೆ ಎಂದು ಸೈಮನ್ ಅವರಿಗೆ ತಕ್ಷಣವೇ ತಿಳಿಯುತ್ತದೆ. ಕೂಡಲೇ ತಮ್ಮ ದೋಣಿಯನ್ನು ಸೈಮನ್ ಅವರು ಎಂಟನೇ ಪಿಲ್ಲರ್ ಕಡೆಗೆ ಚಲಾಯಿಸುತ್ತಾರೆ. ಆದರೆ ಅಷ್ಟು ಹೊತ್ತಿಗಾಗಲೇ ನೀರಿಗೆ ಹಾರಿದ್ದ ಆ ವ್ಯಕ್ತಿ ಮುಳುಗಲಾರಂಭಿಸಿದ್ದರು. ಮತ್ತು ಸೈಮನ್ ಅವರು ಅಲ್ಲಿಗೆ ತಲುಪುವಷ್ಟರಲ್ಲಿ ಆ ಆಕೃತಿ ನೀರಿನ ಆಳಕ್ಕೆ ಮುಳುಗಿಯಾಗಿತ್ತು, ಹಾಗಾಗಿ ನಾನು ಅಸಹಾಯಕನಾದೆ ಎಂದು ಸೈಮನ್ ಅವರು ಬೇಸರದಿಂದ ನುಡಿಯುತ್ತಾರೆ.

ಆದರೂ ಸೈಮನ್ ಅವರು ಆ ವ್ಯಕ್ತಿಯನ್ನು ರಕ್ಷಿಸಲೇಬೇಕೆಂಬ ಹಠದಿಂದ ಆ ಭಾಗದಲ್ಲಿ ಹುಡುಕಾಡಲಾರಂಭಿಸುತ್ತಾರೆ ಮತ್ತು ಅದೇ ಸಂದರ್ಭದಲ್ಲಿ ಆ ಕಡೆಗೆ ಬರುತ್ತಿದ್ದ ಇನ್ನೊಂದು ದೋಣಿಯಲ್ಲಿದ್ದವರೂ ಸಹ ಸೈಮನ್ ಅವರೊಂದಿಗೆ ಹುಡುಕಾಟದಲ್ಲಿ ಜೊತೆಯಾಗುತ್ತಾರೆ. ಆದರೆ ಈ ಭಾಗದಲ್ಲಿ ನದಿ ಬಹಳಷ್ಟು ಆಳವಾಗಿರುವುದರಿಂದ ಸೇತುವೆ ಮೇಲಿನಿಂದ ಹಾರಿದ ‘ಆ’ ವ್ಯಕ್ತಿ ನದಿಯ ಆಳಕ್ಕೆ ಮುಳುಗಿಯಾಗಿತ್ತು.

ಈ ಹಿಂದೆಯೂ ಸಹ ಸೈಮನ್ ಅವರು ನದಿಗೆ ಹಾರಿದ ಹಲವರನ್ನು ರಕ್ಷಿಸಿದ್ದಾರೆ. ಅವರಲ್ಲಿ ಒಬ್ಬರು ಪೊಲೀಸ್ ಅಧಿಕಾರಿ ಮತ್ತು ಒಬ್ಬಾಕೆ ಯುವತಿಯೂ ಸೇರಿದ್ದಾರೆ. ಆದರೆ ಈ ಪ್ರಕರಣದಲ್ಲಿ ತಾನು ಅಸಹಾಯಕನಾದೆ ಎಂದು ಸೈಮನ್ ಹೆಳುವಾಗ ಅವರಲ್ಲಿ ಖೇದವಿತ್ತು.

ಹಾಗಾದರೆ ಸೋಮವಾರ ರಾತ್ರಿ 7 ಗಂಟೆಯ ಸುಮಾರಿಗೆ ಸೇತುವೆ ಮೇಲಿನಿಂದ ನದಿಗೆ ಜಿಗಿದ ‘ಆ’ ವ್ಯಕ್ತಿ ಯಾರು? ಹಾಗಾದರೆ ಸೇತುವೆಯಿಂದ ಜಿಗಿದ ಆ ವ್ಯಕ್ತಿ ಸಿದ್ದಾರ್ಥ್ ಅವರೇನಾ? ಎಂಬ ಸಂಶಯ ಇದೀಗ ಬಲವಾಗಿ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.