ನಗರದಲ್ಲಿ ಭಕ್ತಿ, ಸಂಭ್ರಮದ ನಾಗರಪಂಚಮಿ ಆಚರಣೆ
Team Udayavani, Aug 6, 2019, 6:16 AM IST
ಮಹಾನಗರ: ನಗರದ ವಿವಿಧ ದೇವಸ್ಥಾನಗಳ ನಾಗಸನ್ನಿಧಿ, ನಾಗಬನಗಳಲ್ಲಿ ಭಕ್ತರು ಸೀಯಾಳ, ಕ್ಷೀರಾಭಿಷೇಕ ಮಾಡುವ ಮೂಲಕ ನಾಗರಪಂಚಮಿಯನ್ನು ಭಕ್ತಿ, ಸಡಗರದಿಂದ ಆಚರಿಸಿದರು.
ಸೋಮವಾರ ಮುಂಜಾನೆಯಿಂದಲೇ ವಿವಿಧ ದೇವಸ್ಥಾನಗಳಲ್ಲಿ ಭಕ್ತರು ನಾಗ ದೇವರಿಗೆ ಹಾಲು, ಸೀಯಾಳ, ಪಂಚಾಮೃತ ಅಭಿಷೇಕ ನೆರವೇರಿಸಿದರು. ಆಲಯಗಳ ಮುಂಭಾಗದಲ್ಲಿ ವಾಹನದಟ್ಟಣೆ ಅಧಿಕವಿತ್ತು. ಹಬ್ಬದ ಹಿನ್ನೆಲೆಯಲ್ಲಿ ರವಿವಾರ ಸಂಜೆ ಯಿಂದಲೇ ನಗರದಲ್ಲಿ ಸೀಯಾಳ, ಹೂವಿನ ವ್ಯಾಪಾರ ಬಿರುಸಿನಿಂದ ನಡೆಯಿತು.
ಕುಡುಪು ಕ್ಷೇತ್ರ
ಕುಕ್ಕೆ ಸುಬ್ರಹ್ಮಣ್ಯದ ಬಳಿಕ 2ನೇ ಅತಿದೊಡ್ಡ ನಾಗ ಕ್ಷೇತ್ರ ಎನಿಸಿರುವ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಭಕ್ತ ಜನಸಾಗರವೇ ಸೇರಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀ ದೇವರ ದರುಶನ ಪಡೆದರು. ಕ್ಷೇತ್ರದಲ್ಲಿ ಅನ್ನದಾನದ ವ್ಯವಸ್ಥೆ ಯನ್ನೂ ಮಾಡಲಾಗಿತ್ತು. ಕ್ಷೇತ್ರದಲ್ಲಿ ಮುಂಜಾನೆ 4 ಗಂಟೆಯಿಂದಲೇ ಮಳೆ ಯನ್ನು ಲೆಕ್ಕಿಸದೆ ಭಕ್ತರ ಸರತಿ ಸಾಲು ಕಂಡುಬಂತು. ಶ್ರೀ ಅನಂತ ಪದ್ಮನಾಭ ದೇವರಿಗೆ ಮುಂಜಾನೆ 4 ಗಂಟೆಗೆ ಉಷಃ ಕಾಲ ಪೂಜೆ ಜರಗಿ ತದನಂತರ ಶ್ರೀ ದೇವರಿಗೆ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ಅಷ್ಟೋತ್ತರ ಅರ್ಚನೆ, ಸಹಸ್ರನಾಮ ಅರ್ಚನೆ, ನಾಗರ ಪಂಚಮಿಯ ವಿಶೇಷವಾದ ಹರಿವಾಣ ನೈವೇದ್ಯ ಸೇವೆ ಜರಗಿತು. ಮಧ್ಯಾಹ್ನ ಹೂವಿನ ಅಲಂಕಾರ ಗೊಂಡ ಶ್ರೀ ಅನಂತ ಪದ್ಮನಾಭ ದೇವರಿಗೆ ವಿಶೇಷ ಮಹಾಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ಬಳಿಕ ಅನ್ನಛತ್ರದಲ್ಲಿ ಸುಮಾರು 20 ಸಾವಿರಕ್ಕೂ ಮಿಕ್ಕಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಭಕ್ತರಿಗೆ ವಿಶೇಷವಾದ ಹಾಲು-ಪಾಯಸ ನೀಡಲಾಯಿತು.
ಸುಮಾರು 50 ಸಾವಿರಕ್ಕೂ ಅಧಿಕ ಜನ ನಾಗದೇವರ ದರ್ಶನ ಪಡೆದರು. ಸುಮಾರು 15 ಸಾವಿರದಷ್ಟು ತಂಬಿಲ ಸೇವೆ, 5 ಸಾವಿರದಷ್ಟು ಪಂಚಾಮೃತ ಅಭಿಷೇಕ ಸೇವೆ ನಡೆಯಿತು. ಮಧ್ಯಾಹ್ನ ಸುಮಾರು 25 ಸಾವಿರಕ್ಕೂ ಹೆಚ್ಚು ಮಂದಿ ಸೀಯಾಳವನ್ನು ಭಕ್ತರು ದೇವರಿಗೆ ಅರ್ಪಿಸಿದರು.
ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಆಡಳಿತ ಮೊಕ್ತೇಸರ ಕೆ. ನರಸಿಂಹ ತಂತ್ರಿ, ಆನುವಂಶಿಕ ಮೊಕ್ತೇಸರ ಬಾಲಕೃಷ್ಣ ಕಾರಂತ, ಮೊಕ್ತೇಸರ ಭಾಸ್ಕರ್ ಕೆ., ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಭಕ್ತರು ನಾಗರಪಂಚಮಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಶ್ರೀ ಶರವು ಮಹಾಗಣಪತಿ ದೇವಸ್ಥಾನ, ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ, ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಕದ್ರಿ ಶ್ರೀ ಮಂಜುನಾಥ ದೇವ ಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಸಹಿತ ವಿವಿಧ ದೇವಾಲಯಗಳಲ್ಲಿ ನಾಗರಪಂಚಮಿ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ