ನಳಿನ್ ದ್ರೋಹ: ಪಾಲೆಮಾರ್ ಆರೋಪ
Team Udayavani, Apr 22, 2018, 10:56 AM IST
ಮಂಗಳೂರು: ಮಂಗಳೂರು ನಗರ ಉತ್ತರ ಬಿಜೆಪಿ ಟಿಕೆಟ್ ಆಕಾಂಕ್ಷಿ ಯಾಗಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರು ತನಗೆ ಟಿಕೆಟ್ ಕೈತಪ್ಪಲು ಸಂಸದ ನಳಿನ್ ಕುಮಾರ್ ಕಟೀಲು ಅವರೇ ಕಾರಣ ಎಂದು ಆರೋಪಿಸಿದ್ದಾರೆ.
ನಾನು ಬಿಜೆಪಿಗೆ ಯಾವುದೇ ದ್ರೋಹ ಎಸಗಿಲ್ಲ, ಲೋಕಸಭಾ ಚುನಾವಣೆ ವೇಳೆ ನಳಿನ್ ಗೆಲ್ಲಿಸಲು ನನ್ನ ಕೈಯಾರೆ ಹಣ ಖರ್ಚು ಮಾಡಿದ್ದೇನೆ. ಆದರೆ ಈಗ ಅವರು ನನಗೆ ದ್ರೋಹ ಎಸಗಿದ್ದಾರೆ ಎಂದು ಬೇಸರದಿಂದ ಹೇಳುತ್ತಿದ್ದೇನೆ ಎಂದು ಪಾಲೆಮಾರ್ ಅವರು ಶನಿವಾರ ಮಾಧ್ಯಮದ ಮಂದಿಗೆ ತಿಳಿಸಿದರು.
ಯಡಿಯೂರಪ್ಪ ಅವರ ಕಚೇರಿಯಿಂದ ಕೆಲವು ದಿನಗಳ ಹಿಂದೆ ಕರೆ ಮಾಡಿ ಬಿ ಫಾರಂ ನೀಡುವ ಬಗ್ಗೆ ಹೆಸರು, ಐಡಿ ಕಾರ್ಡ್ ಪಡೆದುಕೊಂಡಿದ್ದರು. ನಳಿನ್ ಕೂಡ ಸ್ಪರ್ಧಿಸುವಂತೆ ಕೋರಿಕೊಂಡಿದ್ದರು. ಎ. 23ರಂದು ನಾಮಪತ್ರ ಸಲ್ಲಿಸುವುದಾಗಿ ಕಾರ್ಯಕರ್ತರಿಗೆ ತಿಳಿಸಿದ್ದೆ. ಆದರೆ ಶುಕ್ರವಾರ ಪಟ್ಟಿ ಬಿಡುಗಡೆ ಆಗುವಾಗ ನನ್ನ ಹೆಸರಿಲ್ಲ. ಸಂಸದರೇ ತಪ್ಪಿಸಿದ್ದಾರೆ ಎಂದು ಪಾಲೆಮಾರ್ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ