ಧ್ಯೇಯ ನಿಷ್ಠ-ದೇಶ ನಿಷ್ಠ ರಾಜಕಾರಣ ಬಿಜೆಪಿ ಸಂಕಲ್ಪ :ನಳಿನ್‌ ಕುಮಾರ್‌ ಕಟೀಲು


Team Udayavani, Nov 13, 2021, 6:47 AM IST

ಧ್ಯೇಯ ನಿಷ್ಠ-ದೇಶ ನಿಷ್ಠ ರಾಜಕಾರಣ ಬಿಜೆಪಿ ಸಂಕಲ್ಪ :ನಳಿನ್‌ ಕುಮಾರ್‌ ಕಟೀಲು

ಮಂಗಳೂರು: ಧ್ಯೇಯ ನಿಷ್ಠ -ದೇಶನಿಷ್ಠ ರಾಜಕಾರಣ ಬಿಜೆಪಿಯ ಸಂಕಲ್ಪವಾಗಿದ್ದು ಈ ಕಾರ್ಯದಲ್ಲಿ ಪಕ್ಷದ ಪ್ರತಿಯೋರ್ವ ಕಾರ್ಯಕರ್ತರು ಸಮರ್ಪಣ ಭಾವದಿಂದ ಸಮರ್ಪಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರು ಹೇಳಿದ್ದಾರೆ.

ನಗರದ ಟಿ.ವಿ. ರಮಣ್‌ ಪೈ ಹಾಲ್‌ನಲ್ಲಿ ಆಯೋಜಿಸಿರುವ ಬಿಜೆಪಿ ಕರ್ನಾಟಕ ಪ್ರಕೋಷ್ಠಗಳ ಎರಡು ದಿನಗಳ ರಾಜ್ಯಮಟ್ಟದ ಚಿಂತನ ವರ್ಗವನ್ನು ಶುಕ್ರವಾರ ಉದ್ಘಾಟಿಸಿ  ಮಾತನಾಡಿದ ಅವರು, ರಾಷ್ಟ್ರೀಯ ವಿಚಾರಧಾರೆಯ ಭದ್ರ ತಳಹದಿಯಲ್ಲಿ ಬೆಳೆದು ಬಂದಿರುವ ಬಿಜೆಪಿ ಎಂದೂ ತನ್ನ ಸಿದ್ಧಾಂತದಲ್ಲಿ ರಾಜಿ ಮಾಡಿಕೊಂಡಿಲ್ಲ. ಬಿಜೆಪಿಗೆ ರಾಜಕಾರಣ ವೃತ್ತಿಯಲ್ಲ. ಅದೊಂದು ವ್ರತ. ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಗಿಂತ ದೇಶ ಮುಖ್ಯ; ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಸಿದ್ಧಾಂತದಡಿ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಸ್ವಚ್ಛ, ಭ್ರಷ್ಟ ರಹಿತ ಆಡಳಿತವನ್ನು ನೀಡಿದ ಹೆಗ್ಗಳಿಕೆಯನ್ನು ಬಿಜೆಪಿ ಹೊಂದಿದೆ. ಅಟಲ್‌ ಬಿಹಾರಿ ವಾಜಪೇಯಿಯವರ ಆರು ವರ್ಷಗಳ ಆಡಳಿತ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಈವರೆಗಿನ ಆಡಳಿತದಲ್ಲಿ ಎಲ್ಲೂ  ಭ್ರಷ್ಟಾಚಾರ ನಡೆದಿರುವ ಬಗ್ಗೆ ಆರೋಪಗಳಿಲ್ಲ. ಆದರೆ ಕಾಂಗ್ರೆಸ್‌ ಆಡಳಿತದಲ್ಲಿ ಲಾಲ್‌ಬಹದ್ದೂರ್‌  ಶಾಸ್ತ್ರಿಯವರು ಪ್ರಧಾನಿಯಾಗಿದ್ದ ಅವಧಿಯನ್ನು ಹೊರತುಪಡಿಸಿ ಉಳಿದಂತೆ ಎಲ್ಲಾ ಪ್ರಧಾನಿಗಳ ಕಾಲದಲ್ಲೂ  ಭ್ರಷ್ಟಾಚಾರಗಳು ನಡೆದಿವೆ. ಬಿಜೆಪಿಯದ್ದು ಭ್ರಷ್ಟಾಚಾರ ರಹಿತ ಆಡಳಿತವಾಗಿದ್ದರೆ ಕಾಂಗ್ರೆಸ್‌ನದ್ದು  ಭ್ರಷ್ಟಾಚಾರ ಸಹಿತ  ಆಡಳಿತ ಎಂದರು.

ಮಹಾತ್ಮಾ ಗಾಂಧೀಜಿಯವರು ರಾಮರಾಜ್ಯದ ಕನಸು ಕಂಡಿದ್ದರಲ್ಲದೇ  ಸ್ವಾತಂತ್ರ್ಯದ  ಬಳಿಕ ಕಾಂಗ್ರೆಸ್‌ ಪಕ್ಷವನ್ನು ವಿಸರ್ಜಿಸ ಬೇಕೆಂದು ಹೇಳಿದ್ದರು. ಕಾಂಗ್ರೆಸ್‌ ಅಧಿಕಾರದಲ್ಲಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಆಗುವ ಅನಾಹುತಗಳನ್ನು ಹಾಗೂ ರಾಮ ರಾಜ್ಯದ ಕನಸು ಸಾಕಾರಗೊಳ್ಳಲು ಸಾಧ್ಯವಿಲ್ಲ ಎಂಬುದನ್ನು ಅವರು ಮೊದಲೇ ಉಹಿಸಿ ಆ ರೀತಿ ಹೇಳಿದ್ದರು ಎಂದರು.

ದೇಶದ ರಾಜಕೀಯ ಇತಿಹಾಸ ಗಮನಿಸಿದರೆ ಕಾಂಗ್ರೆಸ್‌, ಜನತಾ ಪರಿವಾರ ಸಾಕಷ್ಟು  ಬಾರಿ ವಿಭಜನೆಗೊಂಡಿದೆ. ಆದರೆ ಬಿಜೆಪಿ ಸಂಘಟನಾತ್ಮಕವಾಗಿ ಬಲಿಷ್ಠವಾಗಿ ಬೆಳೆದಿದೆ. ನಮ್ಮ ವಿಚಾರಧಾರೆ, ಕಾರ್ಯಕ್ರಮಗಳಲ್ಲಿ ಎಲ್ಲೂ ವ್ಯತ್ಯಾಸಗಳಾಗಿಲ್ಲ ಎಂದವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ  ದ.ಕ. ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಪ್ರಸ್ತಾವನೆಗೈದರು. ರಾಜ್ಯ ಸಂಯೋಜಕ ಭಾನು ಪ್ರಕಾಶ್‌, ಸಹ ಸಂಯೋಜಕ ಡಾ| ಶಿವ ಯೋಗಿ ಸ್ವಾಮಿ ಉಪಸ್ಥಿತರಿದ್ದರು. ಕೈಗಾರಿಕಾ ಪ್ರಕೋಷ್ಠ ಸಂಚಾಲಕ ಪ್ರದೀಪ್‌ ಪೈ ಸ್ವಾಗತಿಸಿದರು.  ನಗರ ಪ್ರಕೋಷ್ಠ ಸಂಚಾಲಕ  ಪ್ರೇಮಾನಂದ ಶೆಟ್ಟಿ ವಂದಿಸಿದರು.

ಚಿಂತನ ವರ್ಗ ಮಂಗಳೂರಿನಲ್ಲಿ ಪ್ರಥಮ:

ಬಿಜೆಪಿ ಪ್ರಕೋಷ್ಠಗಳ ಚಿಂತನ ವರ್ಗ ಪ್ರಥಮವಾಗಿ ಮಂಗಳೂರಿನಲ್ಲಿ ನಡೆಯುತ್ತಿದೆ. ರಾಜ್ಯ ಬಿಜೆಪಿಯ ಎಲ್ಲ 24 ಪ್ರಕೋಷ್ಠಗಳ ಸಂಯೋಜಕರು, ಸಹ ಸಂಯೋಜಕರು ಹಾಗೂ ರಾಜ್ಯ ಸಮಿತಿ ಸದಸ್ಯರು ಸೇರಿ ಒಟ್ಟು 225 ಮಂದಿ ಭಾಗವಹಿಸುತ್ತಿದ್ದಾರೆ. ಆರ್ಥಿಕ ನೀತಿ, ಸಂಘಟನಾತ್ಮಕ ವಿಚಾರ, ಕೇಂದ್ರ ಸರಕಾರದ ಕಾನೂನು ಹಾಗೂ ಅದರ ಪರಿಣಾಮ, ಸಂಘಟನಾತ್ಮಕವಾಗಿ ಪ್ರಕೋಷ್ಠ, ಜವಾಬ್ದಾರಿಗಳ ಕುರಿತು ಪ್ರಶಿಕ್ಷಣ ಜರಗಲಿದೆ. ಶನಿವಾರ ಅಪರಾಹ್ನ 1 ಗಂಟೆಗೆ ಚಿಂತನ ವರ್ಗದ ಸಮಾರೋಪ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.