Nalin kumar Kateel: ಕಾಂಗ್ರೆಸ್‌ ಹೈಕಮಾಂಡ್‌ಗೆ ರಾಜ್ಯ ಎಟಿಎಂ: ನಳಿನ್‌


Team Udayavani, Oct 17, 2023, 11:13 PM IST

Nalin kumar Kateel: ಕಾಂಗ್ರೆಸ್‌ ಹೈಕಮಾಂಡ್‌ಗೆ ರಾಜ್ಯ ಎಟಿಎಂ: ನಳಿನ್‌

ಪಣಂಬೂರು: ರಾಜ್ಯದ ಕಾಂಗ್ರೆಸ್‌ ಕಾರ್ಪೊರೇಟರ್‌ ಮನೆಯಲ್ಲಿ ದೊರಕಿರುವುದು ಲಂಚದ ಹಣ. ಗುತ್ತಿಗೆದಾರರ 600 ಕೋಟಿ ರೂ.ಗಳನ್ನು ಕಮಿಷನ್‌ ಆಧಾರದಲ್ಲಿ ಬಿಡುಗಡೆ ಮಾಡಿದ್ದು, ಅದು ಐಟಿ ದಾಳಿಯ ಸಂದರ್ಭ ಸಿಕ್ಕಿದೆ. ಇದಕ್ಕೆ ಪುರಾವೆಯೂ ಇದ್ದು ಕಾಂಗ್ರೆಸ್‌ ನಾಯಕರಿಗೆ ಮತ್ತೆ ತಿಹಾರ್‌ ಜೈಲಿನ ಕೋಣೆ ಸಿದ್ಧವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಭಾರತೀಯ ಜನತಾ ಪಕ್ಷ ಮಂಗಳೂರು ಉತ್ತರ ಮಂಡಲದ ವತಿಯಿಂದ ಕಾಂಗ್ರೆಸ್‌ ಭ್ರಷ್ಟಾಚಾರದ ವಿರುದ್ಧ ಕಾವೂರು ಜಂಕ್ಷನ್‌ನಲ್ಲಿ ಮಂಗಳವಾರ ಆಯೋಜಿಸಲಾದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಹಿಂದೆ ನಮ್ಮ ಸರಕಾರಕ್ಕೆ ಪೇ ಸಿಎಂ, 40 ಪರ್ಸೆಂಟ್‌ ಸರಕಾರ ಎಂದು ಸುಳ್ಳು ಆರೋಪ ಮಾಡಿದರು. ಸಾಕ್ಷé ನೀಡಿ ಎಂದರೆ ಅದೂ ಇರಲಿಲ್ಲ. 4 ತಿಂಗಳಲ್ಲಿ ಸಾಕ್ಷ್ಯ ಇಲ್ಲದೆ ಯಾವುದೇ ಮಂತ್ರಿಯನ್ನು ಜೈಲಿಗೆ ಕಳಿಸಲು ವಿಫಲರಾದರು.ಇದೀಗ ಕಾಂಗ್ರೆಸ್‌ ಸರಕಾರವೇ 80 ಪರ್ಸೆಂಟ್‌ ಸರಕಾರವಾಗಿದೆ. ಹಣ ಪಡೆದ ಬಗ್ಗೆ ಚೀಟಿಯೂ ಐಟಿ ಅಧಿಕಾರಿಗಳಿಗೆ ದೊರೆತಿದೆ. ಪಂಚ ರಾಜ್ಯ ಚುನಾವಣೆಗೆ ಕಳಿಸಲು ಇಟ್ಟ ಹಣವಾಗಿದೆ ಎಂಬುದು ಸ್ಪಷ್ಟ. ಕರ್ನಾಟಕ ಕಾಂಗ್ರೆಸ್‌ ಹೈಕಮಾಂಡ್‌ಗೆ ಎಟಿಎಂ ಆಗಿದೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ರಾಜೀನಾಮೆ ನೀಡಬೇಕು. ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಈ ಮೂಲಕ ತಮ್ಮ ಸಾಚಾತನ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.

ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಹಣ ನಿಗದಿ ಪಡಿಸಲಾಗಿದೆ. ವರ್ಗಾವಣೆ ದಂದೆಯಾಗಿ ಬೆಳೆದು ನಿಂತು ತಾಲೂಕು ಕಚೇರಿಯಿಂದ ಎಲ್ಲೆಡೆ ಲಂಚ ಕೇಳುವ ಪರಿಸ್ಥಿತಿ ಉಂಟಾಗಿದೆ.

ಮೈಸೂರು ದಸರದಲ್ಲಿ ಕಲಾವಿದನಿಂದ ಕಮಿಷನ್‌ ಪಡೆಯಲು ಮುಂದಾದ ಇಂತಹ ಕೆಟ್ಟ ಸರಕಾರ ಬೇರೆ ಇರಲಿಕ್ಕಿಲ್ಲ.ಇಂದು ಅಭಿವೃದ್ಧಿಗೆ ಹಣವೇ ಇಲ್ಲವಾಗಿದೆ. ಹದಿನೈದು ದಿನದಲ್ಲಿ ರಾಜ್ಯದಲ್ಲಿ ವಿದ್ಯುತ್‌ ಇಲ್ಲದೆ ಕತ್ತಲೆ ರಾಜ್ಯವಾಗುತ್ತಿದೆ. ಉಚಿತ ವಿದ್ಯುತ್‌ ಬಿಡಿ ಯಾರಿಗೂ ಇಲ್ಲವಾಗಿದೆ.32 ರೈತರು ಸಮಸ್ಯೆಯ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಭಿವೃದ್ಧಿಗೆ ಹಣವಿಲ್ಲ. ಇದ್ದ ಖಜಾನೆಯೇ ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಮನೆಯಲ್ಲಿ ಇರುವ ಹಾಗಿದೆ ಎಂದು ಹೇಳಿದರು.
ಬಿಜೆಪಿ ಕಾಂಗ್ರೆಸ್‌ ಸರಕಾರದ ಲಂಚಾವತಾರದ ವಿರುದ್ದ ರಾಜ್ಯ ವ್ಯಾಪಿ ಹೋರಾಟ ನಡೆಸಲು ನಿರಂತರವಾಗಿ ನಡೆಯಲಿದೆ ಎಂದರು.

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್‌ ಶೆಟ್ಟಿ ವೈ ಮಾತನಾಡಿ,ನೂರು ಕೋಟಿ ಕಪ್ಪು ಹಣ ಕಾಂಗ್ರೆಸ್‌ ವ್ಯಕ್ತಿಗಳ ಮನೆಯಲ್ಲಿ ಪತ್ತೆಯಾಗಿದೆ.ಇದು ಚುನಾವಣೆಗೆ ಹಂಚಲು ತೆಗೆದಿಡಲಾಗಿದೆ. ಅಬಕಾರಿ ಇಲಾಖೆಯಲ್ಲಿ ಕನಿಷ್ಠ 25 ಲಕ್ಷ ಹಣ ನೀಡದೆ ದಾಖಲೆ ಸಿಗದ ಸ್ಥಿತಿಯಿದೆ.ಹೀಗಾಗಿ ಕಲೆಕ್ಷನ್‌ ಮಾಸ್ಟರ್‌ ಸಿದ್ದರಾಮಯ್ಯ ಎಂದೇ ಬಿಜೆಪಿ ಮುಖ್ಯಮಂತ್ರಿಯನ್ನು ಕರೆಯುತ್ತದೆ.ಯಾವುದೇ ಕೇಸು ದಾಖಲಿಸಿದರೂ ಕಾನೂನು ಹೋರಾಟ ಮಾಡಲೂ ಸಿದ್ದರಿದ್ದೇವೆ.ಮಂಗಳೂರಿಗೆ ಲಂಚ ಕೊಟ್ಟು ಸ್ಥಾನಕ್ಕೆ ಬಂದ ಅಧಿಕಾರಿಯೊಬ್ಬರು ಕೋಟಿ ಕೊಟ್ಟು ಬಂದು ಜನರಿಂದ ಸುಲಿಗೆ ಮಾಡುವ ಮಾಹಿತಿ ಬರುತ್ತಿದೆ. ಖಜಾನೆಯಲ್ಲಿ ಹಣವಿಲ್ಲದ ಕಾರಣ ನಮಗೆ ಅನುದಾನ ಸಿಗುತ್ತಿಲ್ಲ. ಈ ಸರಕಾರದ ಅವಧಿಯಲ್ಲಿ ಅಭಿವೃದ್ಧಿ ಎಂಬುದು ಶೂನ್ಯವಾಗಲಿದೆ ಎಂದರು.

ಆರು ತಿಂಗಳಲ್ಲಿ ಶಾಸಕರಿಗೆ ಹಣ ಬಿಡುಗಡೆ ಮಾಡುವ ಯೋಗ್ಯತೆ ಇಲ್ಲ. ಕನಿಷ್ಠ 50 ಸಾವಿರ ರೂ. ತೋಡು ಮಾಡಲು ಹಣ ವಿಲ್ಲ. ನಮ್ಮ ಸರಕಾರದಲ್ಲಿ ಈ ಕ್ಷೇತ್ರ ಒಂದಕ್ಕೇ 2ಸಾವಿರ ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದರು.ಬಿಜೆಪಿ ಮುಖಂಡರಾದ ಜಗದೀಶ್‌ ಶೇಣವ, ತಿಲಕ್‌ ರಾಜ್‌ ಕೃಷ್ಣಾಪುರ,ಕಸ್ತೂರಿ ಪಂಜ, ಪೂಜಾ ಪೈ,ರಣ್‌ದೀಪ್‌ ಕಾಂಚನ್‌,ಉಪಮೇಯರ್‌ ಸುನಿತಾ, ಬಿಜೆಪಿ ಮನಪಾ ಸದಸ್ಯರು, ಜಿಲ್ಲೆಯ ಪ್ರಮುಖರು,ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (6) copy

Mangaluru: ಬಗೆಹರಿಯದ ಬಜಾಲ್‌ ಅಂಡರ್‌ಪಾಸ್‌ ಅವ್ಯವಸ್ಥೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.