ನಂತೂರು ಮೇಲ್ಸೇತುವೆ ಕಾಮಗಾರಿಗೆ ಒತ್ತಾಯ


Team Udayavani, Dec 29, 2017, 12:03 PM IST

29-Dec-8.jpg

ನಂತೂರು: ಇಲ್ಲಿನ ಜಂಕ್ಷನ್‌ ನಲ್ಲಿ ದಿನದಿಂದ ದಿನಕ್ಕೆ ಅಪಘಾತಗಳು ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಕೂಡಲೇ ಮೇಲ್ಸೇತುವೆ ಕಾಮಗಾರಿಯನ್ನು ಆರಂಭಿಸಬೇಕು ಎಂದು ಪ್ರಜಾವಿಕಾಸ ಸೇವಾ ಟ್ರಸ್ಟ್‌ನ ಧರ್ಮೇಂದ್ರ ಒತ್ತಾಯಿಸಿದ್ದಾರೆ. ಪ್ರಜಾವಿಕಾಸ ಸೇವಾ ಟ್ರಸ್ಟ್‌ ಸಹಿತ ವಿವಿಧ ಸಂಘಟನೆಗಳ ಒಕ್ಕೂಟದಿಂದ ನಂತೂರು ಜಂಕ್ಷನ್‌ ಮೇಲ್ಸೇತುವೆ ಕಾಮಗಾರಿಗೆ ಒತ್ತಾಯಿಸಿ ನಂತೂರು ವೃತ್ತದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ನಗರದಲ್ಲಿ ಜನಸಂದಣಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೂಡುರಸ್ತೆಗಳ ಸಂಚಾರವನ್ನು ನಿಭಾಯಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇದಕ್ಕೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲವೊಂದು ಕಡೆ ರಸ್ತೆ ವಿಸ್ತರಣೆ, ಮೇಲ್ಸೇತುವೆ, ಅಂಡರ್‌ ಪಾಸ್‌ನಂತಹ ಅಗತ್ಯವನ್ನು ಮನಗಂಡು ನಂತೂರು, ಬಸವಣ್ಣ ವೃತ್ತಗಳಲ್ಲಿ ಸೂಕ್ತ ವ್ಯವಸ್ಥೆಯನ್ನು ನೀಡಲು ಶಾಸಕ, ಸಂಸದರು ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ದೂರಿದರು.

ಕಾಲಹರಣ: ಆರೋಪ
ಆಮ್‌ ಆದ್ಮಿ ಪಕ್ಷದ ಸಂಚಾಲಕ ರಾಜೇಂದ್ರ ಮಾತನಾಡಿ, ನಂತೂರು ವೃತ್ತದ ಅಪಾಯಕಾರಿಯಾಗಿ ಮಾರ್ಪಾಡಾಗುತ್ತಿದೆ. ಜಿಲ್ಲಾಡಳಿತಕ್ಕೆ 2004ರಿಂದಲೂ ಮೇಲ್ಸೇತುವೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು ,ಕಾಮಗಾರಿ ನಡೆಸಲು ಸರಕಾರ ಕಾಲಹರಣ ಮಾಡುತ್ತಿದೆ ಎಂದು ತಿಳಿಸಿದರು. ನಂತೂರು ವೃತ್ತ ಪಕ್ಕದಲ್ಲಿಯೇ ಇರುವ ಬಸ್‌ ನಿಲ್ದಾಣವನ್ನು ಸ್ಥಳಾಂತರ ಮಾಡಿ ಫುಟ್‌ಪಾತ್‌ ನಿರ್ಮಾಣ ಮಾಡುತ್ತೇವೆ ಎಂದು ಮೇಯರ್‌ ಕವಿತಾ ಸನಿತ್‌ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದು, ಇದರಿಂದ ಸಮಸ್ಯೆ ಬಗೆಹರಿಯಲು ಸಾಧ್ಯವಿಲ್ಲ ಎಂದರು.

ನಂತೂರು ವೃತ್ತದ ಮೂಲಕ ಕೆಪಿಟಿ ಕಡೆಗೆ ತೆರಳುವ ಬಸ್‌ಗಳ ನಿಲ್ದಾಣವನ್ನು ಇಲ್ಲೇ ಪಕ್ಕದಲ್ಲಿರುವ ಉಲ್ಲಾಸ್‌ ಬಾರ್‌ ಪಕ್ಕಕ್ಕೆ ಸ್ಥಳಾಂತರಿಸಲಿ, ಅಲ್ಲದೆ ವೃತ್ತದ ಬಳಿಯೇ ಎರಡು ಬದಿಯಲ್ಲಿ ರಿಕ್ಷಾ ನಿಲ್ದಾಣವಿದ್ದು, ಒಂದು ಸರದಿಯ ರಿಕ್ಷಾಗಳು ಕೆಪಿಟಿ ಕಡೆಗೆ ಮಾತ್ರ ತೆರಳಲಿ ಮತ್ತೂಂದು ಸಾಲಿನ ರಿಕ್ಷಾಗಳು ಕದ್ರಿ ಮಾರ್ಗದಲ್ಲಿ ತೆರಳಲಿ, ಹೀಗಿದ್ದಾಗ ಅಪಘಾತ ಪ್ರಮಾಣ ಕಡಿಮೆಯಾಗಬಹುದು ಎಂದು ಸಲಹೆ ನೀಡಿದರು. ಇದೇ ವೇಳೆ ವಿಶ್ವನಾಥ್‌ ಕೆ.ಬಿ., ಪದ್ಮನಾಭ ಉಳ್ಳಾಲ್‌, ಮೊಹಮ್ಮದ್‌ ಮೊಹಿಸಿನ್‌, ಅಜಯ್‌ ಡಿ’ಸಿಲ್ವ, ರಾಜೇಂದ್ರ ಕುಮಾರ್‌, ಲೋಕೇಶ್‌ ಉಳ್ಳಾಲ್‌, ನಿತಿನ್‌ ಪಾಂಡೇಶ್ವರ್‌ ಸಹಿತ ವಿವಿಧ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.