ಪಠ್ಯ ಪುಸ್ತಕ ವಿತರಣೆ ವಿಳಂಬ: ಕ್ರಮಕ್ಕೆ ಆಗ್ರಹ


Team Udayavani, Jul 27, 2017, 7:35 AM IST

Gramsabhe-NARAVI.jpg

ವೇಣೂರು: ಸರಕಾರಿ ಪ್ರಾಥಮಿಕ ಶಾಲೆಯ ಕೆಲವು ವಿದ್ಯಾರ್ಥಿಗಳಿಗೆ ಇನ್ನೂ ಕೂಡ ಪಠ್ಯಪುಸ್ತಕ ಸಿಕ್ಕಿಲ್ಲ. ಶಾಲೆ ಪ್ರಾರಂಭವಾಗಿ ತಿಂಗಳೆರಡು ಕಳೆಯುತ್ತಿದೆ. ಪಠ್ಯಪುಸ್ತಕ ನೀಡದೆ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡಲಾಗುತ್ತಿದೆ ಎಂದು ನಾರಾವಿ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾರಾವಿ ಗ್ರಾ.ಪಂ.ನ 2017 -18ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಗ್ರಾ.ಪಂ. ಅಧ್ಯಕ್ಷ ರವೀಂದ್ರ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ಜರಗಿತು. ಪಠ್ಯಪುಸ್ತಕ ವಿತರಣೆ ವಿಳಂಬದ ಕುರಿತು ಸಭೆಯಲ್ಲಿ ಗ್ರಾಮಸ್ಥರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನೋಡಲ್‌ ಅಧಿಕಾರಿ, ಬೆಳ್ತಂಗಡಿ ಶಿಕ್ಷಣ ಇಲಾಖೆಯ ಯಶೋಧರ ಸುವರ್ಣ ಅವರು ಪಠ್ಯ ಪುಸ್ತಕ ವಿತರಣೆಯಲ್ಲಿ ಇಲಾಖೆಯಿಂದ ಲೋಪವಾಗಿಲ್ಲ. ಮುದ್ರಣ ವ್ಯವಸ್ಥೆಯಲ್ಲಿ ತೊಂದರೆಯಾಗಿ ಈ ಸಮಸ್ಯೆ ಆಗಿದೆ. ಕೆಲವೇ ದಿನಗಳಲ್ಲಿ ಪುಸ್ತಕ ರವಾನೆಯಾಗಲಿದೆ ಎಂದರು.

ಪಶುವೈದ್ಯಾಧಿಕಾರಿ ನೇಮಕಕ್ಕೆ ಅಗ್ರಹ
ನಾರಾವಿ ಪಶು ಆಸ್ಪತ್ರೆಯಲ್ಲಿ ಪೂರ್ಣಕಾಲಿಕ ಪಶುವೈದ್ಯರು ಇಲ್ಲ. ಇರುವ ಪಶು ವೈದ್ಯರಿಂದ ತುರ್ತು ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು. ಪೂರ್ಣಕಾಲಿಕ ಪಶುವೈದ್ಯರ ನೇಮಕ ಒತ್ತಾಯಿಸಿ ಪಂಚಾಯತ್‌ ನಿರ್ಣಯ ಕೈಗೊಂಡಿತು.

ಗೋದಾಮಿಗೆ ಬೇಡಿಕೆ 
ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ದಯಾನಂದ ಮಾತನಾಡಿ, ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಲಾಭದಾಯಕವಾಗಿದೆ. ಧ.ಗ್ರಾ. ಯೋಜನೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದು, ರೈತರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು. ರೈತರ ಅನುಕೂಲತೆಯ ದೃಷ್ಟಿಯಿಂದ ಪಂಚಾಯತ್‌ ಗೋದಾಮು ಒದಗಿಸಿಕೊಟ್ಟರೆ ಕೃಷಿ ಸುಣ್ಣವನ್ನು ದಾಸ್ತಾನಿರಿಸಲಾಗುವುದು. ಇದರಿಂದ ಸರಬರಾಜಿಗೆ ಅನುಕೂಲವಾಗಲಿದೆ ಎಂದರು.

ಶಿಕ್ಷಕಿ ಕೊರತೆ
ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಉಂಟಾಗಬಾರದೆಂಬ ನಿಟ್ಟಿನಲ್ಲಿ ಅಂಗನವಾಡಿ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ ಎಂದು ಅಂಗನವಾಡಿ ಇಲಾಖಾಧಿಕಾರಿ ತಿಳಿಸಿದರು. ಈ ವೇಳೆ ನೂಜೋಡಿ ಅಂಗನವಾಡಿ ಕೇಂದ್ರಕ್ಕೆ ಶಿಕ್ಷಕಿಯ ಕೊರತೆ ಇರುವ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದರು.

ಅನುದಾನದ ವರ್ಗಾವಣೆ ಬೇಡ
ಪ.ಜಾತಿ ಮತ್ತು ಪ.ಪಂಗಡಕ್ಕೆ ಮೀಸಲಿಟ್ಟು ಅನುದಾನವನ್ನು ಇತರೆಡೆಗಳಿಗೆ ವರ್ಗಾವಣೆ ಮಾಡಲಾಗುತ್ತಿರುವುದು ಕಂಡು ಬಂದಿದೆ. ಈ ರೀತಿಯಾದರೆ ಒಂದು ವರ್ಗಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಎಸ್‌ಸಿ, ಎಸ್‌ಟಿಗೆ ಮೀಸಲಿಟ್ಟ ಅನುದಾನ ಬೇರೆಡೆಗೆ ವರ್ಗಾವಣೆಯಾಗಬಾರದು ಎಂದು ಗ್ರಾ.ಪಂ. ಸದಸ್ಯ ಉದಯ ಹೆಗ್ಡೆ ಅವರು ಎಂಜಿನಿಯರ್‌ ಅವರಿಗೆ ತಿಳಿಸಿದರು.

94ಸಿ:  ಕಾಲಾವಕಾಶ ವಿಸ್ತರಣೆ 
94ಸಿ ಯೋಜನೆಯಡಿ ನಾರಾವಿ ಗ್ರಾಮದಲ್ಲಿ 179 ಹಾಗೂ ಕುತ್ಲೂರು ಗ್ರಾಮದಲ್ಲಿ 118 ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಸೆಪ್ಟೆಂಬರ್‌

ಕಸ್ತೂರಿರಂಗನ್‌ ವರದಿ
ಕಸ್ತೂರಿರಂಗನ್‌ ವರದಿ ನಾರಾವಿ ಗ್ರಾಮಕ್ಕೆ ಅನ್ವಯವಾಗುತ್ತದೆಯೋ, ಅದರ ನಿಯಮಗಳು ಇಲ್ಲಿಯೂ ಜಾರಿಯಾಗುತ್ತದೆಯೇ ಎಂದು ಗ್ರಾಮಸ್ಥರು ಅರಣ್ಯ ಇಲಾಖಾಧಿಕಾರಿಯನ್ನು ಪ್ರಶ್ನಿಸಿದರು. ಇದರ ನಿರ್ಧಾರ ಸರಕಾರದ ಮಟ್ಟದಲ್ಲಿರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ  ಎಂದರು. ಕಾಡುಪ್ರಾಣಿಗಳ ಹಾವಳಿಗೆ ನಿಯಂತ್ರಣ ಹೇರುವಂತೆ ಗ್ರಾಮಸ್ಥರು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿನ ಮನೆಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಆಗ್ರಹಿಸಿದರು.

ಅಭಿವೃದ್ಧಿಗೆ ಒತ್ತು 
ಗ್ರಾಮದ ಅಭಿವೃದ್ಧಿಗೆ ರಾಜಕೀಯ ರಹಿತವಾಗಿ ಒತ್ತುನೀಡಿದ್ದೇವೆ. ಗ್ರಾಮಸಭೆಯಲ್ಲಿ ಪ್ರಶ್ನೆ ಕೇಳಲು ಗ್ರಾಮಸ್ಥರು ಹಿಂಜರಿಯಬಾರದು. ಯಾವುದೇ ಸರಕಾರಿ ಯೋಜನೆ, ಅನುದಾನದ ಬಗ್ಗೆ ಮಾಹಿತಿ ಪಡೆಯಲು ನೇರವಾಗಿ ಪಂಚಾಯತ್‌ಗೆ ಭೇಟಿ ನೀಡಬಹುದು.
– ರವೀಂದ್ರ ಪೂಜಾರಿ ಗ್ರಾ.ಪಂ. ಅಧ್ಯಕ್ಷ 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.