ಮೋದಿ ದುರಾಡಳಿತದಿಂದ ಜನ ಬೇಸತ್ತಿದ್ದಾರೆ: ಭರತ್
Team Udayavani, Apr 14, 2019, 4:00 PM IST
ಸುಳ್ಯ: ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆ ಭೇಟಿ ನೀಡುವ ವೇಳೆ ಮೋದಿ ಸರಕಾರದ ದುರಾಡಳಿತ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಇಂತಹ ಜನ ವಿರೋಧಿ ಆಡಳಿತವನ್ನು ಕಿತ್ತೂಗೆಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿ ಮೋದಿ ಸರಕಾರ ಪತನಗೊಳ್ಳುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯದರ್ಶಿ ಭರತ್ ಮುಂಡೋಡಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಟು ಬ್ಯಾನ್, ಜಿಎಸ್ಟಿ ಮೊದಲಾದ ನೀತಿ ನಿಯಮಗಳಿಂದ ಬಡವರು ಬೀದಿಗೆ ಬೀಳುವಂತಾದ ವಿಚಾರವಾಗಿ ಜನರು ಅಸಹನೆ ವ್ಯಕ್ತಪಡಿಸಿದ್ದಾರೆ. ಪ್ರಚಾರದ ಸಂದರ್ಭ ಕಾಂಗ್ರೆಸ್ ಪರ ಸ್ಪಂದನೆ ದೊರೆತಿದೆ. ದ.ಕ. ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಲಿದ್ದಾರೆ ಎಂದು ಹೇಳಿದರು.
ನಳಿನ್ ಕುಮಾರ್ ಕಟೀಲು ವಿಫಲ ಸಂಸದ ಅನ್ನುವುದು ಜನತೆಗೆ ಖಾತರಿ ಆಗಿದೆ. ಬಿಎಸ್ಸೆನ್ನೆಲ್ ದುಃಸ್ಥಿತಿ ಅದಕ್ಕೆ ಒಂದು ಉದಾಹರಣೆ. ಹತ್ತು ವರ್ಷಗಳಲ್ಲಿ ಜಿಲ್ಲೆಗೆ ಮೂಲಸೌಕರ್ಯ ಒದಗಿಸದ ನಳಿನ್ ಅವರನ್ನು ಬದಲಾಯಿಸಿ, ವಿದ್ಯಾವಂತ, ಲೋಕಸಭೆಯಲ್ಲಿ ಧ್ವನಿ ಎತ್ತಬಲ್ಲ ಸಮರ್ಥ ಅಭ್ಯರ್ಥಿ ಮಿಥುನ್ ರೈ ಅವರನ್ನು ಗೆಲ್ಲಿಸಲು ಜನರು ತೀರ್ಮಾನಿಸಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಮಾತನಾಡಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರು ಯಾರೆಂದು ಗೊತ್ತಿದ್ದರೂ ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಕಳ್ಳರಿಗೆ ರಕ್ಷಣೆ ನೀಡುವ ಈ ಪಕ್ಷದ ಧೋರಣೆ, ಭ್ರಷ್ಟಚಾರವನ್ನು ಸಮರ್ಥಿಸುವ ಮನೋಭಾವನೆಗೆ ಉದಾಹರಣೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಕೆಪಿಸಿಸಿ ಸದಸ್ಯ ಡಾ| ರಘು, ಎಸ್. ಸಂಶುದ್ದೀನ್, ಗೋಕುಲ್ದಾಸ್ ಕೆ., ಜೆಡಿಎಸ್ ಮುಖಂಡ ಜಾಕೆ ಮಾಧವ ಗೌಡ, ಜೂಲಿಯಾನಾ ಕ್ರಾಸ್ತಾ, ಓವಿನ್ ಪಿಂಟೋ, ಬೀರಾ ಮೊದೀನ್, ವಿನೂಪ್ ಮಲ್ಲಾರ, ಸತೀಶ್ ಕೆ., ಭವಾನಿಶಂಕರ ಕಲ್ಮಡ್ಕ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ