‘ಅಂಗನವಾಡಿ ಸರ್ವ ಧರ್ಮೀಯರ ದೇಗುಲ’


Team Udayavani, Dec 25, 2018, 1:15 AM IST

narikombu-24-12.jpg

ಬಂಟ್ವಾಳ: ಅಂಗನವಾಡಿ ಸರ್ವಧರ್ಮೀಯರ ಮಕ್ಕಳ ದೇಗುಲ. ನರಿಕೊಂಬು ಗ್ರಾಮ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು ದೇವಸ್ಥಾನ, ಭಜನ ಮಂದಿರಗಳು ಇರುವ ಗ್ರಾಮ. ಇಲ್ಲಿ ದೈವಿಕ ಸಂಪತ್ತು ಸಂಪನ್ನವಾಗಿದೆ. ಊರಿನ ಜನರ ಸಹಭಾಗಿತ್ವದಲ್ಲಿ ನಿರ್ಮಿಸಿದ ಇಲ್ಲಿನ ಅಂಗನವಾಡಿ ರಾಜ್ಯಕ್ಕೆ ಮಾದರಿ ಎಂದು ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು. ಅವರು ಡಿ. 24ರಂದು ನೂತನ ನರಿಕೊಂಬು ಗ್ರಾ.ಪಂ. ನವಜೀವನ ಅಂಗನವಾಡಿ ಕೇಂದ್ರವನ್ನು ಟೇಪ್‌ ಕತ್ತರಿಸಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಂಘಟಕರು ಅತ್ಯುತ್ಸಾಹದಿಂದ ಅಂಗನವಾಡಿಗೆ ಹವಾನಿಯಂತ್ರಕ ಸಹಿತ ಎಲ್ಲ ಸೌಲಭ್ಯಗಳನ್ನು ಅನುಷ್ಠಾನಿಸಲು ಸಹಕರಿಸಿದ್ದಾರೆ. ನಿಮ್ಮೆಲ್ಲರ ಶ್ರಮ ಸಾಧನೆ ಪ್ರಯತ್ನಗಳಿಗೆ ಅಭಿನಂದನೆಗಳು. ಊರಿನ ಕೆಲಸದ ಬಗ್ಗೆ ಮುಂದೆಯೂ ಜನರ ಸಹಭಾಗಿತ್ವ ಇದ್ದಾಗ ಯೋಜನೆಗಳು ಯಶಸ್ವಿಯಾಗಿ ನಡೆಯುವುದು ಎಂದು ಶ್ಲಾಘನೆ ವ್ಯಕ್ತಮಾಡಿದರು. ಸಂಸದ ನಳಿನ್‌ ಕುಮಾರ್‌ ಕಟೀಲು ಅಂಗನವಾಡಿ ಆವರಣದ ಕಾಂಕ್ರಿಟ್‌ ರಸ್ತೆಯನ್ನು ಟೇಪ್‌ ಕತ್ತರಿಸುವ ಮೂಲಕ ಉದ್ಘಾಟಿಸಿ ಲೋಪಾರ್ಪಣೆ ಮಾಡಿ ಶುಭ ಹಾರೈಸಿದರು.

ಜನತೆಯ ಸಹಭಾಗಿತ್ವದಲ್ಲಿ ನಿರ್ಮಾಣ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ನರಿಕೊಂಬು ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು ಮಾತನಾಡಿ, ಸುಮಾರು 18.50 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ಜನತೆಯ ಸಹಭಾಗಿತ್ವದಲ್ಲಿ ನಿರ್ಮಾಣ ಆಗಿದೆ. ದಾನಿಗಳ ಸಹಯೋಗದಲ್ಲಿ ಸೀಲಿಂಗ್‌ ಫ್ಯಾನ್‌, ಎ.ಸಿ. ಯಂತ್ರಗಳು, ಧ್ವಜಸ್ತಂಭ, ಕಿಟಿಕಿ ಬಾಗಿಲಿನ ಕರ್ಟನ್‌, ಟ್ಯೂಬ್‌ಲೈಟ್‌, ಎಲ್‌ಇಡಿ ಬಲ್ಬ್, ನೇತ್ರಾವತಿ ನರ್ಸರಿ ಅವರಿಂದ ಉಚಿತ ಹಸುರೀಕರಣ, ಗೋಡೆಯ ಪಟ್ಟಿ ಫಿನಿಶ್‌, ಆವರಣಗೋಡೆ, ಒಳಾಂಗಣದಲ್ಲಿ ಸೆಲ್ಫ್, ವರಾಂಡದಲ್ಲಿ ಸುವಾಸನೆ ಬೀರುವ ಹೂಗಿಡಗಳಿಂದ ಅಲಂಕೃತವಾಗಿದೆ. ಗೋಡೆಯು ಬಣ್ಣಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುವಂತೆ ಮಾಡಲಾಗಿದೆ ಎಂದರು.

1991ರಲ್ಲಿ ಇಲ್ಲಿನ ನವಜೀವನ ವ್ಯಾಯಾಮ ಶಾಲೆ ಆರಂಭವಾಗಿದ್ದು 2018 ಡಿ. 24ರಂದು ಬರೇ ಒಂದು ವರ್ಷ ಮೂರು ತಿಂಗಳಲ್ಲಿ ಎಲ್ಲ ಕೆಲಸಗಳು ನಡೆದಿದೆ. ಒಳಾಂಗಣ, ಹೊರಾಂಗಣ, ಭೋಜನಾಲಯ, ದಾಸ್ತಾನು ಕೊಠಡಿ, ಆಧುನಿಕ ಮಾದರಿ ಅಡುಗೆ ಕೋಣೆ, ಸ್ನಾನಗೃಹ, ಆಂಗ್ಲ ಮಾದರಿ ಮತ್ತು ಸ್ಥಳೀಯ ಮಾದರಿ ಶೌಚಾಲಯ ಮತ್ತಿತರ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಕಟ್ಟಡವು ಐದು ಸೆಂಟ್ಸ್‌ನಲ್ಲಿ 1,180 ಚ.ಅ. ವಿಸ್ತೀರ್ಣ ಹೊಂದಿದೆ. ಅಂಗಳಕ್ಕೆ ಸಂಪೂರ್ಣ ಇಂಟರ್‌ಲಾಕ್‌ ಅಳವಡಿಕೆ ಮಾಡಿದೆ. ಗೋಡೆಯಲ್ಲಿ ವಿವಿಧ ಅಲಂಕಾರಿಕ ಗೋಡೆ ಬರಹದ ಮೂಲಕ ಸಂದೇಶಗಳ ಭಿತ್ತನೆಗೆ ಕ್ರಮ ಕೈಗೊಂಡಿದೆ ಎಂದರು. ಜಿ.ಪಂ. ಉಪಾಧ್ಯಕ್ಷೆ  ಕಸ್ತೂರಿ ಪಂಜ, ಮಾಜಿ ಸಚಿವ ಬಿ. ರಮಾನಾಥ ರೈ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ದ.ಕ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ, ಇ.ಒ. ರಾಜಣ್ಣ ಸಭೆ ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಸದಸ್ಯೆ ಗಾಯತ್ರಿ ರವೀಂದ್ರ ಸಪಲ್ಯ, ಗ್ರಾ.ಪಂ. ಉಪಾಧ್ಯಕ್ಷೆ ರಾಜೀವಿ ಕೃಷ್ಣಪ್ಪ ಪೂಜಾರಿ, ಪಂಚಾಯತ್‌ ರಾಜ್‌ ಸ.ಕಾ.ನಿ. ಇಂಜಿನಿಯರ್‌ ರೋಹಿದಾಸ್‌, ಶ್ರೀ ಸತ್ಯದೇವತಾ ಟ್ರಸ್ಟ್‌ ಅಧ್ಯಕ್ಷ ಲೋಕೇಶ್‌ ಪಿ.ಜೆ., ಗ್ರಾ.ಪಂ. ಸದಸ್ಯರು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಮ್ಮಾನ
ಗ್ರಾ.ಪಂ. ಅಧ್ಯಕ್ಷ ಯಶೋಧರ ಕರ್ಬೆಟ್ಟು, ಹಿರಿಯರಾದ ಲಕ್ಷ್ಮಣ ಸಪಲ್ಯ, ಬಾಲವಿಕಾಸ ಸಮಿತಿ ಅಧ್ಯಕ್ಷ ರವೀಂದ್ರ ಸಪಲ್ಯ, ಪಿಡಿಒ ಶಿವಾನಂದ, ಗುತ್ತಿಗೆದಾರ ಶೈಲೇಶ್‌ ಪೂಜಾರಿ ಕುಚ್ಚಿಗುಡ್ಡೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಮೆಸ್ಕಾಂ ಸ.ಕಾ.ನಿ. ಇಂಜಿನಿಯರ್‌ ನಾರಾಯಣ ಭಟ್‌ರನ್ನು ಸಮ್ಮಾನಿಸಲಾಯಿತು. ಬಾಲ ವಿಕಾಸ ಸಮಿತಿ ಅಧ್ಯಕ್ಷ ರವೀಂದ್ರ ಸಪಲ್ಯ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾ ವಂದಿಸಿದರು. ಶಿಕ್ಷಕ ಬಿ.ರಾಮಚಂದ್ರ ರಾವ್‌ ಕಾರ್ಯಕ್ರಮ ನಿರ್ವಹಿಸಿದರು.

ಬಳಸುವಾಗ ಎಚ್ಚರ ಇರಲಿ
ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಅಂಗನವಾಡಿ ಕಟ್ಟಡಕ್ಕೆ ಹವಾನಿಯಂತ್ರಿತ ವ್ಯವಸ್ಥೆಯನ್ನು ಅಳವಡಿಸುವುದಕ್ಕೆ ಕಾನೂನು ಪ್ರಕಾರ ಅನುಮತಿ ಇಲ್ಲ. ಆದರೆ ಸಂಘಟಕರು ಉತ್ಸಾಹದಿಂದ ಮಾಡಿದ್ದಾರೆ. ಅದನ್ನು ಬಳಸುವಾಗ ಜಾಗೃತೆ ಇರಲಿ. ಅನಿವಾರ್ಯ ಸಂದರ್ಭ ಉಪಯೋಗಿಸುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಮಕ್ಕಳ ಆರೋಗ್ಯ ಮುಖ್ಯವಾಗಿದ್ದು ಅವರು ಅಂಗನವಾಡಿ ಮತ್ತು ಮುಕ್ತ ವಾತಾವರಣಕ್ಕೂ ಹೊಂದಿಕೊಳ್ಳುವುದು ಅವಶ್ಯವಾದ್ದರಿಂದ ಹೊಸತನದಲ್ಲಿ ಜಾಗೃತೆ ಬೇಕಾಗಿದೆ ಎಂದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.