ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸಂಚಾರಕ್ಕೆ ಕುತ್ತು?
ಪಾವಂಜೆ-ಪಡುಪಣಂಬೂರು ಬಿದ್ದೇಳುತ್ತಿರುವ ಸಂಚಾರಿಗಳು
Team Udayavani, Dec 2, 2022, 5:10 AM IST
ಹಳೆಯಂಗಡಿ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾವಂಜೆ ಹಾಗೂ ಪಡುಪಣಂಬೂರು ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸವಾರರ ಸಂಚಾರಕ್ಕೆ ಬಹಳಷ್ಟು ತೊಂದರೆಯಾಗುತ್ತಿದ್ದು ಪ್ರತಿದಿನ ಹತ್ತಾರು ವಾಹನಗಳ ಸವಾರರು ಬಿದ್ದು ಏಳುತ್ತಿರುವ ಘಟನೆ ನಡೆಯುತ್ತಿದ್ದು ಈ ಬಗ್ಗೆ ಸ್ಥಳೀಯವಾಗಿ ಭಾರೀ ಅಸಮಾಧಾನ ವ್ಯಕ್ತಪಡಿಸಿ ಆಕ್ರೋಶದ ಮಾತುಗಳು ಕೇಳಿ ಬಂದಿದೆ.
ಕಾರಣ ಏನು..?
ರಾಷ್ಟ್ರೀಯ ಹೆದ್ದಾರಿ 66ರ ಈ ಮೂಲ್ಕಿ ಭಾಗದ ರಸ್ತೆಯ ಪ್ರದೇಶದಲ್ಲಿ ನಿರ್ವಹಣೆ ನಡೆಸುತ್ತಿರುವ ನವಯುಗ ಸಂಸ್ಥೆಯು ರಸ್ತೆಯಲ್ಲಿ ಆಗಾಗ ಬೀಳುತ್ತಿರುವ ಹೊಂಡ ಗುಂಡಿಗಳನ್ನು ಮುಚ್ಚಲು ಹಾಗೂ ಅಲ್ಲಲ್ಲಿ ಬಿರುಕು ಬಿಟ್ಟಿರುವುದನ್ನು ದುರಸ್ತಿ ಮಾಡಲು ವಿಶೇಷ ತಂತ್ರಜ್ಞಾನದ ಮೂಲಕ ಸುಮಾರು ಮೂರು ಇಂಚು ಡಾಮರನ್ನು ಕಟ್ಟಿಂಗ್ ಮಿಷನ್ನಿನ ಮೂಲಕ ಹೆದ್ದಾರಿಯ ಒಂದು ಭಾಗದಲ್ಲಿ ಸಂಪೂರ್ಣವಾಗಿ ಸಮಾನಾಂತರವಾಗಿ ತೆಗೆದಿದ್ದು ರಸ್ತೆಯು ರಗಡಾಗಿ ನಿರ್ಮಾಣವಾಗಿದೆ. ಈ ರಸ್ತೆಯ ಮೇಲೆ ದ್ವಿಚಕ್ರ ವಾಹನಗಳ ಸಂಚಾರಿಸಿದಾಗ ಬ್ಯಾಲೆನ್ಸ್ ತಪ್ಪಿ ಅಡ್ಡ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಾಗಿ ಮಹಿಳೆಯರು ಚಲಾಯಿಸುವ ವಾಹನಗಳು ಆಯಾ ತಪ್ಪಿ ಬೀಳುತ್ತಿ ರುವುದು ಈ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ.
ಎಲ್ಲೆಲ್ಲಿ ಅಪಾಯ ಇದೆ
ರಾಷ್ಟ್ರೀಯ ಹೆದ್ದಾರಿಯ ಪಾವಂಜೆ ಸೇತುವೆಯಿಂದ ಹಳೆಯಂಗಡಿ ಮುಖ್ಯ ಜಂಕ್ಷನ್ವರೆಗೆ ಹಾಗೂ ಪಡುಪಣಂಬೂರು ಪೆಟ್ರೋಲ್ ಪಂಪ್ನಿಂದ ಕೊಲ್ನಾಡು ಕೈಗಾರಿಕ ಪ್ರಾಂಗಣದ ಜಂಕ್ಷನ್ ನವರೆಗೆ ಈ ರೀತಿಯಾಗಿ ನಿರ್ಮಾಣ ವಾಗಿದೆ. ಡಾಮರು ತೆಗೆದು ಒಂದು ವಾರವಾದರೂ ಸಹ ಮರು ಡಾಬರೀಕರಣ ನಡೆಯದೇ ಇರುವುದರಿಂದ ಜನರ ಅಸಮಾಧಾನ ಹೆಚ್ಚಾಗುತ್ತಿದೆ. ಈ ಭಾಗದ ರಸ್ತೆಯ ಕೊನೆಯ ಭಾಗದಲ್ಲಿ ಡಾಮರಿನ ಜಲ್ಲಿನ ಕಲ್ಲಿನ ಚೂರುಗಳು ಶೇಖರಣೆಯಾಗಿರುವುದರಿಂದ ದ್ವಿಚಕ್ರ ವಾಹನಗಳ ಸವಾರರು ಬದಿಯಲ್ಲಿಯೇ ಸಂಚರಿಸಿದರು ಸ್ಕಿಡ್ ಆಗುತ್ತಿದೆ. ಈ ರಸ್ತೆಯ ಬಗ್ಗೆ ತಿಳಿದವರು ಇದೀಗ ಪಾವಂಜೆಯಿಂದ ಒಳರಸ್ತೆಯಾಗಿ ಪಡುಪಣಂಬೂರು ಪಂಚಾಯತ್ನ ಮೂಲಕ ಹೊರಗೆ ಬಂದು ಹೆದ್ದಾರಿ ಯನ್ನು ಸೇರಿಕೊಂಡು ಸುತ್ತಿಬಳಸಿ ಸಂಚರಿಸುತ್ತಿದ್ದಾರೆ.
ಮಾಹಿತಿ ನೀಡಲಾಗಿದೆ
ಹೆದ್ದಾರಿಯನ್ನು ದುರಸ್ತಿಯ ನೆಪದಲ್ಲಿ ಡಾಮರನ್ನು ತೆಗೆದು ದ್ವಿಚಕ್ರ ವಾಹನ ಸವಾರರು ಬೀಳುತ್ತಿರುವ ಬಗ್ಗೆ ಈಗಾಗಲೇ ಅನೇಕರು ನನ್ನ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ತತ್ಕ್ಷಣ ಕ್ರಮ ಕೈಗೊಳ್ಳಿ ಎಂದು ನವಯುಗ ಸಂಸ್ಥೆಯ ಅಧಿಕಾರಿಗೆ ಕೂಡಲೆ ತಿಳಿಸಿದ್ದೇನೆ. ಹಳೆಯಂಗಡಿಯ ರಸ್ತೆ ಹಾಗೂ ಚರಂಡಿಯ ಬಗ್ಗೆಯೂ ಗಮನ ಸೆಳೆದಿದ್ದೇನೆ. ಒಂದೆರಡು ದಿನದಲ್ಲಿ ಸರಿಯಾಗದಿದ್ದಲ್ಲಿ ಶಾಸಕರ ಮೂಲಕ ಆಗ್ರಹಿಸುವ ಪ್ರಯತ್ನ ನಡೆಸಲಾಗುವುದು.
-ಪೂರ್ಣಿಮಾ, ಅಧ್ಯಕ್ಷರು, ಹಳೆಯಂಗಡಿ ಗ್ರಾಮ ಪಂಚಾಯತ್
ತತ್ಕ್ಷಣ ಕ್ರಮ ಕೈಗೊಳ್ಳುತ್ತೇವೆ
ಹೆದ್ದಾರಿ ಮೇಲಿನ ಹೊಂಡ ಗುಂಡಿಗಳನ್ನು ಅಲ್ಲಲ್ಲಿ ತೇಪೆ ಹಚ್ಚಿ ದುರಸ್ತಿ ಕಾರ್ಯ ನಡೆ ಸುವ ಬದಲು ನೇರವಾಗಿ ಸಂಪೂರ್ಣವಾಗಿ ಡಾಮರೀ ಕರಣ ನಡೆಸುವ ಕಾಮಗಾರಿ ಯನ್ನು ಅತಿ ಹೆಚ್ಚು ಹಾನಿ ಯಾಗುವ ಪ್ರದೇಶದ ರಸ್ತೆಯಲ್ಲಿ ಈ ರೀತಿ ಕಾಮ ಗಾರಿ ನಡೆಸುತ್ತಿದ್ದೇವೆ ಇದು ಮುಕ್ಕದಿಂದ ಪಡುಬಿದ್ರಿ ಯವರೆಗೆ ಆರಂಭದ ಹಂತ ವಾಗಿ ನಡೆಯುತ್ತಿದೆ. ದ್ವಿಚಕ್ರ ವಾಹನ ಸವಾರರಿಗೆ ತೊಂದರೆ ಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ತತ್ಕ್ಷಣ ಡಾಮರು ನಡೆಸಲು ಕ್ರಮ ಕೈಗೊಳ್ಳುತ್ತೇವೆ. ಸವಾರರು ಸಹಕರಿಸಬೇಕು.
-ಶಿವಪ್ರಸಾದ್, ಪ್ರಬಂಧಕರು, ನವಯುಗ್ ಸಂಸ್ಥೆ
– ನರೇಂದ್ರ ಕೆರೆಕಾಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್