ಪ್ರಕೃತಿ ವಿಕೋಪ ಪರಿಹಾರ ಮೊತ್ತ ಏರಿಕೆಗೆ ಮನಪಾ ಚಿಂತನೆ


Team Udayavani, Jun 29, 2017, 9:17 PM IST

Mangalore-Corporation—600.jpg

ಮಹಾನಗರ: ನಗರದಲ್ಲಿ ಪ್ರಕೃತಿ ವಿಕೋಪದಿಂದ ಸೊತ್ತುಗಳಿಗೆ ಹಾನಿಯುಂಟಾದಲ್ಲಿ ಪಾಲಿಕೆ ವತಿಯಿಂದ ನೀಡಲಾಗುವ ಪರಿಹಾರದ ಮೊತ್ತವನ್ನು ಏರಿಸಲು ಮಹಾನಗರ ಪಾಲಿಕೆ ಸಿದ್ಧತೆ ನಡೆಸಿದೆ. ಈ ಸಂಬಂಧ ಜೂ.29ರಂದು ನಡೆಯಲಿರುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಕ್ಕೆ ಅನುಮೋದನೆ ಪಡೆಯುವ ಸಾಧ್ಯತೆ ಇದೆ. ಪಾಲಿಕೆ ವ್ಯಾಪ್ತಿಯ ನಾಗರಿಕರ ಮನೆಗಳು ಪ್ರಕೃತಿ ವಿಕೋಪದಡಿ ಹಾನಿಯುಂಟಾದ ಸಂದರ್ಭದಲ್ಲಿ 5 ಸಾವಿರ ರೂ.ವನ್ನು ಪರಿಹಾರಧನವಾಗಿ ನೀಡಲಾಗುತ್ತಿತ್ತು. ಈ ಮೊತ್ತ ಯಾವುದಕ್ಕೂ ಸಾಲದು ಎನ್ನುವ ದೃಷ್ಟಿಯಿಂದ ಪರಿಹಾರ ಮೊತ್ತವನ್ನು ಹತ್ತು ಸಾವಿರ ರೂ. ಗಳಿಗೆ  ಏರಿಸುವ ಸಾಧ್ಯತೆ ಇದೆ. 

ಓಡಾಟಕ್ಕೆ ವ್ಯರ್ಥವಾಗುತ್ತಿತ್ತು ಪರಿಹಾರ ಧನ!
ಪ್ರಕೃತಿ ವಿಕೋಪ ಆರ್ಥಿಕವಾಗಿ ಹಿಂದುಳಿದವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಅವರು ಪರಿಹಾರಕ್ಕೆ ಅರ್ಜಿ ಸಲ್ಲಿಸಿ, ಹತ್ತಾರು ಬಾರಿ ಸರಕಾರಿ ಕಚೇರಿಗಳಿಗೆ ಅಲೆದಾಡಬೇಕು. ಆಗ ಪರಿಹಾರ ಧನ ಈ ಓಡಾಟದ ಖರ್ಚಿಗೂ ಸಾಕಾಗುತ್ತಿರಲಿಲ್ಲ ಎಂಬುದು ಫ‌ಲಾನುಭವಿಗಳ ಅಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಹಾರ ಧನ ಪರಿಷ್ಕರಿಸಲು ನಿರ್ಧರಿಸಲಾಗಿದೆ.

ನಲವತ್ತಾರು ಅರ್ಜಿ
2016ರಲ್ಲಿ ಪ್ರಾಕೃತಿಕ ವಿಕೋಪದಿಂದ ಸೊತ್ತುಗಳಿಗೆ ಹಾನಿಯಾಗಿದೆ ಎಂದು ಪಾಲಿಕೆಯ ಕಂದಾಯ ವಿಭಾಗಕ್ಕೆ 46 ಅರ್ಜಿಗಳು ಬಂದಿದ್ದು, ಅರ್ಹ ಫಲಾನುಭವಿಗಳಿಗೆ ವಿವಿಧ ವಿಭಾಗಗಳಲ್ಲಿ ಹಣ ಬಿಡುಗಡೆಮಾಡಲಾಗಿತ್ತು. 2017 ಜೂನ್‌ ವರೆಗೆ 10 ಅರ್ಜಿಗಳು ಬಂದಿದ್ದು, ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಇಲಾಖೆ ಅಧಿಕಾರಿಗಳು ಉದಯವಾಣಿ ಸುದಿನಕ್ಕೆ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವುದು ಹೇಗೆ?
ಮಳೆ ಅಥವಾ ವಿವಿಧ ಪ್ರಾಕೃತಿಕ ವಿಕೋಪದಿಂದ ಮನೆಗೆ ಹಾನಿ ಸಂಭವಿಸಿದರೆ ಅಂತಹವರು ಧನ ಸಹಾಯಕ್ಕಾಗಿ ಇಲಾಖೆಗೆ ಅರ್ಜಿ ಸಲ್ಲಿಸಬಹುದು. ಘಟನೆಯ ಫೋಟೋ, ಗುರುತು ಪತ್ರ, ತೆರಿಗೆ ಪಾವತಿ  ರಶೀದಿ ಪ್ರತಿ ಹಾಗೂ ಕೈಯಲ್ಲಿ ಬರೆದ ಅರ್ಜಿ ನಮೂನೆಯನ್ನು ಕಂದಾಯ ವಿಭಾಗಕ್ಕೆ ನೀಡಿದರೆ ಅಧಿಕಾರಿಗಳು ಅರ್ಜಿ ಪರಿಶೀಲಿಸಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರವನ್ನು ನೀಡುತ್ತಾರೆ. 

ಪರಿಹಾರದ ಮೊತ್ತ ಏರಿಕೆಗೆ ಮನವಿ
ಫಲಾನುಭವಿಗಳು ಪರಿಹಾರದ ಮೊತ್ತ ಏರಿಸುವಂತೆ ಪಾಲಿಕೆಯನ್ನು ಹಲವು ಬಾರಿ ಆಗ್ರಹಿಸಿದ್ದರು. ಆದರೆ ತಾಂತ್ರಿಕ ಸಮಸ್ಯೆಗಳಿಂದ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಇದೀಗ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ ಎನ್ನುವುದು ಅಧಿಕಾರಿಗಳ ಸ್ಪಷ್ಟನೆ.

ಸಭೆಯಲ್ಲಿ ಚರ್ಚಿಸಿ ತೀರ್ಮಾನ
ಮಳೆಯ ಪರಿಣಾಮ ಹಂಚಿನ ಮನೆ ಬಿದ್ದರೆ, ಹಾನಿಯಾದರೆ  ಕನಿಷ್ಠ ಪರಿಹಾರಧನ ನೀಡಲಾಗುತ್ತಿತ್ತು. ಇದನ್ನು ಏರಿಸುವ‌  ಸಂಬಂಧ ಪಾಲಿಕೆ ಸಾಮಾನ್ಯ ಸಭೆಯಲ್ಲಿ  ಚರ್ಚೆ ನಡೆಸಿ ಕ್ರಮ ಜರಗಿಸಲಾಗುವುದು.
-ಕವಿತಾ ಸನಿಲ್‌, ಮೇಯರ್‌

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.